<p><strong>ಚನ್ನರಾಯಪಟ್ಟಣ</strong>: ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಿಂಭಾಗದ 120 ವರ್ಷದ ಇತಿಹಾಸ ಹೊಂದಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 2023-24ನೇ ಶೈಕ್ಷಣಿಕ ಸಾಲಿನಿಂದ ಪಿಎಂಶ್ರೀ ಯೋಜನೆಗೆ ಆಯ್ಕೆಯಾಗಿದೆ.</p>.<p>ಪಟ್ಟಣದ ಹೃದಯ ಭಾಗದಲ್ಲಿರುವ ಈ ಶಾಲೆ 1904ರಲ್ಲಿ ಆರಂಭವಾಗಿದ್ದು, ಹಲವು ಗಣ್ಯರು ಈ ಶಾಲೆಯಲ್ಲಿ ಓದಿರುವ ಹೆಗ್ಗಳಿಕೆ ಇದೆ. 2024 -25ನೇ ಶೈಕ್ಷಣಿಕ ಸಾಲಿನಲ್ಲಿ 319 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದಾರೆ. ಕನ್ನಡದ ಮಾಧ್ಯಮದೊಂದಿಗೆ ಕಳೆದ 7 ವರ್ಷದಿಂದ ಆಂಗ್ಲ ಮಾಧ್ಯಮದ ಬೋಧನೆ ಆರಂಭಿಸಲಾಗಿದೆ. ಸ್ಮಾರ್ಟ್ ಕ್ಲಾಸ್ ಸೌಲಭ್ಯ, ವಿಶಾಲವಾದ ಆಟದ ಮೈದಾನ ಇದೆ.</p>.<p>ಶಾಲೆಯ ಒಳಗೆ ಪ್ರವೇಶಿಸುತ್ತಿದ್ದಂತೆ ಗೋಡೆಗಳಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಮತ್ತು ಹಲವು ಸಾಧಕರ ಭಾವಚಿತ್ರ, ಮತ್ತವರ ಕೊಡುಗೆ ಇರುವ ಅಂಶಗಳು ಕಾಣಸಿಗುತ್ತವೆ.</p>.<p>ಕೇಂದ್ರ ಸರ್ಕಾರದ ಪಿಎಂಶ್ರೀ ಯೋಜನೆಗೆ (ಪ್ರಧಾನಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ) ಈ ಶಾಲೆ ಆಯ್ಕೆಯಾಗಿದೆ. ಈ ಯೋಜನೆಯಡಿ ಅನುದಾನ ಬಿಡುಗಡೆ ಆಗುತ್ತಿರುವುದರಿಂದ ಹಲವು ಸೌಕರ್ಯ ನೀಡಲಾಗುತ್ತಿದೆ. ವಿಜ್ಞಾನ ಮತ್ತು ಗಣಿತ ಪ್ರಯೋಗಾಲಯ, ಗ್ರಂಥಾಲಯ, ವಾರದಲ್ಲಿ ಎರಡು ದಿನ 6 ಮತ್ತು 7ನೇ ತರಗತಿಯ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ನೀಡಲಾಗುತ್ತಿದೆ. </p>.<p>ಪ್ರಯೋಗಾಲಯದಲ್ಲಿ ವಿಜ್ಞಾನಿಗಳ ಭಾವಚಿತ್ರ ಮತ್ತು ಅವರು ಸಂಶೋಧನೆ ಮಾಡಿದ ಮಾಹಿತಿ ನೀಡಿರುವುದು, ಸುಲಭದ ಕಲಿಕೆಗೆ ಅವಕಾಶ ನೀಡುತ್ತದೆ. ಋತುಮತಿಯಾದ ಹೆಣ್ಣುಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ನೀಡಲಾಗುತ್ತಿದೆ. ಶಿಕ್ಷಕರಿಗೆ ಕಲಿಕಾ ಉಪಕರಣದ ಕಿಟ್ಗಳನ್ನು ವಿತರಿಸಲಾಗಿದೆ.</p>.<p>ಹಸಿಕಸ ಮತ್ತು ಒಣಕಸವನ್ನು ವಿಲೇವಾರಿ ಮಾಡಲು 20 ತೊಟ್ಟಿಗಳನ್ನು ಶಾಲೆಯ ಆವರಣದಲ್ಲಿ ಅಲ್ಲಲ್ಲಿ ಇಡಲಾಗಿದೆ. ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇದೆ. ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಮಾಡಿಸಲು ₹50 ಸಾವಿರ ಅನುದಾನ ಬಿಡುಗಡೆಯಾಗಿದೆ. ಜುಲೈ ಮೊದಲ ವಾರದಲ್ಲಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗುತ್ತದೆ.</p>.<p>ಮಧ್ಯಾಹ್ನದ ಬಿಸಿಯೂಟ ಯೋಜನೆಯ ಜೊತೆಗೆ ವಾರದಲ್ಲಿ ಎರಡು ದಿನ ಸಿರಿಧಾನ್ಯದಿಂದ ತಯಾರಿಸಿದ ಆಹಾರವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಇದು ಪೂರಕವಾಗಲಿದೆ. ಹೈಟೆಕ್ ಶೌಚಾಲಯ ನಿರ್ಮಾಣ ಹಂತದಲ್ಲಿದೆ.</p>.<p>ಯೋಗಾಸನದ ತರಬೇತಿಗೆ ಅನುಕೂಲ ಕಲ್ಪಿಸಲು ವಿದ್ಯಾರ್ಥಿಗಳಿಗೆ ಮ್ಯಾಟ್ಗಳನ್ನು ನೀಡಲಾಗಿದೆ. ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು ಸೇರಿ ಶಾಲಾ ದುರಸ್ತಿಗೆ ಅನುದಾನ ಬಿಡುಗಡೆಯಾಗಿದೆ.</p>.<p>ಶಾಲೆಯ ಅಭಿವೃದ್ಧಿಯ ದೃಷ್ಟಿಯಿಂದ ಪಿಎಂಶ್ರೀ ಯೋಜನೆಯಿಂದ ಹಂತಹಂತವಾಗಿ ಸಾಕಷ್ಟು ಅನುದಾನ ಹರಿದು ಬರಲಿದೆ. ಶೈಕ್ಷಣಿಕ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ.</p>.<p>ಕಲಿಕೆಯ ವಾತಾವರಣ ಚೆನ್ನಾಗಿರುವುದರಿಂದ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಪ್ರವೇಶಾತಿಯಲ್ಲಿ ಹೆಚ್ಚಳ ಆಗುತ್ತಿರುವುದು ಆಶಾದಾಯಕ ಬೆಳವಣಿಗೆ. ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕಿ ಸಭೆ ಕರೆದು ಹಿರಿಯ ವಿದ್ಯಾರ್ಥಿಗಳ ಸಂಘವನ್ನು ಅಸ್ತಿತ್ವಕ್ಕೆ ತಂದು ಶಾಲೆಯ ಪ್ರಗತಿಗೆ ಅವರ ಸಹಕಾರ ಕೋರಲಾಗುವುದು.</p>.<p>ಈ ಶಾಲೆಯಲ್ಲಿ ಪಿಎಂಶ್ರೀ ಬಾಲವಾಟಿಕ (ಮಕ್ಕಳಮನೆ) ಇದೆ. 28 ಮಕ್ಕಳು ಕಲಿಯುತ್ತಿದ್ದಾರೆ. ಕಲಿಕೆಯ ದೃಷ್ಟಿಯಿಂದ ಗೋಡೆಗಳ ಮೇಲೆ ಅಂದವಾಗಿ ಚಿತ್ರಗಳನ್ನು ರಚಿಸಲಾಗಿದೆ. </p>.<p>ರಾಜ್ಯ, ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಿರುವ ಕ್ರೀಡಾಪಟುಗಳು ಮತ್ತು ವಿಜ್ಞಾನಿಗಳ ಭಾವಚಿತ್ರವನ್ನು ಶಾಲೆಯ ಗೋಡೆಗಳಲ್ಲಿ ಅಳವಡಿಸಲಾಗುವುದು. ಇದರಿಂದ ಮಕ್ಕಳ ಕಲಿಕೆಗೆ ಸಹಕಾರಿಯಾಗಲಿದೆ ಎನ್ನುತ್ತಾರೆ ಮುಖ್ಯ ಶಿಕ್ಷಕ ಡಿ.ಜಿ. ಪ್ರಕಾಶ್.</p>.<p> ವಾರದಲ್ಲಿ ಎರಡು ದಿನ ಸಿರಿಧ್ಯಾನದ ಆಹಾರ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ</p>.<p><strong>ಶಾಲೆಗೆ ಶಾಸಕ ಸಿ.ಎನ್. ಬಾಲಕೃಷ್ಣ ವೈಯಕ್ತಿಕವಾಗಿ 50 ಡೆಸ್ಕ್ಗಳನ್ನು ನೀಡಿದ್ದಾರೆ. ಹೆಚ್ಚುವರಿಯಾಗಿ 25 ಡೆಸ್ಕ್ ನೀಡಲು ಒಪ್ಪಿದ್ದಾರೆ. ಬಿಸಿಯೂಟ ಬಡಿಸಲು 2 ಟ್ರಾಲಿಗಳನ್ನು ನೀಡಿದ್ದಾರೆ </strong></p><p><strong>-ಡಿ.ಜಿ. ಪ್ರಕಾಶ್ ಮುಖ್ಯ ಶಿಕ್ಷಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚನ್ನರಾಯಪಟ್ಟಣ</strong></p>.<p><strong>ಶಿಕ್ಷಣದ ಜೊತೆಗೆ ಯೋಗಾಸನ ಕರಾಟೆ ತರಬೇತಿ ಮತ್ತು ಪೌಷ್ಟಿಕಾಂಶ ಹೆಚ್ಚಿಸಲು ಸಿರಿಧ್ಯಾನ ನೀಡಲಾಗುತ್ತದೆ. ಉತ್ತಮ ಪ್ರಯೋಗಾಲಯ ಇದೆ. ಪಠ್ಯ ಪಠ್ಯೇತರ ಚಟುವಟಿಕೆಗೆ ಶಿಕ್ಷಕರು ಪೋತ್ಸಾಹ ನೀಡುತ್ತಾರೆ </strong></p><p><strong>- ಸಿಮ್ರಾನ್ 7ನೇ ತರಗತಿ ವಿದ್ಯಾರ್ಥಿ</strong></p>.<p><strong>ಕೇಂದ್ರ ಸರ್ಕಾರದ ಪಿಎಂಶ್ರೀ ಯೋಜನೆಯಡಿ ಹಿರೀಸಾವೆ ಶಾಸಕರ ಮಾದರಿ ಶಾಲೆ ಆಯ್ಕೆಯಾಗಿದೆ. ಚನ್ನರಾಯಪಟ್ಟಣದ ಪೇಟೆ ಆನೆಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅನುಮೋದನೆ ಪಡೆದಿದೆ </strong></p><p><strong>- ಎಚ್.ಎನ್. ದೀಪಾ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನರಾಯಪಟ್ಟಣ</strong></p>.<p>ಶತಮಾನೋತ್ಸವ ಆಚರಣೆ ಖಾಸಗಿ ಶಾಲೆಗೆ ಪೈಪೋಟಿ ನೀಡುವಂತೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ತನ್ನತನವನ್ನು ಉಳಿಸಿಕೊಂಡಿರುವ ಶಾಲೆಗೆ ಈಗ 120ವರ್ಷ ಸಂದಿದೆ. ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಬೇಕು ಎಂಬುದು ವಿದ್ಯಾರ್ಥಿಗಳ ಆಶಯ. ಈ ಹಿಂದೆ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಮಾತುಕತೆ ನಡೆಯಿತಾದರೂ ಅನುಷ್ಠಾನಕ್ಕೆ ಬರಲಿಲ್ಲ. ಜನಪ್ರತಿನಿಧಿಗಳು ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಶತಮಾನೋತ್ಸವ ಆಚರಿಸಿದರೆ ಶಾಲೆಯ ಪರಿಚಯ ಮತ್ತಷ್ಟು ಹೆಚ್ಚಾಗುವುದರಲ್ಲಿ ಸಂಶಯವಿಲ್ಲ ಎನ್ನುತ್ತಾರೆ ಹಿರಿಯ ವಿದ್ಯಾರ್ಥಿಗಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ</strong>: ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಿಂಭಾಗದ 120 ವರ್ಷದ ಇತಿಹಾಸ ಹೊಂದಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 2023-24ನೇ ಶೈಕ್ಷಣಿಕ ಸಾಲಿನಿಂದ ಪಿಎಂಶ್ರೀ ಯೋಜನೆಗೆ ಆಯ್ಕೆಯಾಗಿದೆ.</p>.<p>ಪಟ್ಟಣದ ಹೃದಯ ಭಾಗದಲ್ಲಿರುವ ಈ ಶಾಲೆ 1904ರಲ್ಲಿ ಆರಂಭವಾಗಿದ್ದು, ಹಲವು ಗಣ್ಯರು ಈ ಶಾಲೆಯಲ್ಲಿ ಓದಿರುವ ಹೆಗ್ಗಳಿಕೆ ಇದೆ. 2024 -25ನೇ ಶೈಕ್ಷಣಿಕ ಸಾಲಿನಲ್ಲಿ 319 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದಾರೆ. ಕನ್ನಡದ ಮಾಧ್ಯಮದೊಂದಿಗೆ ಕಳೆದ 7 ವರ್ಷದಿಂದ ಆಂಗ್ಲ ಮಾಧ್ಯಮದ ಬೋಧನೆ ಆರಂಭಿಸಲಾಗಿದೆ. ಸ್ಮಾರ್ಟ್ ಕ್ಲಾಸ್ ಸೌಲಭ್ಯ, ವಿಶಾಲವಾದ ಆಟದ ಮೈದಾನ ಇದೆ.</p>.<p>ಶಾಲೆಯ ಒಳಗೆ ಪ್ರವೇಶಿಸುತ್ತಿದ್ದಂತೆ ಗೋಡೆಗಳಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಮತ್ತು ಹಲವು ಸಾಧಕರ ಭಾವಚಿತ್ರ, ಮತ್ತವರ ಕೊಡುಗೆ ಇರುವ ಅಂಶಗಳು ಕಾಣಸಿಗುತ್ತವೆ.</p>.<p>ಕೇಂದ್ರ ಸರ್ಕಾರದ ಪಿಎಂಶ್ರೀ ಯೋಜನೆಗೆ (ಪ್ರಧಾನಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ) ಈ ಶಾಲೆ ಆಯ್ಕೆಯಾಗಿದೆ. ಈ ಯೋಜನೆಯಡಿ ಅನುದಾನ ಬಿಡುಗಡೆ ಆಗುತ್ತಿರುವುದರಿಂದ ಹಲವು ಸೌಕರ್ಯ ನೀಡಲಾಗುತ್ತಿದೆ. ವಿಜ್ಞಾನ ಮತ್ತು ಗಣಿತ ಪ್ರಯೋಗಾಲಯ, ಗ್ರಂಥಾಲಯ, ವಾರದಲ್ಲಿ ಎರಡು ದಿನ 6 ಮತ್ತು 7ನೇ ತರಗತಿಯ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ನೀಡಲಾಗುತ್ತಿದೆ. </p>.<p>ಪ್ರಯೋಗಾಲಯದಲ್ಲಿ ವಿಜ್ಞಾನಿಗಳ ಭಾವಚಿತ್ರ ಮತ್ತು ಅವರು ಸಂಶೋಧನೆ ಮಾಡಿದ ಮಾಹಿತಿ ನೀಡಿರುವುದು, ಸುಲಭದ ಕಲಿಕೆಗೆ ಅವಕಾಶ ನೀಡುತ್ತದೆ. ಋತುಮತಿಯಾದ ಹೆಣ್ಣುಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ನೀಡಲಾಗುತ್ತಿದೆ. ಶಿಕ್ಷಕರಿಗೆ ಕಲಿಕಾ ಉಪಕರಣದ ಕಿಟ್ಗಳನ್ನು ವಿತರಿಸಲಾಗಿದೆ.</p>.<p>ಹಸಿಕಸ ಮತ್ತು ಒಣಕಸವನ್ನು ವಿಲೇವಾರಿ ಮಾಡಲು 20 ತೊಟ್ಟಿಗಳನ್ನು ಶಾಲೆಯ ಆವರಣದಲ್ಲಿ ಅಲ್ಲಲ್ಲಿ ಇಡಲಾಗಿದೆ. ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇದೆ. ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಮಾಡಿಸಲು ₹50 ಸಾವಿರ ಅನುದಾನ ಬಿಡುಗಡೆಯಾಗಿದೆ. ಜುಲೈ ಮೊದಲ ವಾರದಲ್ಲಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗುತ್ತದೆ.</p>.<p>ಮಧ್ಯಾಹ್ನದ ಬಿಸಿಯೂಟ ಯೋಜನೆಯ ಜೊತೆಗೆ ವಾರದಲ್ಲಿ ಎರಡು ದಿನ ಸಿರಿಧಾನ್ಯದಿಂದ ತಯಾರಿಸಿದ ಆಹಾರವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಇದು ಪೂರಕವಾಗಲಿದೆ. ಹೈಟೆಕ್ ಶೌಚಾಲಯ ನಿರ್ಮಾಣ ಹಂತದಲ್ಲಿದೆ.</p>.<p>ಯೋಗಾಸನದ ತರಬೇತಿಗೆ ಅನುಕೂಲ ಕಲ್ಪಿಸಲು ವಿದ್ಯಾರ್ಥಿಗಳಿಗೆ ಮ್ಯಾಟ್ಗಳನ್ನು ನೀಡಲಾಗಿದೆ. ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು ಸೇರಿ ಶಾಲಾ ದುರಸ್ತಿಗೆ ಅನುದಾನ ಬಿಡುಗಡೆಯಾಗಿದೆ.</p>.<p>ಶಾಲೆಯ ಅಭಿವೃದ್ಧಿಯ ದೃಷ್ಟಿಯಿಂದ ಪಿಎಂಶ್ರೀ ಯೋಜನೆಯಿಂದ ಹಂತಹಂತವಾಗಿ ಸಾಕಷ್ಟು ಅನುದಾನ ಹರಿದು ಬರಲಿದೆ. ಶೈಕ್ಷಣಿಕ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ.</p>.<p>ಕಲಿಕೆಯ ವಾತಾವರಣ ಚೆನ್ನಾಗಿರುವುದರಿಂದ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಪ್ರವೇಶಾತಿಯಲ್ಲಿ ಹೆಚ್ಚಳ ಆಗುತ್ತಿರುವುದು ಆಶಾದಾಯಕ ಬೆಳವಣಿಗೆ. ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕಿ ಸಭೆ ಕರೆದು ಹಿರಿಯ ವಿದ್ಯಾರ್ಥಿಗಳ ಸಂಘವನ್ನು ಅಸ್ತಿತ್ವಕ್ಕೆ ತಂದು ಶಾಲೆಯ ಪ್ರಗತಿಗೆ ಅವರ ಸಹಕಾರ ಕೋರಲಾಗುವುದು.</p>.<p>ಈ ಶಾಲೆಯಲ್ಲಿ ಪಿಎಂಶ್ರೀ ಬಾಲವಾಟಿಕ (ಮಕ್ಕಳಮನೆ) ಇದೆ. 28 ಮಕ್ಕಳು ಕಲಿಯುತ್ತಿದ್ದಾರೆ. ಕಲಿಕೆಯ ದೃಷ್ಟಿಯಿಂದ ಗೋಡೆಗಳ ಮೇಲೆ ಅಂದವಾಗಿ ಚಿತ್ರಗಳನ್ನು ರಚಿಸಲಾಗಿದೆ. </p>.<p>ರಾಜ್ಯ, ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಿರುವ ಕ್ರೀಡಾಪಟುಗಳು ಮತ್ತು ವಿಜ್ಞಾನಿಗಳ ಭಾವಚಿತ್ರವನ್ನು ಶಾಲೆಯ ಗೋಡೆಗಳಲ್ಲಿ ಅಳವಡಿಸಲಾಗುವುದು. ಇದರಿಂದ ಮಕ್ಕಳ ಕಲಿಕೆಗೆ ಸಹಕಾರಿಯಾಗಲಿದೆ ಎನ್ನುತ್ತಾರೆ ಮುಖ್ಯ ಶಿಕ್ಷಕ ಡಿ.ಜಿ. ಪ್ರಕಾಶ್.</p>.<p> ವಾರದಲ್ಲಿ ಎರಡು ದಿನ ಸಿರಿಧ್ಯಾನದ ಆಹಾರ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ</p>.<p><strong>ಶಾಲೆಗೆ ಶಾಸಕ ಸಿ.ಎನ್. ಬಾಲಕೃಷ್ಣ ವೈಯಕ್ತಿಕವಾಗಿ 50 ಡೆಸ್ಕ್ಗಳನ್ನು ನೀಡಿದ್ದಾರೆ. ಹೆಚ್ಚುವರಿಯಾಗಿ 25 ಡೆಸ್ಕ್ ನೀಡಲು ಒಪ್ಪಿದ್ದಾರೆ. ಬಿಸಿಯೂಟ ಬಡಿಸಲು 2 ಟ್ರಾಲಿಗಳನ್ನು ನೀಡಿದ್ದಾರೆ </strong></p><p><strong>-ಡಿ.ಜಿ. ಪ್ರಕಾಶ್ ಮುಖ್ಯ ಶಿಕ್ಷಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚನ್ನರಾಯಪಟ್ಟಣ</strong></p>.<p><strong>ಶಿಕ್ಷಣದ ಜೊತೆಗೆ ಯೋಗಾಸನ ಕರಾಟೆ ತರಬೇತಿ ಮತ್ತು ಪೌಷ್ಟಿಕಾಂಶ ಹೆಚ್ಚಿಸಲು ಸಿರಿಧ್ಯಾನ ನೀಡಲಾಗುತ್ತದೆ. ಉತ್ತಮ ಪ್ರಯೋಗಾಲಯ ಇದೆ. ಪಠ್ಯ ಪಠ್ಯೇತರ ಚಟುವಟಿಕೆಗೆ ಶಿಕ್ಷಕರು ಪೋತ್ಸಾಹ ನೀಡುತ್ತಾರೆ </strong></p><p><strong>- ಸಿಮ್ರಾನ್ 7ನೇ ತರಗತಿ ವಿದ್ಯಾರ್ಥಿ</strong></p>.<p><strong>ಕೇಂದ್ರ ಸರ್ಕಾರದ ಪಿಎಂಶ್ರೀ ಯೋಜನೆಯಡಿ ಹಿರೀಸಾವೆ ಶಾಸಕರ ಮಾದರಿ ಶಾಲೆ ಆಯ್ಕೆಯಾಗಿದೆ. ಚನ್ನರಾಯಪಟ್ಟಣದ ಪೇಟೆ ಆನೆಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅನುಮೋದನೆ ಪಡೆದಿದೆ </strong></p><p><strong>- ಎಚ್.ಎನ್. ದೀಪಾ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನರಾಯಪಟ್ಟಣ</strong></p>.<p>ಶತಮಾನೋತ್ಸವ ಆಚರಣೆ ಖಾಸಗಿ ಶಾಲೆಗೆ ಪೈಪೋಟಿ ನೀಡುವಂತೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ತನ್ನತನವನ್ನು ಉಳಿಸಿಕೊಂಡಿರುವ ಶಾಲೆಗೆ ಈಗ 120ವರ್ಷ ಸಂದಿದೆ. ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಬೇಕು ಎಂಬುದು ವಿದ್ಯಾರ್ಥಿಗಳ ಆಶಯ. ಈ ಹಿಂದೆ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಮಾತುಕತೆ ನಡೆಯಿತಾದರೂ ಅನುಷ್ಠಾನಕ್ಕೆ ಬರಲಿಲ್ಲ. ಜನಪ್ರತಿನಿಧಿಗಳು ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಶತಮಾನೋತ್ಸವ ಆಚರಿಸಿದರೆ ಶಾಲೆಯ ಪರಿಚಯ ಮತ್ತಷ್ಟು ಹೆಚ್ಚಾಗುವುದರಲ್ಲಿ ಸಂಶಯವಿಲ್ಲ ಎನ್ನುತ್ತಾರೆ ಹಿರಿಯ ವಿದ್ಯಾರ್ಥಿಗಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>