ನವದೆಹಲಿ/ಇಸ್ಲಾಮಾಬಾದ್: ರಾಜತಾಂತ್ರಿಕ ಅಧಿಕಾರಿಗಳನ್ನು ನಡೆಸಿಕೊಳ್ಳುವ ಕುರಿತಾದ ಎಲ್ಲಾ ವಿವಾದಗಳನ್ನು ಮಾತುಕತೆ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಭಾರತ ಮತ್ತು ಪಾಕಿಸ್ತಾನ ಒಪ್ಪಿಕೊಂಡಿವೆ.
ಎರಡೂ ಕಡೆಯ ರಾಜತಾಂತ್ರಿಕ ಅಧಿಕಾರಿಗಳು ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಉಭಯ ದೇಶಗಳು ಹೇಳಿಕೆ– ಪ್ರತಿ ಹೇಳಿಕೆ ನೀಡಿದ್ದ ನಂತರದ ಬೆಳವಣಿಗೆಯಲ್ಲಿ ಈ ಒಪ್ಪಂದ ಆಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.