<p><strong>ಶ್ರವಣಬೆಳಗೊಳ</strong>: ಪ್ರತಿನಿತ್ಯ ಸಮಯಾವಕಾಶ ಮಾಡಿಕೊಂಡು ಮಕ್ಕಳು ಆಟಗಳನ್ನು ಆಡುವುದರಿಂದ ಮನಸ್ಸಿಗೆ ಉಲ್ಲಾಸ ಸಿಗುತ್ತದೆ. ಆರೋಗ್ಯವೂ ಉತ್ತಮವಾಗಿರುತ್ತದೆ ಎಂದು ಮುಖ್ಯ ಶಿಕ್ಷಕಿ ಸರೋಜಾ ಶೆಟ್ಟಿ ಬುಧವಾರ ಹೇಳಿದರು.</p>.<p>ಪಟ್ಟಣದ ಶ್ರೀ ಅಂಬಿಕಾ ವಿದ್ಯಾಲಯದ ಆವರಣದಲ್ಲಿ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಆಟದ ದಿನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಶಿಕ್ಷಣ ಪಡೆಯುವುದರ ಜತೆಯಲ್ಲಿಯೇ ಕ್ರೀಡೆಯಲ್ಲಿಯೂ ಭಾಗವಹಿಸುವುದರಿಂದ ಭವಿಷ್ಯದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಾಗಿ, ರಾಜ್ಯ, ದೇಶವನ್ನು ಪ್ರತಿನಿಧಿಸುವ ಸುವರ್ಣಾವಕಾಶಗಳು ಸಿಗುತ್ತವೆ ಎಂದು ಮಕ್ಕಳನ್ನು ಹುರಿದುಂಬಿಸಿದರು.</p>.<p>ಅಂತರರಾಷ್ಟ್ರೀಯ ಆಟದ ನಿಮಿತ್ತ ಮಕ್ಕಳು ಬಣ್ಣದ ಉಡುಪುಗಳನ್ನು ಧರಿಸಿಕೊಂಡು ಬಂದಿದ್ದು ಗಮನ ಸೆಳೆಯಿತು. </p>.<p>ಮಕ್ಕಳು ಆಟದ ಮೈದಾನದಲ್ಲಿ ಏರೋಬಿಕ್, ವಾಲಿಬಾಲ್, ಕಬಡ್ಡಿ, ಇನ್ನಿತರ ಆಟಗಳನ್ನು ಆಡಿ ಖುಷಿಪಟ್ಟರು. ಶಿಕ್ಷಕರಾದ ಬಾಹುಬಲಿ ಜೆ.ಎಸ್.ಪದ್ಮರಾಜ್, ಕಾವ್ಯಶ್ರೀ ಸಿ.ಆರ್, ಮಮತಾ, ಆಶಾರಾಣಿ, ದಿವ್ಯ, ಪೂರ್ಣಿಮಾ, ಶ್ರೀಧರ್, ಭೂಮಿಕಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರವಣಬೆಳಗೊಳ</strong>: ಪ್ರತಿನಿತ್ಯ ಸಮಯಾವಕಾಶ ಮಾಡಿಕೊಂಡು ಮಕ್ಕಳು ಆಟಗಳನ್ನು ಆಡುವುದರಿಂದ ಮನಸ್ಸಿಗೆ ಉಲ್ಲಾಸ ಸಿಗುತ್ತದೆ. ಆರೋಗ್ಯವೂ ಉತ್ತಮವಾಗಿರುತ್ತದೆ ಎಂದು ಮುಖ್ಯ ಶಿಕ್ಷಕಿ ಸರೋಜಾ ಶೆಟ್ಟಿ ಬುಧವಾರ ಹೇಳಿದರು.</p>.<p>ಪಟ್ಟಣದ ಶ್ರೀ ಅಂಬಿಕಾ ವಿದ್ಯಾಲಯದ ಆವರಣದಲ್ಲಿ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಆಟದ ದಿನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಶಿಕ್ಷಣ ಪಡೆಯುವುದರ ಜತೆಯಲ್ಲಿಯೇ ಕ್ರೀಡೆಯಲ್ಲಿಯೂ ಭಾಗವಹಿಸುವುದರಿಂದ ಭವಿಷ್ಯದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಾಗಿ, ರಾಜ್ಯ, ದೇಶವನ್ನು ಪ್ರತಿನಿಧಿಸುವ ಸುವರ್ಣಾವಕಾಶಗಳು ಸಿಗುತ್ತವೆ ಎಂದು ಮಕ್ಕಳನ್ನು ಹುರಿದುಂಬಿಸಿದರು.</p>.<p>ಅಂತರರಾಷ್ಟ್ರೀಯ ಆಟದ ನಿಮಿತ್ತ ಮಕ್ಕಳು ಬಣ್ಣದ ಉಡುಪುಗಳನ್ನು ಧರಿಸಿಕೊಂಡು ಬಂದಿದ್ದು ಗಮನ ಸೆಳೆಯಿತು. </p>.<p>ಮಕ್ಕಳು ಆಟದ ಮೈದಾನದಲ್ಲಿ ಏರೋಬಿಕ್, ವಾಲಿಬಾಲ್, ಕಬಡ್ಡಿ, ಇನ್ನಿತರ ಆಟಗಳನ್ನು ಆಡಿ ಖುಷಿಪಟ್ಟರು. ಶಿಕ್ಷಕರಾದ ಬಾಹುಬಲಿ ಜೆ.ಎಸ್.ಪದ್ಮರಾಜ್, ಕಾವ್ಯಶ್ರೀ ಸಿ.ಆರ್, ಮಮತಾ, ಆಶಾರಾಣಿ, ದಿವ್ಯ, ಪೂರ್ಣಿಮಾ, ಶ್ರೀಧರ್, ಭೂಮಿಕಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>