<p><strong>ಅರಕಲಗೂಡು: </strong>‘ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಸರ್ಕಾರಿ ನೌಕರರಿಗೆ ಕ್ರೀಡಾಕೂಟಗಳು ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಿವೆ’ ಎಂದು ಮುಖಂಡ ನರಸೇಗೌಡ ತಿಳಿಸಿದರು.</p>.<p>ಪಟ್ಟಣದಲ್ಲಿ ಶನಿವಾರ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಕೂಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿರುವ ಕ್ರೀಡಾಪಟುಗಳಿಗೆ ಟೀ ಶರ್ಟ್ ವಿತರಿಸಿ ಮಾತನಾಡಿದರು.</p>.<p>ತಾಲ್ಲೂಕಿನ 43 ನೌಕರರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ಶ್ಲಾಘನೀಯ. ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲೂ ಭಾಗವಹಿಸಿ ಪ್ರಶಸ್ತಿ ವಿಜೇತರಾಗಿ ತಾಲ್ಲೂಕಿಗೆ ಕೀರ್ತಿ ತಂದರೆ ಅಂತಹ ನೌಕರರಿಗೆ ವೈಯಕ್ತಿಕವಾಗಿ ವಿಶೇಷ ಉಡುಗೊರೆ ನೀಡಿ ಗೌರವಿಸುವುದಾಗಿ ತಿಳಿಸಿದರು.</p>.<p>ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪುಟ್ಟರಾಜ್ ಮಾತನಾಡಿ, ‘ತಾಲ್ಲೂಕಿನ ನೌಕರರು ಪ್ರತಿ ವರ್ಷ ಒಂದಲ್ಲ ಒಂದು ಪ್ರಶಸ್ತಿಯನ್ನು ತಾಲ್ಲೂಕಿಗೆ ತಂದುಕೊಂಡುತ್ತಿದ್ದರು. ಈ ಬಾರಿ ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಹೆಚ್ಚಿನ ಪ್ರಶಸ್ತಿ ಪಡೆದು ತಾಲ್ಲೂಕಿನ ಗೌರವ ಹೆಚ್ಚಿಸುವಂತೆ ಹಾರೈಸಿ, ಪತ್ರಿವರ್ಷದಂತೆ ಈ ಸಾಲಿನಲ್ಲಿ ಸಮಾಜ ಸೇವಕ ಗಾಂಧಿನಗರ ದಿವಾಕರ್ ಅವರು ಕ್ರೀಡಾಪಟುಗಳಿಗೆ ಟೀ ಶರ್ಟ್ ಕೊಡುಗೆಯಾಗಿ ನೀಡಿದ್ದಾರೆ’ ಎಂದರು.</p>.<p>ಮುಖಂಡ ಶಂಭುನಾಥಪುರ ಕೃಷ್ಣೇಗೌಡ, ಮಹೇಶ್ ಬೆಟ್ಟದಹಳ್ಳಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಕಲಗೂಡು: </strong>‘ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಸರ್ಕಾರಿ ನೌಕರರಿಗೆ ಕ್ರೀಡಾಕೂಟಗಳು ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಿವೆ’ ಎಂದು ಮುಖಂಡ ನರಸೇಗೌಡ ತಿಳಿಸಿದರು.</p>.<p>ಪಟ್ಟಣದಲ್ಲಿ ಶನಿವಾರ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಕೂಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿರುವ ಕ್ರೀಡಾಪಟುಗಳಿಗೆ ಟೀ ಶರ್ಟ್ ವಿತರಿಸಿ ಮಾತನಾಡಿದರು.</p>.<p>ತಾಲ್ಲೂಕಿನ 43 ನೌಕರರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ಶ್ಲಾಘನೀಯ. ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲೂ ಭಾಗವಹಿಸಿ ಪ್ರಶಸ್ತಿ ವಿಜೇತರಾಗಿ ತಾಲ್ಲೂಕಿಗೆ ಕೀರ್ತಿ ತಂದರೆ ಅಂತಹ ನೌಕರರಿಗೆ ವೈಯಕ್ತಿಕವಾಗಿ ವಿಶೇಷ ಉಡುಗೊರೆ ನೀಡಿ ಗೌರವಿಸುವುದಾಗಿ ತಿಳಿಸಿದರು.</p>.<p>ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪುಟ್ಟರಾಜ್ ಮಾತನಾಡಿ, ‘ತಾಲ್ಲೂಕಿನ ನೌಕರರು ಪ್ರತಿ ವರ್ಷ ಒಂದಲ್ಲ ಒಂದು ಪ್ರಶಸ್ತಿಯನ್ನು ತಾಲ್ಲೂಕಿಗೆ ತಂದುಕೊಂಡುತ್ತಿದ್ದರು. ಈ ಬಾರಿ ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಹೆಚ್ಚಿನ ಪ್ರಶಸ್ತಿ ಪಡೆದು ತಾಲ್ಲೂಕಿನ ಗೌರವ ಹೆಚ್ಚಿಸುವಂತೆ ಹಾರೈಸಿ, ಪತ್ರಿವರ್ಷದಂತೆ ಈ ಸಾಲಿನಲ್ಲಿ ಸಮಾಜ ಸೇವಕ ಗಾಂಧಿನಗರ ದಿವಾಕರ್ ಅವರು ಕ್ರೀಡಾಪಟುಗಳಿಗೆ ಟೀ ಶರ್ಟ್ ಕೊಡುಗೆಯಾಗಿ ನೀಡಿದ್ದಾರೆ’ ಎಂದರು.</p>.<p>ಮುಖಂಡ ಶಂಭುನಾಥಪುರ ಕೃಷ್ಣೇಗೌಡ, ಮಹೇಶ್ ಬೆಟ್ಟದಹಳ್ಳಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>