ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಕ್ರೀಡೆ ಶಿಸ್ತನ್ನು ರೂಢಿಸಿಕೊಳ್ಳಲು ಸಹಕಾರಿ. ಅಲ್ಲದೆ ಆರೋಗ್ಯವನ್ನು ಕೂಡ ವೃದ್ಧಿಸುತ್ತದೆ. ಪೊಲೀಸ್ ಸಿಬ್ಬಂದಿ ಅತ್ಯಂತ ಒತ್ತಡದಲ್ಲಿ ನಿತ್ಯ ಕಾರ್ಯ ನಿರ್ವಹಿಸಬೇಕು. ಒತ್ತಡದ ನಿವಾರಣೆಗೆ ಮತ್ತು ಮನಸ್ಸಿನ ಶುದ್ಧಿಕರಣಕ್ಕೆ ಕ್ರೀಡೆ ಸಹಕಾರಿ’ ಎಂದರು.