ಈ ಸಂಬಂಧ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರಿಗೆ ಮನವಿ ಸಲ್ಲಿಸಿದ ಗ್ರಾಮಸ್ಥರು, ‘ ಗ್ರಾಮದ ಸರ್ವೆ ನಂಬರ್ 180 ಮತ್ತು ಬೈರಾಪುರ ಸರ್ವೆ ನಂ. 21 ರಲ್ಲಿ ಕಲ್ಲು ಗಣಿಗಾರಿಕೆ ಮತ್ತು ಕ್ರಷರ್ ನಡೆಸಲಾಗುತ್ತಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಪಂಚಾಯಿತಿಗೆ ಕಲ್ಲು ಗಣಿಗಾರಿಕೆ ನಡೆಸಲು ನಿರಾಕ್ಷೇಪಣಾ ಪತ್ರ ನೀಡದಂತೆ ಅರಕೆರೆ, ಕೆಂಚೇನಹಳ್ಳಿ, ಹೊಸಹಟ್ಟಿ, ಕೋರನಹಳ್ಳಿ ಕೊಪ್ಪಲು, ಬೆಳುವಳ್ಳಿ, ಕೋಳಗುಂದ ಗ್ರಾಮಸ್ಥರು ಮನವಿ ಸಲ್ಲಿಸಿದ್ದರೂ ನೀಡಲಾಗಿದೆ. ಇದರಿಂದ ಜನ, ಜಾನುವಾರುಗಳಿಗೆ ನೆಮ್ಮದಿ ಇಲ್ಲದಂತಾಗಿದೆ’ ಎಂದು ಅಳಲು ತೋಡಿಕೊಂಡರು.