<p><strong>ಹಾಸನ:</strong> ಸಮಾಜದ ಅಂಕುಡೊಂಕುಗಳನ್ನು ತಿದ್ದಲು ಹೋರಾಟ ಮಾಡಿ ಮಾದರಿಯಾಗಿರುವ ಶ್ರೀಕೃಷ್ಣ, ಸ್ನೇಹ, ಪ್ರೇಮದ ಪ್ರತೀಕ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು ಹೇಳಿದರು.</p>.<p>ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಶನಿವಾರ ಆಯೋಜಿಸಿದ್ದ ನುಲಿಯ ಚಂದಯ್ಯ ಜಯಂತಿ ಮತ್ತು ಶ್ರೀ ಕೃಷ್ಣ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶ್ರೀಕೃಷ್ಣನು ಸಾಮಾನ್ಯನಾಗಿ ಜನಿಸಿ, ಅಸಾಮಾನ್ಯವಾದ ಸಾಧನೆ ಮಾಡಿದ್ದಾನೆ. ಒಬ್ಬ ಮನುಷ್ಯ ಅನುಭವಿಸುವ ಪ್ರತಿಯೊಂದು ಕಷ್ಟಗಳನ್ನು, ಪ್ರತಿಯೊಂದು ಹಂತದಲ್ಲಿ ಅನುಭವಿಸಿ ಇತರರಿಗೆ ಮಾರ್ಗದರ್ಶಕರಾಗಿದ್ದಾರೆ ಎಂದರು.</p>.<p>ಜವೇನಹಳ್ಳಿ ಮಠದ ಸಂಗಮೇಶ್ವರ ಸ್ವಾಮೀಜಿ ಮಾತನಾಡಿ, 12ನೇ ಶತಮಾನದಲ್ಲಿ ಮಿಂಚಿ ಮರೆಯಾದವರು ನುಲಿಯ ಚಂದಯ್ಯ. ಇವರು ಶಿವನೊಂದಿಗೆ ದಿಟ್ಟತನದಿಂದ ಅನುಸಂಧಾನ ಮಾಡಿಕೊಂಡವರು ಎಂದು ತಿಳಿಸಿದರು.</p>.<p>ಹೊಳೆನರಸೀಪುರ ಬಿ.ಆರ್.ಸಿ ಕೇಂದ್ರದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಂ.ಜಿ. ಪರಮೇಶ್ ಉಪನ್ಯಾಸ ನೀಡಿದರು. ಪ್ರಭಾರ ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಚ್.ಪಿ. ತಾರಾನಾಥ್, ಸಮುದಾಯದ ಮುಖಂಡರು, ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಸಮಾಜದ ಅಂಕುಡೊಂಕುಗಳನ್ನು ತಿದ್ದಲು ಹೋರಾಟ ಮಾಡಿ ಮಾದರಿಯಾಗಿರುವ ಶ್ರೀಕೃಷ್ಣ, ಸ್ನೇಹ, ಪ್ರೇಮದ ಪ್ರತೀಕ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು ಹೇಳಿದರು.</p>.<p>ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಶನಿವಾರ ಆಯೋಜಿಸಿದ್ದ ನುಲಿಯ ಚಂದಯ್ಯ ಜಯಂತಿ ಮತ್ತು ಶ್ರೀ ಕೃಷ್ಣ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶ್ರೀಕೃಷ್ಣನು ಸಾಮಾನ್ಯನಾಗಿ ಜನಿಸಿ, ಅಸಾಮಾನ್ಯವಾದ ಸಾಧನೆ ಮಾಡಿದ್ದಾನೆ. ಒಬ್ಬ ಮನುಷ್ಯ ಅನುಭವಿಸುವ ಪ್ರತಿಯೊಂದು ಕಷ್ಟಗಳನ್ನು, ಪ್ರತಿಯೊಂದು ಹಂತದಲ್ಲಿ ಅನುಭವಿಸಿ ಇತರರಿಗೆ ಮಾರ್ಗದರ್ಶಕರಾಗಿದ್ದಾರೆ ಎಂದರು.</p>.<p>ಜವೇನಹಳ್ಳಿ ಮಠದ ಸಂಗಮೇಶ್ವರ ಸ್ವಾಮೀಜಿ ಮಾತನಾಡಿ, 12ನೇ ಶತಮಾನದಲ್ಲಿ ಮಿಂಚಿ ಮರೆಯಾದವರು ನುಲಿಯ ಚಂದಯ್ಯ. ಇವರು ಶಿವನೊಂದಿಗೆ ದಿಟ್ಟತನದಿಂದ ಅನುಸಂಧಾನ ಮಾಡಿಕೊಂಡವರು ಎಂದು ತಿಳಿಸಿದರು.</p>.<p>ಹೊಳೆನರಸೀಪುರ ಬಿ.ಆರ್.ಸಿ ಕೇಂದ್ರದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಂ.ಜಿ. ಪರಮೇಶ್ ಉಪನ್ಯಾಸ ನೀಡಿದರು. ಪ್ರಭಾರ ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಚ್.ಪಿ. ತಾರಾನಾಥ್, ಸಮುದಾಯದ ಮುಖಂಡರು, ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>