<p><strong>ಅರಸೀಕೆರೆ</strong>: ‘ತಾಲ್ಲೂಕಿನ ಜನತೆಯ ಕನಸಾಗಿದ್ದ ಸರ್ಕಾರಿ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳು ಪ್ರಸಕ್ತ ವರ್ಷದಿಂದಲೇ ಆರಂಭವಾಗಲಿದ್ದು, ಮೇ 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ’ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.</p>.<p>ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳ ಕಟ್ಟಡಗಳು ಪೂರ್ಣಗೊಂಡಿದ್ದು, ವಿದ್ಯಾರ್ಥಿಗಳ ವಿದ್ಯಾಭ್ಯಾಸ ಆರಂಭವಾಗಲಿದೆ. ಉದ್ಘಾಟನೆಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಶಿಕ್ಷಣ ಸಚಿವರು ಸೇರಿದಂತೆ ಸಂಬಂಧಪಟ್ಟ ಸಚಿವ ಸಂಪುಟದ ಸದಸ್ಯರು ಅಂದು ಅರಸೀಕೆರೆಗೆ ಬರಲಿದ್ದಾರೆ’ ಎಂದರು.</p>.<p>‘240 ವಿದ್ಯಾರ್ಥಿಗಳ ಪ್ರವೇಶಾತಿಗೆ ಸರ್ಕಾರ ಅನುಮೋದನೆ ನೀಡಿದ್ದು, ಅರ್ಜಿಗಳು ನಾಳೆಯಿಂದ ಕಚೇರಿಯಲ್ಲಿ ಲಭ್ಯವಾಗಲಿವೆ. ವಸತಿ ನಿಲಯಗಳ ವ್ಯವಸ್ಥೆ ಇದ್ದು, ಪೋಷಕರು ಹಾಗೂ ವಿದ್ಯಾರ್ಥಿಗಳು ಪ್ರಯೋಜನ ಪಡೆಯಬೇಕು’ ಎಂದರು.</p>.<p>‘ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಅಂಡ್ ಮಷಿನ್ ಲರ್ನಿಂಗ್, ಕಂಪ್ಯೂಟರ್ ಸೈನ್ಸ್ ಅಂಡ್ ಎಂಜಿನಿಯರಿಂಗ್, ಎಲೆಕ್ರ್ಟಾನಿಕ್ಸ್ ಅಂಡ್ ಕಮ್ಯೂನಿಕೇಷನ್ ಎಂಜಿನಿಯರಿಂಗ್, ಇನ್ಫಾರ್ಮೇಷನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ಕೋರ್ಸ್ಗಳು ಆರಂಭವಾಗಲಿವೆ’ ಎಂದು ತಿಳಿಸಿದರು.</p>.<p>‘ನಗರದ ಜೆ.ಎಂ.ಸಿ ನ್ಯಾಯಾಲಯ ಹಾಗೂ ತರಕಾರಿ ಮಾರುಕಟ್ಟೆಯನ್ನೂ ಇದೇ ಸಂದರ್ಭದಲ್ಲಿ ಉದ್ಘಾಟಿಸುವರು. ನೂತನ ಬಸ್ನಿಲ್ದಾಣ, ಫುಡ್ಕೋರ್ಟ್, ಒಳಾಂಗಣ ಕ್ರೀಡಾಂಗಣ, ಪತ್ರಕರ್ತರ ಸಂಘದ ಕಟ್ಟಡ, ಈಜುಗೊಳ ಸೇರಿದಂತೆ ಇನ್ನಿತರ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ನೆರವೇರಿಸುವರು’ ಎಂದು ವಿವರಿಸಿದರು.</p>.<p>‘ವಿದ್ಯುತ್ ಅಭಾವ ನೀಗಿಸಲು ತಾಲ್ಲೂಕಿನಲ್ಲಿ 250 ಎಕರೆಯಲ್ಲಿ ಸೌರ ವಿದ್ಯುತ್ ಘಟಕವನ್ನು ಸುಮಾರು ₹250 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದ್ದು, ಅದರ ಶಂಕುಸ್ಥಾಪನೆ ನೆರವೇರಿಸಿವರು. ಕ್ಷೇತ್ರಕ್ಕೆ 82 ಮೆಗಾವ್ಯಾಟ್ ವಿದ್ಯುತ್ ಬೇಕಾಗಿದ್ದು, ಸೌರಶಕ್ತಿಯಿಂದ 58 ಮೆಗವ್ಯಾಟ್ ವಿದ್ಯುತ್ ಲಭ್ಯವಾಗಲಿದೆ. ಶತಮಾನದಲ್ಲಿ ಕ್ಷೇತ್ರದ ಜನತೆಗೆ ವಿದ್ಯುತ್ ಅಭಾವ ತಲೆದೋರುವುದಿಲ್ಲ. ರೈತರಿಗೆ ಪ್ರಯೋಜನ ಆಗಲಿದೆ’ ಎಂದರು.</p>.<p>‘ಎಂ.ಇ.ಎಸ್.ಎಸ್. ಸೆಂಟರ್ಗಳನ್ನು ಈಗಾಗಲೇ ಕಣಕಟ್ಟೆ ಹಾಗೂ ಸಾತನಕೆರೆ ಗ್ರಾಮಗಳಲ್ಲಿ ಪ್ರಾರಂಭವಾಗಿದ್ದು, ಇನ್ನು 3 ಉಪಕೇಂದ್ರಗಳನ್ನು ₹5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಶಂಕುಸ್ಥಾಪನೆ ನೆರವೇರಲಿದೆ. ರಾಜಕೀಯ ಜೀವನದಲ್ಲಿ ಕ್ಷೇತ್ರದ ಜನತೆಯ ಅನೂಕೂಲತೆ ಕಲ್ಪಿಸಲು ಸದಾ ಬದ್ಧವಾಗಿದ್ದೆನೆ’ ಎಂದರು. </p>.<p>ನಗರಸಭಾ ಅಧ್ಯಕ್ಷ ಎಂ.ಸಮೀವುಲ್ಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ</strong>: ‘ತಾಲ್ಲೂಕಿನ ಜನತೆಯ ಕನಸಾಗಿದ್ದ ಸರ್ಕಾರಿ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳು ಪ್ರಸಕ್ತ ವರ್ಷದಿಂದಲೇ ಆರಂಭವಾಗಲಿದ್ದು, ಮೇ 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ’ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.</p>.<p>ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳ ಕಟ್ಟಡಗಳು ಪೂರ್ಣಗೊಂಡಿದ್ದು, ವಿದ್ಯಾರ್ಥಿಗಳ ವಿದ್ಯಾಭ್ಯಾಸ ಆರಂಭವಾಗಲಿದೆ. ಉದ್ಘಾಟನೆಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಶಿಕ್ಷಣ ಸಚಿವರು ಸೇರಿದಂತೆ ಸಂಬಂಧಪಟ್ಟ ಸಚಿವ ಸಂಪುಟದ ಸದಸ್ಯರು ಅಂದು ಅರಸೀಕೆರೆಗೆ ಬರಲಿದ್ದಾರೆ’ ಎಂದರು.</p>.<p>‘240 ವಿದ್ಯಾರ್ಥಿಗಳ ಪ್ರವೇಶಾತಿಗೆ ಸರ್ಕಾರ ಅನುಮೋದನೆ ನೀಡಿದ್ದು, ಅರ್ಜಿಗಳು ನಾಳೆಯಿಂದ ಕಚೇರಿಯಲ್ಲಿ ಲಭ್ಯವಾಗಲಿವೆ. ವಸತಿ ನಿಲಯಗಳ ವ್ಯವಸ್ಥೆ ಇದ್ದು, ಪೋಷಕರು ಹಾಗೂ ವಿದ್ಯಾರ್ಥಿಗಳು ಪ್ರಯೋಜನ ಪಡೆಯಬೇಕು’ ಎಂದರು.</p>.<p>‘ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಅಂಡ್ ಮಷಿನ್ ಲರ್ನಿಂಗ್, ಕಂಪ್ಯೂಟರ್ ಸೈನ್ಸ್ ಅಂಡ್ ಎಂಜಿನಿಯರಿಂಗ್, ಎಲೆಕ್ರ್ಟಾನಿಕ್ಸ್ ಅಂಡ್ ಕಮ್ಯೂನಿಕೇಷನ್ ಎಂಜಿನಿಯರಿಂಗ್, ಇನ್ಫಾರ್ಮೇಷನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ಕೋರ್ಸ್ಗಳು ಆರಂಭವಾಗಲಿವೆ’ ಎಂದು ತಿಳಿಸಿದರು.</p>.<p>‘ನಗರದ ಜೆ.ಎಂ.ಸಿ ನ್ಯಾಯಾಲಯ ಹಾಗೂ ತರಕಾರಿ ಮಾರುಕಟ್ಟೆಯನ್ನೂ ಇದೇ ಸಂದರ್ಭದಲ್ಲಿ ಉದ್ಘಾಟಿಸುವರು. ನೂತನ ಬಸ್ನಿಲ್ದಾಣ, ಫುಡ್ಕೋರ್ಟ್, ಒಳಾಂಗಣ ಕ್ರೀಡಾಂಗಣ, ಪತ್ರಕರ್ತರ ಸಂಘದ ಕಟ್ಟಡ, ಈಜುಗೊಳ ಸೇರಿದಂತೆ ಇನ್ನಿತರ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ನೆರವೇರಿಸುವರು’ ಎಂದು ವಿವರಿಸಿದರು.</p>.<p>‘ವಿದ್ಯುತ್ ಅಭಾವ ನೀಗಿಸಲು ತಾಲ್ಲೂಕಿನಲ್ಲಿ 250 ಎಕರೆಯಲ್ಲಿ ಸೌರ ವಿದ್ಯುತ್ ಘಟಕವನ್ನು ಸುಮಾರು ₹250 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದ್ದು, ಅದರ ಶಂಕುಸ್ಥಾಪನೆ ನೆರವೇರಿಸಿವರು. ಕ್ಷೇತ್ರಕ್ಕೆ 82 ಮೆಗಾವ್ಯಾಟ್ ವಿದ್ಯುತ್ ಬೇಕಾಗಿದ್ದು, ಸೌರಶಕ್ತಿಯಿಂದ 58 ಮೆಗವ್ಯಾಟ್ ವಿದ್ಯುತ್ ಲಭ್ಯವಾಗಲಿದೆ. ಶತಮಾನದಲ್ಲಿ ಕ್ಷೇತ್ರದ ಜನತೆಗೆ ವಿದ್ಯುತ್ ಅಭಾವ ತಲೆದೋರುವುದಿಲ್ಲ. ರೈತರಿಗೆ ಪ್ರಯೋಜನ ಆಗಲಿದೆ’ ಎಂದರು.</p>.<p>‘ಎಂ.ಇ.ಎಸ್.ಎಸ್. ಸೆಂಟರ್ಗಳನ್ನು ಈಗಾಗಲೇ ಕಣಕಟ್ಟೆ ಹಾಗೂ ಸಾತನಕೆರೆ ಗ್ರಾಮಗಳಲ್ಲಿ ಪ್ರಾರಂಭವಾಗಿದ್ದು, ಇನ್ನು 3 ಉಪಕೇಂದ್ರಗಳನ್ನು ₹5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಶಂಕುಸ್ಥಾಪನೆ ನೆರವೇರಲಿದೆ. ರಾಜಕೀಯ ಜೀವನದಲ್ಲಿ ಕ್ಷೇತ್ರದ ಜನತೆಯ ಅನೂಕೂಲತೆ ಕಲ್ಪಿಸಲು ಸದಾ ಬದ್ಧವಾಗಿದ್ದೆನೆ’ ಎಂದರು. </p>.<p>ನಗರಸಭಾ ಅಧ್ಯಕ್ಷ ಎಂ.ಸಮೀವುಲ್ಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>