<p><strong>ಹಾಸನ</strong>: ಇಲ್ಲಿನ ಹಾಸನ ವಿಮಾನ ನಿಲ್ದಾಣಕ್ಕೆ ಭೂಸ್ವಾಧೀನ ಪಡಿಸಿಕೊಂಡಿರುವ ಭೂಮಿಗೆ ಪರಿಹಾರ ಬಿಡುಗಡೆಗೆ ಅಗತ್ಯ ಕ್ರಮ ವಹಿಸಲಾಗುವುದು. ಅಗತ್ಯವಿರುವ ಸ್ಥಳಗಳಿಗೆ ಮೊದಲ ಆದ್ಯತೆ ನೀಡಿ, ಪರಿಹಾರ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ, ಹಣಕಾಸು ಇಲಾಖೆಯ ಹಣಕಾಸು ಸುಧಾರಣೆಯ ಕಾರ್ಯದರ್ಶಿ ಡಾ. ವಿಶಾಲ್ ಆರ್. ತಿಳಿಸಿದರು.</p>.<p>ಬೂವನಹಳ್ಳಿ ವಿಮಾನ ನಿಲ್ದಾಣಕ್ಕೆ ಬುಧವಾರ ಭೇಟಿ ನೀಡಿದ ಅವರು, ನಂತರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ವಿಮಾನ ನಿಲ್ದಾಣ ಕಾಮಗಾರಿಗೆ ಅಡಚಣೆ ಆಗಿರುವ ಸಮಸ್ಯೆಗಳನ್ನು ಆಲಿಸಿ, ಸಲಹೆ ಸೂಚನೆ ನೀಡಿದರು.</p>.<p>ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ರಸ್ತೆ ನಿರ್ಮಾಣ, ಸರ್ವಿಸ್ ರಸ್ತೆಗಳ ನಿರ್ಮಾಣ, ರೈತರ ಸಮಸ್ಯೆಗಳು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದಿಂದ ವಿಮಾನ ನಿಲ್ದಾಣಕ್ಕೆ ನೀರಿನ ಸಂಪರ್ಕ ಕಲ್ಪಿಸುವ ಕುರಿತು ಹಾಗೂ ಇನ್ನಿತರ ವಿಷಯಗಳ ಸಂಬಂಧಿಸಿದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಸರ್ವಿಸ್ ರಸ್ತೆ ನಿರ್ಮಾಣದ ಕುರಿತು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಶಿ ಖುಷ್ಬು ಗೋಯೆಲ್ ಚೌಧರಿ, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣವರ್, ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><blockquote>ವಿಮಾನ ನಿಲ್ದಾಣ ಕಾಮಗಾರಿಗೆ ಭೂಸ್ವಾಧೀನ ಪಡಿಸಿಕೊಂಡಿರುವ ಜಮೀನುಗಳಲ್ಲಿ ಹಾದು ಹೋಗಿರುವ ಹೈಟೆನ್ಷನ್ ವಿದ್ಯುತ್ ಲೈನ್ ಸ್ಥಳಾಂತರಕ್ಕೆ ಅನುದಾನ ಬಿಡುಗಡೆ ಕ್ರಮ ವಹಿಸಲಾಗುವುದು</blockquote><span class="attribution"> ಡಾ. ವಿಶಾಲ್ ಆರ್ ಹಣಕಾಸು ಇಲಾಖೆಯ ಹಣಕಾಸು ಸುಧಾರಣೆಯ ಕಾರ್ಯದರ್ಶಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಇಲ್ಲಿನ ಹಾಸನ ವಿಮಾನ ನಿಲ್ದಾಣಕ್ಕೆ ಭೂಸ್ವಾಧೀನ ಪಡಿಸಿಕೊಂಡಿರುವ ಭೂಮಿಗೆ ಪರಿಹಾರ ಬಿಡುಗಡೆಗೆ ಅಗತ್ಯ ಕ್ರಮ ವಹಿಸಲಾಗುವುದು. ಅಗತ್ಯವಿರುವ ಸ್ಥಳಗಳಿಗೆ ಮೊದಲ ಆದ್ಯತೆ ನೀಡಿ, ಪರಿಹಾರ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ, ಹಣಕಾಸು ಇಲಾಖೆಯ ಹಣಕಾಸು ಸುಧಾರಣೆಯ ಕಾರ್ಯದರ್ಶಿ ಡಾ. ವಿಶಾಲ್ ಆರ್. ತಿಳಿಸಿದರು.</p>.<p>ಬೂವನಹಳ್ಳಿ ವಿಮಾನ ನಿಲ್ದಾಣಕ್ಕೆ ಬುಧವಾರ ಭೇಟಿ ನೀಡಿದ ಅವರು, ನಂತರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ವಿಮಾನ ನಿಲ್ದಾಣ ಕಾಮಗಾರಿಗೆ ಅಡಚಣೆ ಆಗಿರುವ ಸಮಸ್ಯೆಗಳನ್ನು ಆಲಿಸಿ, ಸಲಹೆ ಸೂಚನೆ ನೀಡಿದರು.</p>.<p>ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ರಸ್ತೆ ನಿರ್ಮಾಣ, ಸರ್ವಿಸ್ ರಸ್ತೆಗಳ ನಿರ್ಮಾಣ, ರೈತರ ಸಮಸ್ಯೆಗಳು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದಿಂದ ವಿಮಾನ ನಿಲ್ದಾಣಕ್ಕೆ ನೀರಿನ ಸಂಪರ್ಕ ಕಲ್ಪಿಸುವ ಕುರಿತು ಹಾಗೂ ಇನ್ನಿತರ ವಿಷಯಗಳ ಸಂಬಂಧಿಸಿದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಸರ್ವಿಸ್ ರಸ್ತೆ ನಿರ್ಮಾಣದ ಕುರಿತು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಶಿ ಖುಷ್ಬು ಗೋಯೆಲ್ ಚೌಧರಿ, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣವರ್, ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><blockquote>ವಿಮಾನ ನಿಲ್ದಾಣ ಕಾಮಗಾರಿಗೆ ಭೂಸ್ವಾಧೀನ ಪಡಿಸಿಕೊಂಡಿರುವ ಜಮೀನುಗಳಲ್ಲಿ ಹಾದು ಹೋಗಿರುವ ಹೈಟೆನ್ಷನ್ ವಿದ್ಯುತ್ ಲೈನ್ ಸ್ಥಳಾಂತರಕ್ಕೆ ಅನುದಾನ ಬಿಡುಗಡೆ ಕ್ರಮ ವಹಿಸಲಾಗುವುದು</blockquote><span class="attribution"> ಡಾ. ವಿಶಾಲ್ ಆರ್ ಹಣಕಾಸು ಇಲಾಖೆಯ ಹಣಕಾಸು ಸುಧಾರಣೆಯ ಕಾರ್ಯದರ್ಶಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>