<p><strong>ಹಾಸನ:</strong> ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ನಗರ ಪ್ರದೇಶಗಳಲ್ಲಿ ಕಡಿಮೆಯಾಗುತ್ತಿದ್ದು, ಚುರುಕುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ ಹೇಳಿದರು.</p>.<p>ನಗರದ ಹಿಮ್ಸ್ ಆಸ್ಪತ್ರೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯ ಪ್ರಗತಿಯ ಕುರಿತು ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಹಾಸನದಲ್ಲಿ 400 ಜನರ ಪೈಕಿ 100 ಜನರು ಮಾತ್ರ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದಾರೆ. ಇದು ಅತ್ಯಂತ ಕಡಿಮೆ ಸಾಧನೆಯಾಗಿದೆ. ವಿಧಾನಸಭಾ ಕ್ಷೇತ್ರವಾರು ಅಂಕಿ–ಅಂಶ ಪಡೆದು, ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ಬಳಸಿಕೊಂಡು ಸಮೀಕ್ಷೆಯನ್ನು ಚುರುಕುಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.</p>.<p>ದೇಶದ ಯಾವುದೇ ರಾಜ್ಯದಲ್ಲಿ ಸಮೀಕ್ಷೆ ಮಾಡುತ್ತಿಲ್ಲ. ಕರ್ನಾಟಕದಲ್ಲಿ ಮಾತ್ರ ಇಂತಹ ಪ್ರಯತ್ನ ನಡೆದಿದೆ. ಲಿಂಗತ್ವ ಅಲ್ಪಸಂಖ್ಯಾತರು ಹಲವಾರು ನೋವುಗಳನ್ನು ಅನುಭವಿಸಿದ್ದಾರೆ. ಅವರನ್ನು ಗುರುತಿಸುವ ಉದ್ದೇಶದಿಂದ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ಇವರಲ್ಲಿ ವಿದ್ಯಾವಂತರೂ ಹೆಚ್ಚಾಗಿದ್ದಾರೆ. ಉದ್ಯೋಗದಲ್ಲಿ ಶೇ 1 ರಷ್ಟು ಮೀಸಲಾತಿ ಇದ್ದು, ಅದರಲ್ಲಿ ಏನೂ ಮಾಡಲು ಆಗುವುದಿಲ್ಲ. ಲಿಂಗತ್ವ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲು ಅಂಕಿ–ಅಂಶಗಳು ಅಗತ್ಯವಾಗಿದ್ದು, ಅದಕ್ಕಾಗಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು.</p>.<p>ಲಿಂಗತ್ವ ಅಲ್ಪಸಂಖ್ಯಾತರು ಭಿಕ್ಷಾಟನೆ ಮಾಡಬಾರದು. ಅದಕ್ಕೆ ಅವರಿಗೆ ಸ್ವಾವಲಂಬಿ ಬದುಕು ಒದಗಿಸಲು ಸರ್ಕಾರ ಯೋಜನೆ ರೂಪಿಸಲಿದೆ. ಸ್ವಯಂ ಉದ್ಯೋಗ, ಸರ್ಕಾರಿ ಉದ್ಯೋಗ ಸೇರಿದಂತೆ ಲಿಂಗತ್ವ ಅಲ್ಪಸಂಖ್ಯಾತರಿಗೆ ಒಳ್ಳೆಯ ಜೀವನ ಒದಗಿಸಲು ಸರ್ಕಾರ ಮುಂದಾಗಿದೆ ಎಂದು ಹೇಳಿದರು.</p>.<p>ನಿಗಮದ ಪ್ರಧಾನ ವ್ಯವಸ್ಥಾಪಕಿ ಅಕ್ಕಮಹಾದೇವಿ, ಅಭಿವೃದ್ಧಿ ನಿರೀಕ್ಷಕಿ ಕಾಳಾ, ಕಾರ್ಯಕ್ರಮ ಅಧಿಕಾರಿ ಪವಿತ್ರಾ, ರೂಪಾ, ಅಧಿಕಾರಿಗಳು, ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದ ಪ್ರತಿನಿಧಿಗಳು ಇದ್ದರು.</p>
<p><strong>ಹಾಸನ:</strong> ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ನಗರ ಪ್ರದೇಶಗಳಲ್ಲಿ ಕಡಿಮೆಯಾಗುತ್ತಿದ್ದು, ಚುರುಕುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ ಹೇಳಿದರು.</p>.<p>ನಗರದ ಹಿಮ್ಸ್ ಆಸ್ಪತ್ರೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯ ಪ್ರಗತಿಯ ಕುರಿತು ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಹಾಸನದಲ್ಲಿ 400 ಜನರ ಪೈಕಿ 100 ಜನರು ಮಾತ್ರ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದಾರೆ. ಇದು ಅತ್ಯಂತ ಕಡಿಮೆ ಸಾಧನೆಯಾಗಿದೆ. ವಿಧಾನಸಭಾ ಕ್ಷೇತ್ರವಾರು ಅಂಕಿ–ಅಂಶ ಪಡೆದು, ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ಬಳಸಿಕೊಂಡು ಸಮೀಕ್ಷೆಯನ್ನು ಚುರುಕುಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.</p>.<p>ದೇಶದ ಯಾವುದೇ ರಾಜ್ಯದಲ್ಲಿ ಸಮೀಕ್ಷೆ ಮಾಡುತ್ತಿಲ್ಲ. ಕರ್ನಾಟಕದಲ್ಲಿ ಮಾತ್ರ ಇಂತಹ ಪ್ರಯತ್ನ ನಡೆದಿದೆ. ಲಿಂಗತ್ವ ಅಲ್ಪಸಂಖ್ಯಾತರು ಹಲವಾರು ನೋವುಗಳನ್ನು ಅನುಭವಿಸಿದ್ದಾರೆ. ಅವರನ್ನು ಗುರುತಿಸುವ ಉದ್ದೇಶದಿಂದ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ಇವರಲ್ಲಿ ವಿದ್ಯಾವಂತರೂ ಹೆಚ್ಚಾಗಿದ್ದಾರೆ. ಉದ್ಯೋಗದಲ್ಲಿ ಶೇ 1 ರಷ್ಟು ಮೀಸಲಾತಿ ಇದ್ದು, ಅದರಲ್ಲಿ ಏನೂ ಮಾಡಲು ಆಗುವುದಿಲ್ಲ. ಲಿಂಗತ್ವ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲು ಅಂಕಿ–ಅಂಶಗಳು ಅಗತ್ಯವಾಗಿದ್ದು, ಅದಕ್ಕಾಗಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು.</p>.<p>ಲಿಂಗತ್ವ ಅಲ್ಪಸಂಖ್ಯಾತರು ಭಿಕ್ಷಾಟನೆ ಮಾಡಬಾರದು. ಅದಕ್ಕೆ ಅವರಿಗೆ ಸ್ವಾವಲಂಬಿ ಬದುಕು ಒದಗಿಸಲು ಸರ್ಕಾರ ಯೋಜನೆ ರೂಪಿಸಲಿದೆ. ಸ್ವಯಂ ಉದ್ಯೋಗ, ಸರ್ಕಾರಿ ಉದ್ಯೋಗ ಸೇರಿದಂತೆ ಲಿಂಗತ್ವ ಅಲ್ಪಸಂಖ್ಯಾತರಿಗೆ ಒಳ್ಳೆಯ ಜೀವನ ಒದಗಿಸಲು ಸರ್ಕಾರ ಮುಂದಾಗಿದೆ ಎಂದು ಹೇಳಿದರು.</p>.<p>ನಿಗಮದ ಪ್ರಧಾನ ವ್ಯವಸ್ಥಾಪಕಿ ಅಕ್ಕಮಹಾದೇವಿ, ಅಭಿವೃದ್ಧಿ ನಿರೀಕ್ಷಕಿ ಕಾಳಾ, ಕಾರ್ಯಕ್ರಮ ಅಧಿಕಾರಿ ಪವಿತ್ರಾ, ರೂಪಾ, ಅಧಿಕಾರಿಗಳು, ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದ ಪ್ರತಿನಿಧಿಗಳು ಇದ್ದರು.</p>