<p><strong>ಹಾಸನ: </strong>ಕೆಎಸ್ಆರ್ಟಿಸಿ ನೌಕರರ ಮುಷ್ಕರದ ನಡುವೆ ಜಿಲ್ಲೆಯಲ್ಲಿ ಸೋಮವಾರ 237 ಬಸ್ಗಳು ಸಂಚರಿಸಿದ್ದು, ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸಂಚರಿಸುತ್ತಿದ್ದ ಬಸ್ಗೆ ಭಾನುವಾರ ರಾತ್ರಿಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ.</p>.<p>ಬಿ.ಎಂ. ರಸ್ತೆಯ ಕೃಷಿ ಕಾಲೇಜು ಬಳಿ ರಾತ್ರಿ ಕಲ್ಲು ಹೊಡೆದ ಪರಿಣಾಮ ಬಸ್ ಗಾಜು ಪುಡಿಯಾದವು. ಚಾಲಕನ ಎದೆಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಈ ಸಂಬಂಧಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮುಷ್ಕರ ಆರಂಭವಾದ ದಿನದಿಂದಲೂ ಬಸ್ಗೆ ಕಲ್ಲು ತೂರಾಟ ಪ್ರಕರಣಗಳು ಸಂಭವಿಸತ್ತಲೇ ಇವೆ. ಈವರೆಗೂ ಐದು ನೌಕರರ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.</p>.<p>ಬೆಂಗಳೂರು, ಮಂಗಳೂರು, ಮೈಸೂರು ಹಾಗೂ ಗ್ರಾಮಾಂತರ ಪ್ರದೇಶಗಳಿಗೆ ನಿಗದಿತ ಸಮಯಕ್ಕೆ ಬಸ್ಗಳು ಸಂಚಾರ ನಡೆಸಿದವು. ಖಾಸಗಿ ವಾಹನಗಳ ಸಂಖ್ಯೆ ಕಡಿಮೆಯಾಗಿದೆ. 480ಕ್ಕೂ ಹೆಚ್ಚು ನೌಕರರು ಕರ್ತವ್ಯಕ್ಕೆ ಹಾಜರಾದರು ಎಂದು ಬಸ್ ನಿಲ್ದಾಣ ಮೇಲ್ವಿಚಾರಕ ಮಂಜುನಾಥ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಕೆಎಸ್ಆರ್ಟಿಸಿ ನೌಕರರ ಮುಷ್ಕರದ ನಡುವೆ ಜಿಲ್ಲೆಯಲ್ಲಿ ಸೋಮವಾರ 237 ಬಸ್ಗಳು ಸಂಚರಿಸಿದ್ದು, ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸಂಚರಿಸುತ್ತಿದ್ದ ಬಸ್ಗೆ ಭಾನುವಾರ ರಾತ್ರಿಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ.</p>.<p>ಬಿ.ಎಂ. ರಸ್ತೆಯ ಕೃಷಿ ಕಾಲೇಜು ಬಳಿ ರಾತ್ರಿ ಕಲ್ಲು ಹೊಡೆದ ಪರಿಣಾಮ ಬಸ್ ಗಾಜು ಪುಡಿಯಾದವು. ಚಾಲಕನ ಎದೆಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಈ ಸಂಬಂಧಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮುಷ್ಕರ ಆರಂಭವಾದ ದಿನದಿಂದಲೂ ಬಸ್ಗೆ ಕಲ್ಲು ತೂರಾಟ ಪ್ರಕರಣಗಳು ಸಂಭವಿಸತ್ತಲೇ ಇವೆ. ಈವರೆಗೂ ಐದು ನೌಕರರ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.</p>.<p>ಬೆಂಗಳೂರು, ಮಂಗಳೂರು, ಮೈಸೂರು ಹಾಗೂ ಗ್ರಾಮಾಂತರ ಪ್ರದೇಶಗಳಿಗೆ ನಿಗದಿತ ಸಮಯಕ್ಕೆ ಬಸ್ಗಳು ಸಂಚಾರ ನಡೆಸಿದವು. ಖಾಸಗಿ ವಾಹನಗಳ ಸಂಖ್ಯೆ ಕಡಿಮೆಯಾಗಿದೆ. 480ಕ್ಕೂ ಹೆಚ್ಚು ನೌಕರರು ಕರ್ತವ್ಯಕ್ಕೆ ಹಾಜರಾದರು ಎಂದು ಬಸ್ ನಿಲ್ದಾಣ ಮೇಲ್ವಿಚಾರಕ ಮಂಜುನಾಥ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>