<p><strong>ಹಾಸನ:</strong>ನಗರದಎಂಜಿನಿಯರಿಂಗ್ ಕಾಲೇಜು ಕಟ್ಟಡದದಲ್ಲಿ ನಿರ್ಮಿಸುತ್ತಿರುವ ಸ್ಟ್ರಾಂಗ್ ರೂಂ ಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಶುಕ್ರವಾರ ಭೇಟಿ ನೀಡಿ, ಪರಿಶೀಲಿಸಿದರು.</p>.<p>ಮತಯಂತ್ರಗಳನ್ನು ಸುರಕ್ಷಿತವಾಗಿಡುವ ಕಟ್ಟಡಕ್ಕೆ ಭೇಟಿ ನೀಡಿ, ಸಲಹೆ, ಸೂಚನೆಗಳನ್ನು ನೀಡಿದ ಅವರು,ಎಲ್ಲಾ ತಾಲ್ಲೂಕುಗಳಲ್ಲಿ ಇಂತಹ ಸುಸಜ್ಜಿತ ಸ್ಟ್ರಾಂಗ್ ರೂಂ ನಿರ್ಮಾಣ ಮಾಡಬೇಕಾಗಿದೆ ಎಂದು ತಿಳಿಸಿದರು.</p>.<p>ನಂತರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ, ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಹಲವಾರು ವಿಷಯ ಚರ್ಚಿಸಿದರು.</p>.<p>ಮತದಾರರ ಗುರುತಿನ ಚೀಟಿಯಲ್ಲಿ ಲೋಪದೋಷವಾಗದಂತೆ ಎಚ್ಚರವಹಿಸಬೇಕು. ಮುಂದಿನ ದಿನಗಳಲ್ಲಿ ಇ-ಎಪಿಕ್ ಹೆಚ್ಚು ಬಳಕೆಗೆ ಬರುವುದರಿಂದಗಮನಿಸಬೇಕು ಎಂದ ಅವರು, ಯುವ ಮತದಾರರ ಸೇರ್ಪಡೆ, ಮತದಾರರ ಪಟ್ಟಿ ನಿರಂತರ ಪರಿಷ್ಕರಣೆ, ಲಿಂಗಾನುಪಾತ, ಮತ್ತಿತರ ವಿಷಯದ ಬಗ್ಗೆ ಮಾಹಿತಿ ಪಡೆದು ಸಲಹೆ, ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ಕೋವಿಡ್ -19 ನಿಂದಾಗಿ ಶಾಲಾ-ಕಾಲೇಜುಗಳು ನಡೆಯದ ಕಾರಣ ಯುವ ಮತದಾರರ ನೋಂದಣಿ ಸ್ವಲ್ಪ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಸೇರ್ಪಡೆ ಮಾಡಲಾಗುವುದು ಎಂದರು.</p>.<p>ಇದಕ್ಕೂ ಮುನ್ನ ಮುಖ್ಯ ಚುನಾವಣಾಧಿಕಾರಿ ಬೇಲೂರು ತಾಲ್ಲೂಕಿಗೆ ಭೇಟಿ ನೀಡಿ, ಪರಿಶೀಲಿಸಿದರು.</p>.<p>ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಉಪ ವಿಭಾಗಾಧಿಕಾರಿಗಳಾದ ಬಿ.ಎ. ಜಗದೀಶ್, ಗಿರೀಶ್ ನಂದನ್, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ, ತಹಶೀಲ್ದಾರ್ ಶಿವಶಂಕರಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong>ನಗರದಎಂಜಿನಿಯರಿಂಗ್ ಕಾಲೇಜು ಕಟ್ಟಡದದಲ್ಲಿ ನಿರ್ಮಿಸುತ್ತಿರುವ ಸ್ಟ್ರಾಂಗ್ ರೂಂ ಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಶುಕ್ರವಾರ ಭೇಟಿ ನೀಡಿ, ಪರಿಶೀಲಿಸಿದರು.</p>.<p>ಮತಯಂತ್ರಗಳನ್ನು ಸುರಕ್ಷಿತವಾಗಿಡುವ ಕಟ್ಟಡಕ್ಕೆ ಭೇಟಿ ನೀಡಿ, ಸಲಹೆ, ಸೂಚನೆಗಳನ್ನು ನೀಡಿದ ಅವರು,ಎಲ್ಲಾ ತಾಲ್ಲೂಕುಗಳಲ್ಲಿ ಇಂತಹ ಸುಸಜ್ಜಿತ ಸ್ಟ್ರಾಂಗ್ ರೂಂ ನಿರ್ಮಾಣ ಮಾಡಬೇಕಾಗಿದೆ ಎಂದು ತಿಳಿಸಿದರು.</p>.<p>ನಂತರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ, ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಹಲವಾರು ವಿಷಯ ಚರ್ಚಿಸಿದರು.</p>.<p>ಮತದಾರರ ಗುರುತಿನ ಚೀಟಿಯಲ್ಲಿ ಲೋಪದೋಷವಾಗದಂತೆ ಎಚ್ಚರವಹಿಸಬೇಕು. ಮುಂದಿನ ದಿನಗಳಲ್ಲಿ ಇ-ಎಪಿಕ್ ಹೆಚ್ಚು ಬಳಕೆಗೆ ಬರುವುದರಿಂದಗಮನಿಸಬೇಕು ಎಂದ ಅವರು, ಯುವ ಮತದಾರರ ಸೇರ್ಪಡೆ, ಮತದಾರರ ಪಟ್ಟಿ ನಿರಂತರ ಪರಿಷ್ಕರಣೆ, ಲಿಂಗಾನುಪಾತ, ಮತ್ತಿತರ ವಿಷಯದ ಬಗ್ಗೆ ಮಾಹಿತಿ ಪಡೆದು ಸಲಹೆ, ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ಕೋವಿಡ್ -19 ನಿಂದಾಗಿ ಶಾಲಾ-ಕಾಲೇಜುಗಳು ನಡೆಯದ ಕಾರಣ ಯುವ ಮತದಾರರ ನೋಂದಣಿ ಸ್ವಲ್ಪ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಸೇರ್ಪಡೆ ಮಾಡಲಾಗುವುದು ಎಂದರು.</p>.<p>ಇದಕ್ಕೂ ಮುನ್ನ ಮುಖ್ಯ ಚುನಾವಣಾಧಿಕಾರಿ ಬೇಲೂರು ತಾಲ್ಲೂಕಿಗೆ ಭೇಟಿ ನೀಡಿ, ಪರಿಶೀಲಿಸಿದರು.</p>.<p>ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಉಪ ವಿಭಾಗಾಧಿಕಾರಿಗಳಾದ ಬಿ.ಎ. ಜಗದೀಶ್, ಗಿರೀಶ್ ನಂದನ್, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ, ತಹಶೀಲ್ದಾರ್ ಶಿವಶಂಕರಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>