<p><strong>ಹಾಸನ</strong>: ಇಲ್ಲಿನ ನವಕೀಸ್ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಯುವಕ ಸಂಘಗಳ ಆಶ್ರಯದಲ್ಲಿ ‘ಸ್ಕೂಲ್ ಬೆಲ್’ ಕಾರ್ಯಕ್ರಮದಡಿ ಆಲೂರು ತಾಲ್ಲೂಕಿನ ಕೆಂಚಮ್ಮನ ಹೊಸಕೋಟೆಯ ಸರ್ಕಾರಿ ಪ್ರೌಢಶಾಲೆಗೆ ಬಣ್ಣ ಬಳಿದು ನವೀಕರಣ ಮಾಡಲಾಯಿತು.</p>.<p>ರಾಷ್ಟ್ರೀಯ ಸೇವಾ ಯೋಜನೆಯ 40 ವಿದ್ಯಾರ್ಥಿ ಸ್ವಯಂ ಸೇವಕರು ಈ ಸೇವಾ ಕಾರ್ಯದಲ್ಲಿ ಪಾಲ್ಗೊಂಡು ವಿಜ್ಞಾನ, ಗಣಿತ ಹಾಗೂ ಸಮಾಜ ಶಾಸ್ತ್ರಗಳಿಗೆ ಸಂಬಂಧಪಟ್ಟ ರೇಖಾ ಚಿತ್ರಗಳನ್ನು ರಚಿಸಿ, ಬಣ್ಣ ತುಂಬಿದರು. ಈ ಚಿತ್ರಗಳು ಮಕ್ಕಳ ಕಲಿಕೆಗೆ ಸಹಾಯಕವಾಗಿದ್ದು, ಶಿಕ್ಷಕರು ಬೋಧಿಸಲು ಅನುಕೂಲವಾಗಿವೆ.</p>.<p>ಬೋಧನಾ ಕೊಠಡಿಯ ಒಳಗೆ ಹಾಗೂ ಕಟ್ಟಡದ ಹೊರಗೆ ಬಣ್ಣ ಬಳಿದು ಆಕರ್ಷಕ ಚಿತ್ರಗಳನ್ನು ರಚಿಸಲಾಯಿತು. ಶಾಲಾ ಕಾಂಪೌಂಡ್ ಮೇಲೆ ಚಿತ್ತಾರದ ಚಿತ್ರಗಳನ್ನು ಬಿಡಿಸಿ ಆಕರ್ಷಣೀಯಗೊಳಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಮೋಹನ್ ಕುಮಾರ್, ವರದರಾಜು ಮತ್ತು ಯುವಕ ಸಂಘದ ಗುರುಪ್ರಸಾದ್, ಗ್ರಾಮದ ಮುಖಂಡರಾದ ಶ್ಯಾಮ್ರಾವ್, ಚಂದ್ರಮೌಳಿ, ಶಿವಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಇಲ್ಲಿನ ನವಕೀಸ್ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಯುವಕ ಸಂಘಗಳ ಆಶ್ರಯದಲ್ಲಿ ‘ಸ್ಕೂಲ್ ಬೆಲ್’ ಕಾರ್ಯಕ್ರಮದಡಿ ಆಲೂರು ತಾಲ್ಲೂಕಿನ ಕೆಂಚಮ್ಮನ ಹೊಸಕೋಟೆಯ ಸರ್ಕಾರಿ ಪ್ರೌಢಶಾಲೆಗೆ ಬಣ್ಣ ಬಳಿದು ನವೀಕರಣ ಮಾಡಲಾಯಿತು.</p>.<p>ರಾಷ್ಟ್ರೀಯ ಸೇವಾ ಯೋಜನೆಯ 40 ವಿದ್ಯಾರ್ಥಿ ಸ್ವಯಂ ಸೇವಕರು ಈ ಸೇವಾ ಕಾರ್ಯದಲ್ಲಿ ಪಾಲ್ಗೊಂಡು ವಿಜ್ಞಾನ, ಗಣಿತ ಹಾಗೂ ಸಮಾಜ ಶಾಸ್ತ್ರಗಳಿಗೆ ಸಂಬಂಧಪಟ್ಟ ರೇಖಾ ಚಿತ್ರಗಳನ್ನು ರಚಿಸಿ, ಬಣ್ಣ ತುಂಬಿದರು. ಈ ಚಿತ್ರಗಳು ಮಕ್ಕಳ ಕಲಿಕೆಗೆ ಸಹಾಯಕವಾಗಿದ್ದು, ಶಿಕ್ಷಕರು ಬೋಧಿಸಲು ಅನುಕೂಲವಾಗಿವೆ.</p>.<p>ಬೋಧನಾ ಕೊಠಡಿಯ ಒಳಗೆ ಹಾಗೂ ಕಟ್ಟಡದ ಹೊರಗೆ ಬಣ್ಣ ಬಳಿದು ಆಕರ್ಷಕ ಚಿತ್ರಗಳನ್ನು ರಚಿಸಲಾಯಿತು. ಶಾಲಾ ಕಾಂಪೌಂಡ್ ಮೇಲೆ ಚಿತ್ತಾರದ ಚಿತ್ರಗಳನ್ನು ಬಿಡಿಸಿ ಆಕರ್ಷಣೀಯಗೊಳಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಮೋಹನ್ ಕುಮಾರ್, ವರದರಾಜು ಮತ್ತು ಯುವಕ ಸಂಘದ ಗುರುಪ್ರಸಾದ್, ಗ್ರಾಮದ ಮುಖಂಡರಾದ ಶ್ಯಾಮ್ರಾವ್, ಚಂದ್ರಮೌಳಿ, ಶಿವಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>