<p><strong>ಶ್ರವಣಬೆಳಗೊಳ</strong>: ‘ಶಿಕ್ಷಕರು ಪ್ರತಿಯೊಬ್ಬ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಸದಾ ಶ್ರಮಿಸುತ್ತಿದ್ದಾರೆ. ಅವರ ಪವಿತ್ರ ಸೇವೆಯನ್ನು ಸ್ಮರಿಸುವುದು ಆದ್ಯ ಕರ್ತವ್ಯ’ ಎಂದು ಕಾಂತರಾಜೇ ಅರಸ್ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಮಧು ಗೋಪಾಲ್ ಹೇಳಿದರು.</p>.<p>ಹೋಬಳಿಯ ಕಾಂತರಾಜಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾಂತರಾಜೇ ಅರಸ್ ಹಳೆಯ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಪ್ರೌಢಶಾಲೆಯ ಆಶ್ರಯದಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಮುಖ್ಯಶಿಕ್ಷಕ ಎಚ್.ಎಚ್. ಸತೀಶ್ ಮಾತನಾಡಿ, ‘ಮಕ್ಕಳು ಶಿಕ್ಷಕರು ಕಲಿಸುವ ಪ್ರತಿಯೊಂದೂ ಪಾಠ ಪ್ರವಚನಗಳನ್ನು ಅತ್ಯಂತ ಶಿಸ್ತಿನಿಂದ ಶ್ರದ್ಧಾ ಪೂರ್ವಕವಾಗಿ ಆಲಿಸುವ ಮನೋಭಾವವನ್ನು ಬೆಳೆಸಿಕೊಂಡಾಗ ಮುಂದಿನ ಭವಿಷ್ಯ ಉಜ್ವಲವಾಗುತ್ತದೆ’ ಎಂದು ಕಿವಿಮಾತು ಹೇಳಿದರು.</p>.<p>ಕಾರ್ಯಕ್ರಮಕ್ಕೂ ಮೊದಲು ಎಲ್ಲಾ ಶಿಕ್ಷಕರು ಆಸೀನರಾಗುತ್ತಿದ್ದಂತೆ ಪ್ರಸ್ತುತ ಕಲಿಯುತ್ತಿರುವ ವಿದ್ಯಾರ್ಥಿಗಳು ಗುರುಗಳ ಪಾದ ಪೂಜೆ ನೆರವೇರಿಸಿ ಪ್ರತ್ಯೇಕವಾಗಿ ಪುಷ್ಪವೃಷ್ಟಿ ಮಾಡಿ ಗೌರವದೊಂದಿಗೆ ಸಂಭ್ರಮಿಸಿದ್ದು, ವಿಶೇಷವಾಗಿತ್ತು.</p>.<p>ಸುದೀರ್ಘ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಈ ಶಾಲೆಯ ಕನ್ನಡ ಭಾಷಾ ಶಿಕ್ಷಕಿ ಕೆ.ಪಿ.ಶೋಭಾ ದಂಪತಿಯನ್ನು ಸನ್ಮಾನಿಸಲಾಯಿತು. ಸಿಆರ್ಪಿ ಮಂಜೇಗೌಡ, ವಸತಿ ನಿಲಯದ ಮೇಲ್ವಿಚಾರಕ ಮಂಜುನಾಯಕ್, ಶಿಕ್ಷಕರಾದ ಗೋವಿಂದಪ್ಪ, ಲೋಕೇಶ್, ರವಿಕುಮಾರ್, ಬಾಲಗಂಗಾಧರ್, ಶೋಭಾ, ಇಂದಿರಾ ಮಣಿ, ಅಂಜು ಆರಾ, ವಾಣಿ, ಮಂಜುಳಾ, ಪ್ರಶಾಂತ್, ಬಿಂದು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರವಣಬೆಳಗೊಳ</strong>: ‘ಶಿಕ್ಷಕರು ಪ್ರತಿಯೊಬ್ಬ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಸದಾ ಶ್ರಮಿಸುತ್ತಿದ್ದಾರೆ. ಅವರ ಪವಿತ್ರ ಸೇವೆಯನ್ನು ಸ್ಮರಿಸುವುದು ಆದ್ಯ ಕರ್ತವ್ಯ’ ಎಂದು ಕಾಂತರಾಜೇ ಅರಸ್ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಮಧು ಗೋಪಾಲ್ ಹೇಳಿದರು.</p>.<p>ಹೋಬಳಿಯ ಕಾಂತರಾಜಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾಂತರಾಜೇ ಅರಸ್ ಹಳೆಯ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಪ್ರೌಢಶಾಲೆಯ ಆಶ್ರಯದಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಮುಖ್ಯಶಿಕ್ಷಕ ಎಚ್.ಎಚ್. ಸತೀಶ್ ಮಾತನಾಡಿ, ‘ಮಕ್ಕಳು ಶಿಕ್ಷಕರು ಕಲಿಸುವ ಪ್ರತಿಯೊಂದೂ ಪಾಠ ಪ್ರವಚನಗಳನ್ನು ಅತ್ಯಂತ ಶಿಸ್ತಿನಿಂದ ಶ್ರದ್ಧಾ ಪೂರ್ವಕವಾಗಿ ಆಲಿಸುವ ಮನೋಭಾವವನ್ನು ಬೆಳೆಸಿಕೊಂಡಾಗ ಮುಂದಿನ ಭವಿಷ್ಯ ಉಜ್ವಲವಾಗುತ್ತದೆ’ ಎಂದು ಕಿವಿಮಾತು ಹೇಳಿದರು.</p>.<p>ಕಾರ್ಯಕ್ರಮಕ್ಕೂ ಮೊದಲು ಎಲ್ಲಾ ಶಿಕ್ಷಕರು ಆಸೀನರಾಗುತ್ತಿದ್ದಂತೆ ಪ್ರಸ್ತುತ ಕಲಿಯುತ್ತಿರುವ ವಿದ್ಯಾರ್ಥಿಗಳು ಗುರುಗಳ ಪಾದ ಪೂಜೆ ನೆರವೇರಿಸಿ ಪ್ರತ್ಯೇಕವಾಗಿ ಪುಷ್ಪವೃಷ್ಟಿ ಮಾಡಿ ಗೌರವದೊಂದಿಗೆ ಸಂಭ್ರಮಿಸಿದ್ದು, ವಿಶೇಷವಾಗಿತ್ತು.</p>.<p>ಸುದೀರ್ಘ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಈ ಶಾಲೆಯ ಕನ್ನಡ ಭಾಷಾ ಶಿಕ್ಷಕಿ ಕೆ.ಪಿ.ಶೋಭಾ ದಂಪತಿಯನ್ನು ಸನ್ಮಾನಿಸಲಾಯಿತು. ಸಿಆರ್ಪಿ ಮಂಜೇಗೌಡ, ವಸತಿ ನಿಲಯದ ಮೇಲ್ವಿಚಾರಕ ಮಂಜುನಾಯಕ್, ಶಿಕ್ಷಕರಾದ ಗೋವಿಂದಪ್ಪ, ಲೋಕೇಶ್, ರವಿಕುಮಾರ್, ಬಾಲಗಂಗಾಧರ್, ಶೋಭಾ, ಇಂದಿರಾ ಮಣಿ, ಅಂಜು ಆರಾ, ವಾಣಿ, ಮಂಜುಳಾ, ಪ್ರಶಾಂತ್, ಬಿಂದು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>