<p>ಹಾಸನ: ಮಂಗಗಳನ್ನು ಹತ್ಯೆ ಮಾಡಿ ಚೀಲದಲ್ಲಿ ತಂದು ಬಿಸಾಡಿದ್ದ ಬೇಲೂರು ತಾಲ್ಲೂಕಿನ ಚೌಡನಹಳ್ಳಿ<br />ಗ್ರಾಮಕ್ಕೆ ಶನಿವಾರ ಜಿಲ್ಲಾಧಿಕಾರಿ ಆರ್.ಗಿರೀಶ್, ಪೋಲಿಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸಗೌಡ , ಉಪ ಅರಣ್ಯ<br />ಸಂರಕ್ಷಣಾಧಿಕಾರಿ ಬಸವರಾಜ್ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು.</p>.<p>ಚೌಡನಹಳ್ಳಿ ರಸ್ತೆ ಬದಿಯಲ್ಲಿ ಬುಧವಾರ ರಾತ್ರಿ ಬಿಸಾಡಿದ್ದ ಚೀಲದಲ್ಲಿ 38 ಮೃತಪಟ್ಟ ಮಂಗಗಳು, ಸಾವು–ಬದುಕಿನ ನಡುವೆ ಸೆಣಸುತ್ತಿದ್ದ 15 ಮಂಗಗಳು ಕಂಡು ಬಂದಿದ್ದವು. ಅಪರಿಚಿತ ವ್ಯಕ್ತಿಗಳು ಮತ್ತುಮಂಗಗಳ ಹತ್ಯೆ ಮಾಡುವವರ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.</p>.<p>ನಂತರ ಸುದ್ದಿಗಾರರ ಜತೆ ಮಾತನಾಡಿದ ಜಿಲ್ಲಾಧಿಕಾರಿ ಆರ್. ಗಿರೀಶ್, ಮಂಗಗಳ ದೇಹವನ್ನು ಮರಣೋತ್ತರ<br />ಪರೀಕ್ಷೆ ನಡೆಸಲಾಗಿದೆ. ಅಂಗಾಂಗ ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ<br />ಘಟನೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ, ಎಲ್ಲ ರೀತಿಯ ತನಿಖೆ ನಡೆಸುತ್ತಿದೆ. ತಪ್ಪಿತಸ್ಥರ ವಿರುದ್ಧ<br />ಕಾನುನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.</p>.<p>ಮಂಗಗಳ ಮಾರಣಹೋಮದ ಬಗ್ಗೆ ಹೈಕೋರ್ಟ್ ಸ್ವಯಂ ಪ್ರೇರಿತ ಸಾರ್ವಜನಿಕ ಅರ್ಜಿ ದಾಖಲಿಸಿಕೊಂಡಿದೆ.<br />ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಪೊಲಿಸ್ ವರಿಷ್ಠಾಧಿಕಾರಿ, ಪ್ರಾಣಿ<br />ಕಲ್ಯಾಣ ಮಂಡಳಿಯನ್ನು ಪ್ರತಿವಾದಿಗಳಾಗಿಸಿದೆ. ಕೋರ್ಟ್ ಆದೇಶದಂತೆ ತನಿಖೆ ನಡೆಸಿ, ಆ.4 ರೊಳಗೆ<br />ವರದಿ ಸಲ್ಲಿಸಲಾಗುವುದು ಎಂದರು.</p>.<p>ಈ ಪ್ರಕರಣ ಕುರಿತಂತೆ ಯಾವುದೇ ರೀತಿಯ ಮಾಹಿತಿ ದೊರೆತಲ್ಲಿ ಜಿಲ್ಲಾಧಿಕಾರಿ ಕಚೇರಿ, ಪೊಲೀಸ್<br />ವರಿಷ್ಠಾಧಿಕಾರಿ ಹಾಗೂ ತಹಶೀಲ್ದಾರ್ ಅವರನ್ನು ನೇರವಾಗಿ ಭೇಟಿ ಮಾಡಿ ಅಥವಾ ದೂರವಾಣಿ ಕರೆ ಮೂಲಕ<br />ಮಾಹಿತಿ ನೀಡಬಹುದು. ಅಂತಹವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.</p>.<p>ಪೋಲಿಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ ಮಾತನಾಡಿ, ಮಂಗಗಳ ಹತ್ಯೆ ಬಗ್ಗೆ ಪೋಲಿಸ್, ಕಂದಾಯ<br />ಹಾಗೂ ಅರಣ್ಯ ಇಲಾಖೆ ಜಂಟಿಯಾಗಿ ತನಿಖೆ ನಡೆಸುತ್ತಿದ್ದು, ಜುಲೈ 28 ರ ರಾತ್ರಿ ಸುಮಾರು 9 ರಿಂದ 11<br />ಗಂಟೆಯ ಸಮಯದಲ್ಲಿ ಈ ಕೃತ್ಯ ನಡೆದಿದೆ. ಗ್ರಾಮಸ್ಥರ ಮಾಹಿತಿ ಪ್ರಕಾರ ಬೆಳೆ ಹಾನಿ ಮಾಡುತ್ತದೆ ಎಂಬ<br />ಕಾರಣಕ್ಕೆ ಮಂಗಗಳ ಸಾಮೂಹಿಕ ಹತ್ಯೆ ನಡೆಸಿರಬಹುದು ಎನ್ನಲಾಗುತ್ತಿದೆ. ಕಿರಿಕಿರಿ ಉಂಟು ಮಾಡುತ್ತಿರುವ<br />ಕಾರಣಕ್ಕೂ ಹತ್ಯೆ ಮಾಡಿರುವ ಸಾಧ್ಯತೆ ಇರಬಹುದು ಎಂದರು.</p>.<p>ಜಿಲ್ಲೆಯಲ್ಲಿ ಕಾಡಾನೆ ದಾಳಿಯ ಬಗ್ಗೆ ದೂರುಗಳು ಇವೆ. ಆದರೆ, ಮಂಗಗಳ ಹಾವಳಿ ಬಗ್ಗೆ ದೂರು ಬಂದಿರಲಿಲ್ಲ.<br />ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಲಾಗುತ್ತಿದೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು<br />ವಿವರಿಸಿದರು.</p>.<p>ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜ್ ಮಾತನಾಡಿ, ಸಹಾಯಕ ಅರಣ್ಯಾಧಿಕಾರಿ ನೇತೃತ್ವದಲ್ಲಿ ಜಂಟಿ<br />ತಂಡ ರಚಿಸಿದ್ದು, ಈಗಾಗಲೇ ತನಿಖೆ ಆರಂಭಗೊಂಡಿದೆ. ಎರಡು ದಿನದಲ್ಲಿ ಫಲಿತಾಂಶ ದೊರೆಯುವ<br />ನಿರೀಕ್ಷೆಯಲ್ಲಿದ್ದೇವೆ. ಜಿಲ್ಲೆಯಲ್ಲಿ ಈ ರೀತಿ ಅಮಾನವೀಯ ಕೃತ್ಯ ಮೊದಲ ಬಾರಿಗೆ ನಡೆದಿದೆ.ಸಕಲೇಶಪುರ, ಮೂಡಿಗೆರೆ, ಕಡೂರು ಭಾಗದಲ್ಲಿ ಮಂಗಗಳ ಹಾವಳಿ ಇದ್ದರೂ ದೂರು ಬಂದಿರಲಿಲ್ಲ.ಮಂಗಗಳ ಹಿಡಿಯುವವರಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದು ತಿಳಿಸಿದರು.</p>.<p>ಉಪವಿಭಾಗಾಧಿಕಾರಿ ಪ್ರತೀಕ್ ಬಾಯಲ್, ಡಿವೈಎಸ್ಪಿ ನಾಗೇಶ್, ತಹಶೀಲ್ದಾರ್ ಮೋಹನ್ ಹಾಗೂ ಅರಣ್ಯ,<br />ಪೊಲೀಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಮಂಗಗಳನ್ನು ಹತ್ಯೆ ಮಾಡಿ ಚೀಲದಲ್ಲಿ ತಂದು ಬಿಸಾಡಿದ್ದ ಬೇಲೂರು ತಾಲ್ಲೂಕಿನ ಚೌಡನಹಳ್ಳಿ<br />ಗ್ರಾಮಕ್ಕೆ ಶನಿವಾರ ಜಿಲ್ಲಾಧಿಕಾರಿ ಆರ್.ಗಿರೀಶ್, ಪೋಲಿಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸಗೌಡ , ಉಪ ಅರಣ್ಯ<br />ಸಂರಕ್ಷಣಾಧಿಕಾರಿ ಬಸವರಾಜ್ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು.</p>.<p>ಚೌಡನಹಳ್ಳಿ ರಸ್ತೆ ಬದಿಯಲ್ಲಿ ಬುಧವಾರ ರಾತ್ರಿ ಬಿಸಾಡಿದ್ದ ಚೀಲದಲ್ಲಿ 38 ಮೃತಪಟ್ಟ ಮಂಗಗಳು, ಸಾವು–ಬದುಕಿನ ನಡುವೆ ಸೆಣಸುತ್ತಿದ್ದ 15 ಮಂಗಗಳು ಕಂಡು ಬಂದಿದ್ದವು. ಅಪರಿಚಿತ ವ್ಯಕ್ತಿಗಳು ಮತ್ತುಮಂಗಗಳ ಹತ್ಯೆ ಮಾಡುವವರ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.</p>.<p>ನಂತರ ಸುದ್ದಿಗಾರರ ಜತೆ ಮಾತನಾಡಿದ ಜಿಲ್ಲಾಧಿಕಾರಿ ಆರ್. ಗಿರೀಶ್, ಮಂಗಗಳ ದೇಹವನ್ನು ಮರಣೋತ್ತರ<br />ಪರೀಕ್ಷೆ ನಡೆಸಲಾಗಿದೆ. ಅಂಗಾಂಗ ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ<br />ಘಟನೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ, ಎಲ್ಲ ರೀತಿಯ ತನಿಖೆ ನಡೆಸುತ್ತಿದೆ. ತಪ್ಪಿತಸ್ಥರ ವಿರುದ್ಧ<br />ಕಾನುನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.</p>.<p>ಮಂಗಗಳ ಮಾರಣಹೋಮದ ಬಗ್ಗೆ ಹೈಕೋರ್ಟ್ ಸ್ವಯಂ ಪ್ರೇರಿತ ಸಾರ್ವಜನಿಕ ಅರ್ಜಿ ದಾಖಲಿಸಿಕೊಂಡಿದೆ.<br />ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಪೊಲಿಸ್ ವರಿಷ್ಠಾಧಿಕಾರಿ, ಪ್ರಾಣಿ<br />ಕಲ್ಯಾಣ ಮಂಡಳಿಯನ್ನು ಪ್ರತಿವಾದಿಗಳಾಗಿಸಿದೆ. ಕೋರ್ಟ್ ಆದೇಶದಂತೆ ತನಿಖೆ ನಡೆಸಿ, ಆ.4 ರೊಳಗೆ<br />ವರದಿ ಸಲ್ಲಿಸಲಾಗುವುದು ಎಂದರು.</p>.<p>ಈ ಪ್ರಕರಣ ಕುರಿತಂತೆ ಯಾವುದೇ ರೀತಿಯ ಮಾಹಿತಿ ದೊರೆತಲ್ಲಿ ಜಿಲ್ಲಾಧಿಕಾರಿ ಕಚೇರಿ, ಪೊಲೀಸ್<br />ವರಿಷ್ಠಾಧಿಕಾರಿ ಹಾಗೂ ತಹಶೀಲ್ದಾರ್ ಅವರನ್ನು ನೇರವಾಗಿ ಭೇಟಿ ಮಾಡಿ ಅಥವಾ ದೂರವಾಣಿ ಕರೆ ಮೂಲಕ<br />ಮಾಹಿತಿ ನೀಡಬಹುದು. ಅಂತಹವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.</p>.<p>ಪೋಲಿಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ ಮಾತನಾಡಿ, ಮಂಗಗಳ ಹತ್ಯೆ ಬಗ್ಗೆ ಪೋಲಿಸ್, ಕಂದಾಯ<br />ಹಾಗೂ ಅರಣ್ಯ ಇಲಾಖೆ ಜಂಟಿಯಾಗಿ ತನಿಖೆ ನಡೆಸುತ್ತಿದ್ದು, ಜುಲೈ 28 ರ ರಾತ್ರಿ ಸುಮಾರು 9 ರಿಂದ 11<br />ಗಂಟೆಯ ಸಮಯದಲ್ಲಿ ಈ ಕೃತ್ಯ ನಡೆದಿದೆ. ಗ್ರಾಮಸ್ಥರ ಮಾಹಿತಿ ಪ್ರಕಾರ ಬೆಳೆ ಹಾನಿ ಮಾಡುತ್ತದೆ ಎಂಬ<br />ಕಾರಣಕ್ಕೆ ಮಂಗಗಳ ಸಾಮೂಹಿಕ ಹತ್ಯೆ ನಡೆಸಿರಬಹುದು ಎನ್ನಲಾಗುತ್ತಿದೆ. ಕಿರಿಕಿರಿ ಉಂಟು ಮಾಡುತ್ತಿರುವ<br />ಕಾರಣಕ್ಕೂ ಹತ್ಯೆ ಮಾಡಿರುವ ಸಾಧ್ಯತೆ ಇರಬಹುದು ಎಂದರು.</p>.<p>ಜಿಲ್ಲೆಯಲ್ಲಿ ಕಾಡಾನೆ ದಾಳಿಯ ಬಗ್ಗೆ ದೂರುಗಳು ಇವೆ. ಆದರೆ, ಮಂಗಗಳ ಹಾವಳಿ ಬಗ್ಗೆ ದೂರು ಬಂದಿರಲಿಲ್ಲ.<br />ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಲಾಗುತ್ತಿದೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು<br />ವಿವರಿಸಿದರು.</p>.<p>ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜ್ ಮಾತನಾಡಿ, ಸಹಾಯಕ ಅರಣ್ಯಾಧಿಕಾರಿ ನೇತೃತ್ವದಲ್ಲಿ ಜಂಟಿ<br />ತಂಡ ರಚಿಸಿದ್ದು, ಈಗಾಗಲೇ ತನಿಖೆ ಆರಂಭಗೊಂಡಿದೆ. ಎರಡು ದಿನದಲ್ಲಿ ಫಲಿತಾಂಶ ದೊರೆಯುವ<br />ನಿರೀಕ್ಷೆಯಲ್ಲಿದ್ದೇವೆ. ಜಿಲ್ಲೆಯಲ್ಲಿ ಈ ರೀತಿ ಅಮಾನವೀಯ ಕೃತ್ಯ ಮೊದಲ ಬಾರಿಗೆ ನಡೆದಿದೆ.ಸಕಲೇಶಪುರ, ಮೂಡಿಗೆರೆ, ಕಡೂರು ಭಾಗದಲ್ಲಿ ಮಂಗಗಳ ಹಾವಳಿ ಇದ್ದರೂ ದೂರು ಬಂದಿರಲಿಲ್ಲ.ಮಂಗಗಳ ಹಿಡಿಯುವವರಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದು ತಿಳಿಸಿದರು.</p>.<p>ಉಪವಿಭಾಗಾಧಿಕಾರಿ ಪ್ರತೀಕ್ ಬಾಯಲ್, ಡಿವೈಎಸ್ಪಿ ನಾಗೇಶ್, ತಹಶೀಲ್ದಾರ್ ಮೋಹನ್ ಹಾಗೂ ಅರಣ್ಯ,<br />ಪೊಲೀಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>