ಜಿಲ್ಲೆಯ 2,70,023 ರೈತರು ಅರ್ಜಿ ಸಲ್ಲಿಸಿ, ಯೋಜನೆಗೆ ನೋಂದಣಿ ಮಾಡಿಕೊಂಡಿದ್ದರು. ವಾರ್ಷಿಕ ₹ 6 ಸಾವಿರಗಳನ್ನು ಮೂರು ಕಂತಗಳಲ್ಲಿ ರೈತರ ಖಾತೆಗೆ ನೇರ ಜಮೆ ಮಾಡಲಾಗುತ್ತಿತ್ತು. ಇದಕ್ಕಾಗಿ ಸರ್ಕಾರ ಕೆಲ ನಿಬಂಧನೆ ವಿಧಿಸಿತ್ತು. ಅರ್ಹತೆ ಇಲ್ಲದಿದ್ದರೂ ಸಾವಿರಾರು ರೈತರು ಅರ್ಜಿ ಸಲ್ಲಿಸಿದರು. ರಾಜ್ಯದ 85,206 ರೈತರನ್ನು ಯೋಜನೆಯಿಂದ ಅನರ್ಹಗೊಳಿಸಲಾಗಿದೆ.