<p><strong>ಹಾಸನ</strong>: ‘ನಟ ವಿಷ್ಣುವರ್ಧನ್ ಸ್ಮಾರಕಕ್ಕೆ ಭೂಮಿ ಖರೀದಿಸಿದ್ದು ನಟ ಸುದೀಪ್ ಅವರ ಔದಾರ್ಯವನ್ನು ತೋರಿಸಿದೆ’ ಎಂದು ನಟಿ ರಾಗಿಣಿ ದ್ವಿವೇದಿ ತಿಳಿಸಿದರು.</p><p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಟ ವಿಷ್ಣುವರ್ಧನ್ ಕುಟುಂಬದ ಜೊತೆ ನಿಕಟ ಸಂಬಂಧ ಹೊಂದಿರುವ ಸುದೀಪ್ ಅವರದ್ದು ಉತ್ತಮ ನಡೆ’ ಎಂದರು.</p>.<p>ನಟ ದರ್ಶನ್ ಕುರಿತು ಪ್ರತಿಕ್ರಿಯಿಸಿ, ‘ನನ್ನ ಜೀವನದಲ್ಲಿ ಸಾಕಷ್ಟು ಅನುಭವಿಸಿದ್ದೇನೆ. ನ್ಯಾಯಾಂಗ ವ್ಯವಸ್ಥೆ ಬಗ್ಗೆ ಅಪಾರ ನಂಬಿಕೆ ಇದೆ. ಪ್ರಕ್ರಿಯೆ ವಿಳಂಬವಾಗಬಹುದು. ನ್ಯಾಯ ಸಿಕ್ಕೇ ಸಿಗುತ್ತದೆ’ ಎಂದರು.</p>.<p>‘ಕಮೆಂಟ್ ಬಾಕ್ಸ್ ಸ್ವಚ್ಛ ಭಾರತ್ ಆಗಿದೆ’ ಎಂಬ ನಟಿ ರಮ್ಯಾ ಹೇಳಿಕೆ ಕುರಿತು, ‘ರಮ್ಯಾ ವಿಚಾರವಷ್ಟೇ ಅಲ್ಲ, ಪ್ರತಿಯೊಬ್ಬ ಮಹಿಳೆಗೂ ಹೀಗೇ ಆಗುತ್ತಿದೆ. ಮಹಿಳೆಯರು ಸುಲಭವಾಗಿ ಗುರಿಯಾಗುತ್ತಾರೆ. ಹಾಗೆ ಮಾಡುವುದು ತಪ್ಪು’ ಎಂದರು.</p>.<p>‘ನಿಮ್ಮ ಹತ್ತಿರ ತುಂಬಾ ಸಮಯವಿದೆ. ನಮ್ಮ ಹತ್ತಿರ ಇಲ್ಲ. ಸಮಯ ವ್ಯರ್ಥ ಮಾಡಿಕೊಂಡು ಕಮೆಂಟ್ ಮಾಡುವ ಬದಲು, ಸಾಮಾಜಿಕ ಜಾಲತಾಣಗಳನ್ನು ಒಳ್ಳೆಯದಕ್ಕೆ ಬಳಸಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ‘ನಟ ವಿಷ್ಣುವರ್ಧನ್ ಸ್ಮಾರಕಕ್ಕೆ ಭೂಮಿ ಖರೀದಿಸಿದ್ದು ನಟ ಸುದೀಪ್ ಅವರ ಔದಾರ್ಯವನ್ನು ತೋರಿಸಿದೆ’ ಎಂದು ನಟಿ ರಾಗಿಣಿ ದ್ವಿವೇದಿ ತಿಳಿಸಿದರು.</p><p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಟ ವಿಷ್ಣುವರ್ಧನ್ ಕುಟುಂಬದ ಜೊತೆ ನಿಕಟ ಸಂಬಂಧ ಹೊಂದಿರುವ ಸುದೀಪ್ ಅವರದ್ದು ಉತ್ತಮ ನಡೆ’ ಎಂದರು.</p>.<p>ನಟ ದರ್ಶನ್ ಕುರಿತು ಪ್ರತಿಕ್ರಿಯಿಸಿ, ‘ನನ್ನ ಜೀವನದಲ್ಲಿ ಸಾಕಷ್ಟು ಅನುಭವಿಸಿದ್ದೇನೆ. ನ್ಯಾಯಾಂಗ ವ್ಯವಸ್ಥೆ ಬಗ್ಗೆ ಅಪಾರ ನಂಬಿಕೆ ಇದೆ. ಪ್ರಕ್ರಿಯೆ ವಿಳಂಬವಾಗಬಹುದು. ನ್ಯಾಯ ಸಿಕ್ಕೇ ಸಿಗುತ್ತದೆ’ ಎಂದರು.</p>.<p>‘ಕಮೆಂಟ್ ಬಾಕ್ಸ್ ಸ್ವಚ್ಛ ಭಾರತ್ ಆಗಿದೆ’ ಎಂಬ ನಟಿ ರಮ್ಯಾ ಹೇಳಿಕೆ ಕುರಿತು, ‘ರಮ್ಯಾ ವಿಚಾರವಷ್ಟೇ ಅಲ್ಲ, ಪ್ರತಿಯೊಬ್ಬ ಮಹಿಳೆಗೂ ಹೀಗೇ ಆಗುತ್ತಿದೆ. ಮಹಿಳೆಯರು ಸುಲಭವಾಗಿ ಗುರಿಯಾಗುತ್ತಾರೆ. ಹಾಗೆ ಮಾಡುವುದು ತಪ್ಪು’ ಎಂದರು.</p>.<p>‘ನಿಮ್ಮ ಹತ್ತಿರ ತುಂಬಾ ಸಮಯವಿದೆ. ನಮ್ಮ ಹತ್ತಿರ ಇಲ್ಲ. ಸಮಯ ವ್ಯರ್ಥ ಮಾಡಿಕೊಂಡು ಕಮೆಂಟ್ ಮಾಡುವ ಬದಲು, ಸಾಮಾಜಿಕ ಜಾಲತಾಣಗಳನ್ನು ಒಳ್ಳೆಯದಕ್ಕೆ ಬಳಸಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>