<p><strong>ಸಕಲೇಶಪುರ:</strong> ರಾಜ್ಯ ಸಭಾ ಸದಸ್ಯೆ ಹಾಗೂ ಇನ್ಫೋಸಿಸ್ ಫೌಂಡೇಶನ್ನ ಸ್ಥಾಪಕ-ಅಧ್ಯಕ್ಷೆ ಸುಧಾ ಮೂರ್ತಿ ಭಾನುವಾರ ಪಟ್ಟಣದ ಸಕಲೇಶ್ವರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸುಮಾರು ಒಂದೂವರೆ ಗಂಟೆಗಳ ಕಾಲ ಪೂಜೆ ಸಲ್ಲಿಸಿದರು.</p>.<p>‘ಐತಿಹಾಸಿಕ ಹಿನ್ಕೆಲೆ ಹೊಂದಿರುವ ಸಕಲೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವುದಕ್ಕಾಗಿಯೇ ಬಂದಿದ್ದೇನೆ, ಈ ಹಿಂದೆಯೂ ಸಹ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿ ಹೋಗಿದ್ದೆ’ ಎಂದರು. ಬೆಳಿಗ್ಗೆ 10ಕ್ಕೆ ದೇವಸ್ಥಾನಕ್ಕೆ ಬಂದ ಅವರು, 11.30ರ ವರೆಗೂ ಸಕಲೇಶ್ವರಸ್ವಾಮಿ ಹಾಗೂ ಪಕ್ಕದಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದರು. ದೇವಸ್ಥಾನದ ಅರ್ಚಕ ಸೋಮೇಶ್ ದೇವಸ್ಥಾನದ ಇತಿಹಾಸ ವಿವರಿಸಿದರು.</p>.<p>ಶಾಸಕ ಸಿಮೆಂಟ್ ಮಂಜು ಸಹ ಸುಧಾ ಮೂರ್ತಿಯೊಂದಿಗೆ ಪೂಜೆಯಲ್ಲಿ ಭಾಗವಹಿಸಿದ್ದರು. ರಾಜ್ಯ ಸಭಾ ಅನುದಾನದ ಹಾಗೂ ಇನ್ಫೋಸಿಸ್ ಫೌಂಡೇಶನ್ ಇ ಎಸ್ ಆರ್ ನಿಧಿಯಿಂದ ಸಕಲೇಶಪುರದ ಕ್ರೀಡಾಂಗಣ ಅಭಿವೃದ್ದಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಪತ್ರ ಸಲ್ಲಿಸಿದರು.</p>.<p>ತಹಶೀಲ್ದಾರ್ ಕೆ.ಎಸ್. ಸುಪ್ರೀತಾ, ಪುರಸಭಾ ಮಾಜಿ ಅಧ್ಯಕ್ಷ ಎಸ್.ಡಿ. ಆದರ್ಶ, ಬ್ಯಾಕವರಳ್ಳಿ ಜಯಣ್ಣ, ನಂದಿಕೃಪ ರಾಜು, ಬಿಜೆಪಿ ತಾಲ್ಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್ಸ್ ಸೇರಿದಂತೆ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ:</strong> ರಾಜ್ಯ ಸಭಾ ಸದಸ್ಯೆ ಹಾಗೂ ಇನ್ಫೋಸಿಸ್ ಫೌಂಡೇಶನ್ನ ಸ್ಥಾಪಕ-ಅಧ್ಯಕ್ಷೆ ಸುಧಾ ಮೂರ್ತಿ ಭಾನುವಾರ ಪಟ್ಟಣದ ಸಕಲೇಶ್ವರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸುಮಾರು ಒಂದೂವರೆ ಗಂಟೆಗಳ ಕಾಲ ಪೂಜೆ ಸಲ್ಲಿಸಿದರು.</p>.<p>‘ಐತಿಹಾಸಿಕ ಹಿನ್ಕೆಲೆ ಹೊಂದಿರುವ ಸಕಲೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವುದಕ್ಕಾಗಿಯೇ ಬಂದಿದ್ದೇನೆ, ಈ ಹಿಂದೆಯೂ ಸಹ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿ ಹೋಗಿದ್ದೆ’ ಎಂದರು. ಬೆಳಿಗ್ಗೆ 10ಕ್ಕೆ ದೇವಸ್ಥಾನಕ್ಕೆ ಬಂದ ಅವರು, 11.30ರ ವರೆಗೂ ಸಕಲೇಶ್ವರಸ್ವಾಮಿ ಹಾಗೂ ಪಕ್ಕದಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದರು. ದೇವಸ್ಥಾನದ ಅರ್ಚಕ ಸೋಮೇಶ್ ದೇವಸ್ಥಾನದ ಇತಿಹಾಸ ವಿವರಿಸಿದರು.</p>.<p>ಶಾಸಕ ಸಿಮೆಂಟ್ ಮಂಜು ಸಹ ಸುಧಾ ಮೂರ್ತಿಯೊಂದಿಗೆ ಪೂಜೆಯಲ್ಲಿ ಭಾಗವಹಿಸಿದ್ದರು. ರಾಜ್ಯ ಸಭಾ ಅನುದಾನದ ಹಾಗೂ ಇನ್ಫೋಸಿಸ್ ಫೌಂಡೇಶನ್ ಇ ಎಸ್ ಆರ್ ನಿಧಿಯಿಂದ ಸಕಲೇಶಪುರದ ಕ್ರೀಡಾಂಗಣ ಅಭಿವೃದ್ದಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಪತ್ರ ಸಲ್ಲಿಸಿದರು.</p>.<p>ತಹಶೀಲ್ದಾರ್ ಕೆ.ಎಸ್. ಸುಪ್ರೀತಾ, ಪುರಸಭಾ ಮಾಜಿ ಅಧ್ಯಕ್ಷ ಎಸ್.ಡಿ. ಆದರ್ಶ, ಬ್ಯಾಕವರಳ್ಳಿ ಜಯಣ್ಣ, ನಂದಿಕೃಪ ರಾಜು, ಬಿಜೆಪಿ ತಾಲ್ಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್ಸ್ ಸೇರಿದಂತೆ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>