ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಭಾಷೆ ಅಪಾರ್ಥ ಮಾಡಿಕೊಂಡ ಸುಮಲತಾ: ಎಚ್‌.ಕೆ. ಕುಮಾರಸ್ವಾಮಿ

Last Updated 10 ಜುಲೈ 2021, 11:44 IST
ಅಕ್ಷರ ಗಾತ್ರ

ಹಾಸನ: ಅಕ್ರಮ ಗಣಿಗಾರಿಕೆ ಹಾಗೂ ಕೆಆರ್‌ಎಸ್ ಬಿರುಕು ವಿಚಾರದಲ್ಲಿ ಸಂಸದೆ ಸುಮಲತಾ ಮತ್ತು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ನೀಡುತ್ತಿರುವ ಹೇಳಿಕೆಗಳು ಮನರಂಜನೆಯಾಗಿ ಮಾರ್ಪಟ್ಟಿರುವುದು ಬೇಸರ ಮೂಡಿಸಿದೆ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ಹೇಳಿದರು.

ಕೆ.ಆರ್‌.ಎಸ್ ಬಿರುಕು ಬಿಟ್ಟಿದೆಯೋ, ಇಲ್ಲವೋ ಗೊತ್ತಿಲ್ಲ. ಆದರೆ, ಎಚ್‌.ಡಿ‌.ಕುಮಾರಸ್ವಾಮಿ ಹೇಳಿಕೆಯಲ್ಲಿ ಸಣ್ಣತನ, ಬೇರೆ ತರದ ಯಾವುದೇ ಉದ್ದೇಶ ಇಲ್ಲ. ಗ್ರಾಮೀಣ ಭಾಷೆಯನ್ನು ಸುಮಲತಾ ಅಪಾರ್ಥ ಮಾಡಿಕೊಂಡಿದ್ದಾರೆ. ಒಬ್ಬ ಪುರುಷ ಸಂಸದನಿಗೆ ಇದೇ ರೀತಿ ಹೇಳಿದ್ದರೆ ಆಗಲೂ ಈ ರೀತಿ ಅಪಾರ್ಥ ಕಲ್ಪಿಸುತ್ತಿದ್ರಾ? ಮಾಡಬೇಕಾಗಿರುವ ಅಭಿವೃದ್ಧಿ ಕೆಲಸಗಳು ನೂರಾರು ಇದೆ. ಅದರ ಕಡೆ ಗಮನ ನೀಡಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT