ಆಟೊ, ಕ್ಯಾಬ್ ಚಾಲಕರ ಸಂಘ, ತರಕಾರಿ, ಎಪಿಎಂಸಿ ವರ್ತಕರು, ಎಲ್ಲ ಅಂಗಡಿ ಮಾಲೀಕರು ಶನಿವಾರ ಸ್ವಯಂ ಪ್ರೇರಿತ ಬಂದ್ ಮೂಲಕ ಹೋರಾಟಕ್ಕೆ ಶಕ್ತಿ ತುಂಬಲಿದ್ದಾರೆ. ಸರ್ಕಾರಿ ಕಚೇರಿಗಳಿಗೆ ಮುತ್ತಿಗೆ ಹಾಕಲಾಗುವುದು. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಜಾತಿ, ಸಮುದಾಯಗಳ ನಡುವೆ ಕಲಹ ಸೃಷ್ಟಿಸುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಬೇಕಿದೆ. ತಜ್ಞರು, ಕನ್ನಡಪರ ಹೋರಾಟಗಾರರು, ಸಾಹಿತಿಗಳ ಅಭಿಪ್ರಾಯ ಪಡೆಯದೆ ಪ್ರಾಧಿಕಾರ ರಚಿಸಲಾಗಿದೆ. ಪ್ರಶ್ನಿಸದೆ ಸುಮ್ಮನಿದ್ದರೆ ನಮ್ಮ ಹಕ್ಕುಗಳನ್ನು ಮಾರಾಟ ಮಾಡಲು ಜನಪ್ರತಿನಿಧಿಗಳು ಹಿಂಜರಿಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.