ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸಕಾಲಕ್ಕೆ ಚಿಕಿತ್ಸೆ ನೀಡದೆ, ವೈದ್ಯರ ನಿರ್ಲಕ್ಷ್ಯದಿಂದ ಸೆ.15ರಂದು ಸೊಲ್ಲಾಪುರಿ ಬೋವಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿರುವುದರಿಂದ ಇಲಾಖೆ ಅಧಿಕಾರಿಗಳು, ವೈದ್ಯರ ತಂಡದಿಂದ ಪರಿಶೀಲನೆ ನಡೆಸಲಾಯಿತು. ಕುಡಿಯುವ ನೀರಿನಲ್ಲಿ ಸಮಸ್ಯೆ ಇರಬಹುದು ಎಂಬ ಶಂಕೆಯಿಂದ ಕುಡಿಯುವ ನೀರನ್ನು ವೈದ್ಯಕೀಯ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಕಳುಹಿಸಲು ನಿರ್ಧರಿಸಲಾಗಿದೆ ಎಂದರು.