ಹಾಸನ: ಜೂನ್ 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾಗುವ ಹಿನ್ನೆಲೆಯಲ್ಲಿ ಜೂನ್ 1 ರಿಂದಲೇ ಶಾಲೆಯಲ್ಲಿ ತರಗತಿ ನಡೆಸಲು ಅವಕಾಶ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ಸರ್ಕಾರಕ್ಕೆ ಮನವಿ ಮಾಡಿದರು.
ಲಾಕ್ಡೌನ್ ನಿರ್ಬಂಧ ವೇಳೆ ಮಕ್ಕಳ ಅನುಕೂಲಕ್ಕಾಗಿ ಫೋನ್ ಇನ್, ಆನ್ ಲೈನ್ ಪಾಠ, ರೇಡಿಯೊ ಹಾಗೂ ಚಂದನ ವಾಹಿಣಿಯಲ್ಲಿ ಪುನರ್ಮನನ ಕಾರ್ಯಕ್ರಮ ನಡೆಸಲಾಗಿದೆ. ಆದರೆ, ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಹಾಗೂ ನೆಟ್ವರ್ಕ್ ಸಮಸ್ಯೆಯಿಂದ ಎಲ್ಲಾ ಮಕ್ಕಳಿಗೂ ಸೌಲಭ್ಯ ತಲುಪಿಲ್ಲ. ಆದ್ದರಿಂದ ನೇರವಾಗಿ ಶಾಲೆಯಲ್ಲಿ ಪಾಠ ಮಾಡಲು ಅನುವು ಮಾಡಿಕೊಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.