ಕೊರೊನಾ ಸೋಂಕಿನ ನಿಯಂತ್ರಣ ಕ್ರಮ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಪ್ರಜ್ವಲ್, ‘ಲಾಕ್ಡೌನ್ ಇದ್ದರೂ ಮದ್ಯ ಮಾರಾಟ ಮಾಡುತ್ತಿದ್ದ ನಗರದ ಬಿಜೆಪಿ ಕಾರ್ಯಕರ್ತನಿಗೆ ಸೇರಿದ ಕ್ವಾಲಿಟಿ ಬಾರ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಸ್ಟಾಕ್ನಲ್ಲಿ ವ್ಯತ್ಯಾಸ ಬಂದಿದೆ. ಈವರೆಗೂ ಏಕೆ ಕ್ರಮ ಕೈಗೊಂಡಿಲ್ಲ?’ ಎಂದು ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸಗೌಡ ಹಾಗೂ ಅಬಕಾರಿ ಉಪ ಆಯುಕ್ತ ಗೋಪಾಲಕೃಷ್ಣಗೌಡ ಅವರನ್ನು ತರಾಟೆಗೆ ತೆಗೆದುಕೊಂಡರು.