ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾ.ಪಂ. ಇಒ ಬಂಧನಕ್ಕೆ ಒತ್ತಾಯ

Last Updated 18 ಆಗಸ್ಟ್ 2020, 13:05 IST
ಅಕ್ಷರ ಗಾತ್ರ

ಸಕಲೇಶಪುರ: ತಾಲ್ಲೂಕಿನ ಬಾಳ್ಳುಪೇಟೆ ಸಮೀಪದ ಚಿಕ್ಕನಾಯಕನಹಳ್ಳಿ ಗ್ರಾಮದ ದಲಿತ ಯುವಕ ಜಯಕುಮಾರ್‌ ಎಂಬುವವರನ್ನು ಬೆತ್ತದಿಂದ ಹೊಡೆದಿರುವ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಆರ್‌.ಹರೀಶ್‌ ಅವರನ್ನು ಕೂಡಲೇ ಬಂಧಿಸಬೇಕು ಎಂದು ತಾಲ್ಲೂಕು ದಲಿತ ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ.

ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಈಗಾಗಲೇ ದೂರು ದಾಖಲಾಗಿದೆ. ಆದರೆ ಪೊಲೀಸರು ಅವರನ್ನು ಬಂಧಿಸಿಲ್ಲ. ಬಂಧಿಸುವಂತೆ ಒತ್ತಾಯಿಸಿ ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸಮಿತಿ ಅಧ್ಯಕ್ಷ ಎಚ್‌.ಇ. ದೊಡ್ಡಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಲಾಠಿಯಿಂದ ಹೊಡೆದ ಬಗ್ಗೆ ಪ್ರಕರಣ ದಾಖಲಿಸಬೇಕು. ಆದರೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಮೊಕದ್ದಮೆ ದಾಖಲು ಮಾಡಿರುವ ಕ್ರಮ ಸರಿಯಲ್ಲ’ ಎಂದು ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಕೆ.ಪಿ. ಕೃಷ್ಣೇಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT