<p><strong>ಹಾಸನ</strong>: ತೌಕ್ತೆ ಚಂಡಮಾರುತದ ಪರಿಣಾಮ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶನಿವಾರ ಸಾಧಾರಣ ಮಳೆಯಾಗಿದೆ.</p>.<p>ನಸುಕಿನಿಂದಲೇ ಆರಂಭವಾದ ತುಂತುರು ಮಳೆ ಬಿಟ್ಟು ಬಿಟ್ಟು ರಾತ್ರಿವರೆಗೂ ಸುರಿಯಿತು. ಮಧ್ಯಾಹ್ನ ಸ್ವಲ್ಪ ಹೊತ್ತು ಬಿಸಿಲು ಇತ್ತು. ಸಕಲೇಶಪುರ, ಆಲೂರು, ಬೇಲೂರು ಸುತ್ತಮುತ್ತ ಆಗಾಗ ಜೋರು ಗಾಳಿಸಹಿತ ಮಳೆಯಾಯಿತು. ರೈತರು ಹಾಗೂ ಕಾಫಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ.</p>.<p>ಕೊಣನೂರು ವ್ಯಾಪ್ತಿಯಲ್ಲಿ ಬೆಳಿಗ್ಗೆಯಿಂದ ಸುರಿಯುತ್ತಿದ್ದ ತುಂತುರು ಮಳೆ ಮಧ್ಯಾಹ್ನದ ನಂತರ ಸ್ವಲ್ಪ ಸಮಯ ಜೋರಾಗಿಯೇ ಬಂತು. ಚನ್ನರಾಯಪಟ್ಟಣ ತಾಲ್ಲೂಕಿನ ನುಗ್ಗೇಹಳ್ಳಿ, ಶ್ರವಣಬೆಳಗೊಳದಲ್ಲೂಮಳೆ ಬಿದ್ದಿತು.</p>.<p>ದಿನವಿಡೀ ಮೋಡ ಕವಿದ ವಾತಾವರಣ ಇದ್ದು, ಅರಕಲಗೂಡು, ಬೇಲೂರು, ಹಳೇಬೀಡು ಸುತ್ತಮುತ್ತ ಸಾಧಾರಣ ಮಳೆಯಾಗಿದೆ. ಮಲೆನಾಡು ಭಾಗದಲ್ಲಿ ತುಂತುರು ಮಳೆಗೆ ಜನತೆ ಹೈರಾಣಾಗಿದ್ದಾರೆ. ವಾತಾವರಣ ತಂಪಿನಿಂದ ಕೂಡಿದೆ.</p>.<p>ಹಾಸನ ನಗರದಲ್ಲಿ ಉತ್ತಮ ಮಳೆಯಾಗಿದ್ದು, ಅಗತ್ಯವಸ್ತುಗಳ ಖರೀದಿಗೆ ಜನರಿಗೆ ತೊಂದರೆ ಉಂಟಾಯಿತು. ಜಿಟಿಜಿಟಿ ಮಳೆಯಿಂದಾಗಿ ಹೊರಗೆ ಹೋಗದಂತಾಗಿದೆ. ನಗರ ಬಸ್ ನಿಲ್ದಾಣದಲ್ಲಿನ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಕೊಡೆ ನೆರವಿನೊಂದಿಗೆ ವ್ಯಾಪಾರ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ತೌಕ್ತೆ ಚಂಡಮಾರುತದ ಪರಿಣಾಮ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶನಿವಾರ ಸಾಧಾರಣ ಮಳೆಯಾಗಿದೆ.</p>.<p>ನಸುಕಿನಿಂದಲೇ ಆರಂಭವಾದ ತುಂತುರು ಮಳೆ ಬಿಟ್ಟು ಬಿಟ್ಟು ರಾತ್ರಿವರೆಗೂ ಸುರಿಯಿತು. ಮಧ್ಯಾಹ್ನ ಸ್ವಲ್ಪ ಹೊತ್ತು ಬಿಸಿಲು ಇತ್ತು. ಸಕಲೇಶಪುರ, ಆಲೂರು, ಬೇಲೂರು ಸುತ್ತಮುತ್ತ ಆಗಾಗ ಜೋರು ಗಾಳಿಸಹಿತ ಮಳೆಯಾಯಿತು. ರೈತರು ಹಾಗೂ ಕಾಫಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ.</p>.<p>ಕೊಣನೂರು ವ್ಯಾಪ್ತಿಯಲ್ಲಿ ಬೆಳಿಗ್ಗೆಯಿಂದ ಸುರಿಯುತ್ತಿದ್ದ ತುಂತುರು ಮಳೆ ಮಧ್ಯಾಹ್ನದ ನಂತರ ಸ್ವಲ್ಪ ಸಮಯ ಜೋರಾಗಿಯೇ ಬಂತು. ಚನ್ನರಾಯಪಟ್ಟಣ ತಾಲ್ಲೂಕಿನ ನುಗ್ಗೇಹಳ್ಳಿ, ಶ್ರವಣಬೆಳಗೊಳದಲ್ಲೂಮಳೆ ಬಿದ್ದಿತು.</p>.<p>ದಿನವಿಡೀ ಮೋಡ ಕವಿದ ವಾತಾವರಣ ಇದ್ದು, ಅರಕಲಗೂಡು, ಬೇಲೂರು, ಹಳೇಬೀಡು ಸುತ್ತಮುತ್ತ ಸಾಧಾರಣ ಮಳೆಯಾಗಿದೆ. ಮಲೆನಾಡು ಭಾಗದಲ್ಲಿ ತುಂತುರು ಮಳೆಗೆ ಜನತೆ ಹೈರಾಣಾಗಿದ್ದಾರೆ. ವಾತಾವರಣ ತಂಪಿನಿಂದ ಕೂಡಿದೆ.</p>.<p>ಹಾಸನ ನಗರದಲ್ಲಿ ಉತ್ತಮ ಮಳೆಯಾಗಿದ್ದು, ಅಗತ್ಯವಸ್ತುಗಳ ಖರೀದಿಗೆ ಜನರಿಗೆ ತೊಂದರೆ ಉಂಟಾಯಿತು. ಜಿಟಿಜಿಟಿ ಮಳೆಯಿಂದಾಗಿ ಹೊರಗೆ ಹೋಗದಂತಾಗಿದೆ. ನಗರ ಬಸ್ ನಿಲ್ದಾಣದಲ್ಲಿನ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಕೊಡೆ ನೆರವಿನೊಂದಿಗೆ ವ್ಯಾಪಾರ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>