ಈ ಪ್ರಕರಣ ಎರಡು ವರ್ಷ ಹಳೆಯದಾಗಿದ್ದು, ತನಿಖೆಗೆ ಕಾನೂನು ವ್ಯಾಪ್ತಿಯಲ್ಲಿ ಸಹಕಾರ ನೀಡುತ್ತಿದ್ದರು. ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ನಾಲ್ಕು ದಿನ ತನಿಖೆಗೆ ಒಳಪಡಿಸಿ, ನಂತರ ಸಹಕರಿಸುತ್ತಿಲ್ಲ ಎಂಬ ಕಾರಣಕ್ಕೆ ಬಂಧಿಸಿರುವುದು ಸರಿಯಲ್ಲ. ಹಬ್ಬದ ದಿನದಲ್ಲೂ ಬಿಡುವು ನೀಡಿಲ್ಲ ಮತ್ತು ವೈದ್ಯಕೀಯ ಸೌಲಭ್ಯ ಸಹ ಕಲ್ಪಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ನಾಯಕರು ಅಧಿಕಾರ ದುರುಪಯೋಗ ಪಡಿಸಿಕೊಂಡು ಇ.ಡಿ ಸೇರಿದಂತೆ ತನಿಖಾ ಸಂಸ್ಥೆಗಳನ್ನು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಬಿಡುತ್ತಿಲ್ಲ. ಇವುಗಳ ಮೇಲೆ ಒತ್ತಡ ಹೇರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ ಎಂದರು.