ಬೆಳಿಗ್ಗೆಯಿಂದ ಆಹಾರವಿಲ್ಲದೇ, ಕರುಗಳು ಬಳಲಿದ್ದವು. ನಾಯಿಗಳು ಕಚ್ಚಿ ಸಾಯಿಸುತ್ತವೆ ಎಂಬ ಆತಂಕದಿಂದ ಅವುಗಳನ್ನುವಾಹನದಲ್ಲಿ ತಂದು ತಾಲ್ಲೂಕು ಕಚೇರಿ ಆವರಣದಲ್ಲಿ ಬಿಡಲಾಯಿತು ಎಂದು ಸ್ಥಳೀಯರಾದ ಮಹೇಶ್ ತಿಳಿಸಿದರು. ಬಳಿಕ, ಅವುಗಳನ್ನು ತಾಲ್ಲೂಕು ಆಡಳಿತವು ಮೈಸೂರಿನ ಪಿಂಜರಪೋಳಗೆ ಕಳುಹಿಸುವ ವ್ಯವಸ್ಥೆ ಮಾಡಿತು.