ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಶಾಸಕ ಪ್ರೀತಂ ಗೌಡ, ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಕೆ.ಸುರೇಶ್, ಸಂಘಟನಾ ಕಾರ್ಯದರ್ಶಿ ಅರುಣ್, ಪ್ರಕೋಷ್ಠ ಸಂಯೋಜಕ ಭಾನುಪ್ರಕಾಶ್, ಸಹ ಸಂಯೋಜಕ ಶಿವಯೋಗಿ ಸ್ವಾಮಿ, ರಾಜ್ಯಸಭಾ ಸದಸ್ಯ ನಾರಾಯಣ, ಹಾವೇರಿ ಲೋಕಸಭಾ ಸದಸ್ಯ ಶಿವಕುಮಾರ ಉದಾಸಿ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯ್ಕ ಹಾಜರಿದ್ದರು. ವಿಭಾಗ ಪ್ರಭಾರಿ ಮೈ.ವಿ.ರವಿ ಸ್ವಾಗತಿಸಿದರು.