ಗ್ರಾಮದ ಮಲ್ಲೇಶ್ ಎಂಬುವವರ ಕಾಫಿ ತೋಟದಲ್ಲಿ ಕಾಫಿ ಹಣ್ಣು ಕೊಯ್ಲಿಗಾಗಿ ಬಂದಿದ್ದ ಅಮೀರ್ ಹುಸೇನ್– ಹಸೀನಾಬಾನು ದಂಪತಿ, ತಮ್ಮ ಪುತ್ರನನ್ನು ಕೂಡಿ ಹಾಕಿದ್ದರು. ದಂಪತಿಗೆ 7 ಮಕ್ಕಳಿದ್ದು, ಈ ಬಾಲಕ ಮಾನಸಿಕ ಅಸ್ವಸ್ಥ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ, ಗ್ರಾಮಾಂತರ ಠಾಣೆ ಪಿಎಸ್ಐ ಖತೀಜಾ ಹಾಗೂ ಸಿಬ್ಬಂದಿ ತೋಟಕ್ಕೆ ತೆರಳಿ ಬಾಲಕನನ್ನು ಪಟ್ಟಣದ ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರು.