ಹಾಸನ: ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಬೂವನಹಳ್ಳಿ ಸಮೀಪ ಭಾನುವಾರ ರಾತ್ರಿ ಲಾರಿ ಡಿಕ್ಕಿ ಹೊಡೆದು, ದ್ವಿಚಕ್ರ ವಾಹನದಲ್ಲಿದ್ದ ಮೂರು ವರ್ಷದ ಅವಳಿ ಮಕ್ಕಳಾದ ಪ್ರಣತಿ ಮತ್ತು ಪ್ರಣವ್ ಸ್ಥಳದಲ್ಲೇ ಮೃತಪಟ್ಟರೆ, ತಾಯಿ ಗವೇನಹಳ್ಳಿಯ ಜ್ಯೋತಿ (32) ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟರು. ಅವರೊಂದಿಗಿದ್ದ ಪತಿ ಶಿವಾನಂದ್ ಗಂಭೀರವಾಗಿಗಾಯಗೊಂಡಿದ್ದು ಚಿಕಿತ್ಸೆ ನೀಡಲಾಗುತ್ತಿದೆ.