ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ದೇವೇಗೌಡರ ಕುಟುಂಬದ ಪರಿಶ್ರಮಕ್ಕೆ ಜಿಲ್ಲೆಯ ಅಭಿವೃದ್ಧಿಯೇ ಸಾಕ್ಷಿ: ಎಚ್.ಡಿ.ರೇವಣ್ಣ

Published : 10 ಡಿಸೆಂಬರ್ 2024, 0:45 IST
Last Updated : 10 ಡಿಸೆಂಬರ್ 2024, 0:45 IST
ಫಾಲೋ ಮಾಡಿ
Comments
ರಾಜ್ಯ ಸರ್ಕಾರ ಕೇಂದ್ರವನ್ನು ವಿಶ್ವಾಸದಲ್ಲಿ ಇಟ್ಟುಕೊಳ್ಳಬೇಕು‌. ಬೆಳಿಗ್ಗೆ ಎದ್ದರೆ ಪ್ರಧಾನಿಯನ್ನು ಬೈಯುತ್ತಾರೆ. ವಿಶ್ವಾಸ ಇಟ್ಟುಕೊಂಡರೆ ಮಾತ್ರ ಕೇಂದ್ರ ಸರ್ಕಾರ ರಾಜ್ಯದ ಪರ ನಿಲುವು ಹೊಂದಲಿದೆ.
ಎಚ್‌.ಡಿ. ರೇವಣ್ಣ ಶಾಸಕ
ರೈಲು ಕಂಬಿ ಕಿತ್ತುಕೊಂಡು ಹೋದವರು
ಈ ಜಿಲ್ಲೆಗೆ ಕಾಂಗ್ರೆಸ್ ಪಕ್ಷ ಏನು ಕೊಡುಗೆ ಕೊಟ್ಟಿದೆ? ಎಂಬುದನ್ನು ಹೇಳಲಿ. ಬ್ರಿಟಿಷರ ಕಾಲದಲ್ಲಿ ಆಗಿದ್ದ ಹಾಸನ– ಮೈಸೂರು ರೈಲು ಮಾರ್ಗದ ಕಂಬಿ ಕಿತ್ತುಕೊಂಡು ಹೋದವರು ಕಾಂಗ್ರೆಸ್‌ನವರು ಎಂದು ಎಚ್.ಡಿ. ರೇವಣ್ಣ ಆರೋಪಿಸಿದರು. ದೇವೇಗೌಡರು ಪ್ರಧಾನಮಂತ್ರಿ ಆಗಿದ್ದ ಸಂದರ್ಭದಲ್ಲಿ ಹತ್ತೂವರೆ ತಿಂಗಳಿನಲ್ಲಿ ಆ ರೈಲ್ವೆ ಮಾರ್ಗ ಮರು ನಿರ್ಮಾಣ ಮಾಡಲು ಕ್ರಮ ಕೈಗೊಂಡರು ಎಂದರು. ಈ ಜಿಲ್ಲೆಗೆ ಉಪ ಮುಖ್ಯಮಂತ್ರಿ ಏನು ಕೊಡುಗೆ ಕೊಟ್ಟಿದ್ದಾರೆ? ರೈಲ್ವೆ ಮಾರ್ಗ ಕೋರ್ಟ್ ನೂತನ ಬಸ್ ನಿಲ್ದಾಣಗಳನ್ನು ಕೊಟ್ಟಿದ್ದು ಯಾರು? ಇವೆಲ್ಲ ಸಾಕ್ಷಿ ಗುಡ್ಡೆಗಳಲ್ಲವೇ? ಗಿರಾಕಿಗಳೇ ಸರ್ಕಾರಿ ಆಸ್ಪತ್ರೆ ಎಂಜಿನಿಯರ್ ವೈದ್ಯಕೀಯ ಕಾಲೇಜು ನರ್ಸಿಂಗ್ ಕಾಲೇಜುಗಳನ್ನು ನೋಡಿ. ಈ ಜಿಲ್ಲೆಯ ಜನ ದೇವೇಗೌಡರ ಕುಟುಂಬಕ್ಕೆ ರಾಜಕೀಯ ಶಕ್ತಿ ಕೊಟ್ಟಿದ್ದಾರೆ. ಅವರ ಋಣ ನಮ್ಮ ಮೇಲಿದ್ದು ಅದನ್ನು ತೀರಿಸುತ್ತೇವೆ ಎಂದು ಹೇಳಿದರು.
ನಕಲಿ ಕಾಂಗ್ರೆಸ್‌
ಹಿಂದಿನ ಕಾಂಗ್ರೆಸ್ ಈಗ ಇಲ್ಲ. ಈಗ ಇರುವುದು ನಕಲಿ ಕಾಂಗ್ರೆಸ್ ಎಂದು ಟೀಕಿಸಿದ ರೇವಣ್ಣ ನಮ್ಮಿಂದ ವಲಸೆ ಹೋದವರು ಈಗ ಅಲ್ಲಿದ್ದಾರೆ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡರ ವಿರುದ್ಧ ವಾಗ್ದಾಳಿ ನಡೆಸಿದರು. ಮೂರು ಚುನಾವಣೆಯಲ್ಲಿ ಒಂದು ರೂಪಾಯಿ ಖರ್ಚು ಮಾಡಿಸದೇ ಗೆಲ್ಲಿಸಿಕೊಂಡು ಬಂದೆ. ಇದಕ್ಕೆ ಜೇನುಕಲ್ ಸಿದ್ದೇಶ್ವರ ಸ್ವಾಮಿಯೇ ಸಾಕ್ಷಿ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT