ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿದೇವತೆ ದರ್ಶನಕ್ಕೆ ಗಣ್ಯರ ದಂಡು

ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಎಸ್.ಟಿ.ಸೋಮಶೇಖರ್‌, ಸಂಸದ ಪ್ರತಾಪ್ ಸಿಂಹ ದರ್ಶನ
Last Updated 2 ನವೆಂಬರ್ 2021, 14:00 IST
ಅಕ್ಷರ ಗಾತ್ರ

ಹಾಸನ: ಹಾಸನಾಂಬಾ ದರ್ಶನೋತ್ಸವ ಆರನೇ ದಿನವಾದ ಮಂಗಳವಾರ ಅಪಾರ ಸಂಖ್ಯೆಯಲ್ಲಿ ಭಕ್ತರು ದೇವಿ ದರ್ಶನ ಪಡೆದರು.

ಬೆಳಿಗ್ಗೆಯಿಂದಲೇ ಭಕ್ತರು ದೇವಸ್ಥಾನದತ್ತ ಮುಖ ಮಾಡಿದ್ದರಿಂದ ಎಲ್ಲ ವಿಭಾಗದ ಸಾಲುಗಳು ಭರ್ತಿಯಾಗಿದ್ದವು. ಪೊಲೀಸರು ಜನರನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು. ಮಧ್ಯಾಹ್ನ ನಂತರ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾಯಿತು. ದೇವಿ ದರ್ಶನಕ್ಕೆ ಎರಡರಿಂದ ಮೂರು ತಾಸು ಸರದಿ ಸಾಲಿನಲ್ಲಿ ಸಾಗಬೇಕಾಯಿತು.

ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಪ್ರತಾಪ್ ಸಿಂಹ, ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌,ವಿಧಾನ ಪರಿಷತ್ ಸದಸ್ಯರಾದ ವಿ.ಎಸ್.ಉಗ್ರಪ್ಪ, ರಮೇಶ್‌ ಗೌಡ, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ
ಅವರ ಪತ್ನಿ ಚನ್ನಮ್ಮ ದೇವೇಗೌಡ, ಅವರ ಪುತ್ರಿ ಶೈಲಜಾ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಬಿ.ಎಸ್.ರಾಜಶೇಖರ್‌, ಕಿರಿಕೋಡ್ಲಿ ಮಠದ ಸದಾಶಿವ ಸ್ವಾಮೀಜಿ, ಸಂಗೀತ ನಿರ್ದೇಶಕ ಹಂಸಲೇಖ ಅವರ ಪತ್ನಿ ಲತಾ ಹಂಸಲೇಖ, ನ್ಯಾಯಾಧೀಶರು ಹಾಗೂ ಇತರೆ ಗಣ್ಯರು ಕುಟುಂಬ ಸಮೇತರಾಗಿ ಹಾಸನಾಂಬೆ ಹಾಗೂ ಸಿದ್ಧೇಶ್ವರ ಸ್ವಾಮಿ ದರ್ಶನ ಪಡೆದರು.

ಸರದಿ ಸಾಲಿನಲ್ಲಿ ನಿಂತಿರುವ ಭಕ್ತಾದಿಗಳಿಗೆ ಕುಡಿಯುವ ನೀರು ಒದಗಿಸುವ ಕಾರ್ಯವನ್ನು ಸ್ಕೌಟ್ಸ್ ಅಂಡ್‌ ಗೈಡ್ಸ್‌ ಹಾಗೂ ಇತರೆ ಸಂಘಟನೆಗಳ ಕಾರ್ಯಕರ್ತರು ಮಾಡುತ್ತಿದ್ದಾರೆ. ಅಧಿದೇವತೆ ದರ್ಶನಕ್ಕೆ ಬರುವ ಜನಪ್ರತಿನಿಧಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಪೊಲೀಸ್‌ ಇಲಾಖೆ ಅಗತ್ಯ ಬಿಗಿ ಭದ್ರತೆ ಕೈಗೊಂಡಿದೆ.

₹ 300 ಹಾಗೂ ಸಾವಿರ ರೂಪಾಯಿ ದರದ ಟಿಕೆಟ್‌ ದರ್ಶನದ ಸಾಲುಗಳು ಸಹ ಭರ್ತಿಯಾಗಿತ್ತು. ಸತತ ನಾಲ್ಕು ದಿನಗಳಿಂದ ಸಂಜೆ ನಗರದಲ್ಲಿ ಮಳೆ ಸುರಿಯುತ್ತಿರುವುದರಿಂದ ಭಕ್ತರಿಗೆ ದರ್ಶನ ಪಡೆಯಲು ಅಡ್ಡಿಯಾಗಿದೆ. ಸಂಜೆ ಅರ್ಧ ತಾಸುಮಳೆ ಸುರಿಯಿತು.

ಹಾಸನಾಂಬಾ ದರ್ಶನಕ್ಕೆ ಬರುತ್ತಿರುವವರ ಭಕ್ತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಹಾಗೂ ಮಳೆ ಅಡಚಣೆ ಎದುರಾಗುತ್ತಿರುವುದರಿಂದ ದರ್ಶನದ ಅವಧಿಯನ್ನು ರಾತ್ರಿ 10 ಗಂಟೆವರೆಗೆ ಜಿಲ್ಲಾಡಳಿತ ವಿಸ್ತರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT