<p><strong>ಬೇಲೂರು</strong>: ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ತಾಲ್ಲೂಕಿನ ಚೀಕನಹಳ್ಳಿ ಹಾಗೂ ಹುನುಗನಹಳ್ಳಿ ಗ್ರಾಮಸ್ಥರು ಇಲ್ಲಿನ ಅರಣ್ಯ ಇಲಾಖೆ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಗ್ರಾಮಸ್ಥ ರಮೇಶ್ ಮಾತನಾಡಿ, ‘ಕಾಡಾನೆಗಳ ಹಿಂಡು ಪ್ರತಿನಿತ್ಯ ಬೆಳೆ ಹಾಳುಮಾಡುತ್ತಿವೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಶಾಶ್ವತ ಪರಿಹಾರ ನೀಡಿ ಇಲ್ಲದಿದ್ದರೆ ನಮ್ಮನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಿ, ಕೆಲಸಕ್ಕೆ ಕಾರ್ಮಿಕರು ಬಾರದೆ ತೊಂದರೆಯಾಗುತ್ತಿದೆ’ ಎಂದರು.</p>.<p>ವಲಯ ಅರಣ್ಯಾಧಿಕಾರಿ ವಿನಯ್ ಮಾತನಾಡಿ, ‘ಮಲಸಾವರ ಹಾಗೂ ಚೀಕನಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳು ಬೀಡುಬಿಟ್ಟಿವೆ, ಇದರ ಬಗ್ಗೆ ನಾವು ಜನರಿಗೆ ಜಾಗೃತಿ ಮೂಡಿಸುವುದರ ಜೊತೆಗೆ ನಮ್ಮ ಮೇಲಾಧಿಕಾರಿಗಳಿಗೆ ತಿಳಿಸುತ್ತಿದ್ದೇವೆ’ ಎಂದರು.</p>.<p>ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಪ್ರದೀಪ್, ಕಿರಣ, ಸಂತೋಷ್, ಮಂಜುನಾಥ್, ಚಕ್ರವರ್ತಿ, ಎಲೆನ್, ಪ್ರಸನ್ನ, ರಾಧ, ಪೂರ್ಣೇಶ್, ಮದನ್, ರಂಜಿತ್, ಅಜಿತ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು</strong>: ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ತಾಲ್ಲೂಕಿನ ಚೀಕನಹಳ್ಳಿ ಹಾಗೂ ಹುನುಗನಹಳ್ಳಿ ಗ್ರಾಮಸ್ಥರು ಇಲ್ಲಿನ ಅರಣ್ಯ ಇಲಾಖೆ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಗ್ರಾಮಸ್ಥ ರಮೇಶ್ ಮಾತನಾಡಿ, ‘ಕಾಡಾನೆಗಳ ಹಿಂಡು ಪ್ರತಿನಿತ್ಯ ಬೆಳೆ ಹಾಳುಮಾಡುತ್ತಿವೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಶಾಶ್ವತ ಪರಿಹಾರ ನೀಡಿ ಇಲ್ಲದಿದ್ದರೆ ನಮ್ಮನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಿ, ಕೆಲಸಕ್ಕೆ ಕಾರ್ಮಿಕರು ಬಾರದೆ ತೊಂದರೆಯಾಗುತ್ತಿದೆ’ ಎಂದರು.</p>.<p>ವಲಯ ಅರಣ್ಯಾಧಿಕಾರಿ ವಿನಯ್ ಮಾತನಾಡಿ, ‘ಮಲಸಾವರ ಹಾಗೂ ಚೀಕನಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳು ಬೀಡುಬಿಟ್ಟಿವೆ, ಇದರ ಬಗ್ಗೆ ನಾವು ಜನರಿಗೆ ಜಾಗೃತಿ ಮೂಡಿಸುವುದರ ಜೊತೆಗೆ ನಮ್ಮ ಮೇಲಾಧಿಕಾರಿಗಳಿಗೆ ತಿಳಿಸುತ್ತಿದ್ದೇವೆ’ ಎಂದರು.</p>.<p>ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಪ್ರದೀಪ್, ಕಿರಣ, ಸಂತೋಷ್, ಮಂಜುನಾಥ್, ಚಕ್ರವರ್ತಿ, ಎಲೆನ್, ಪ್ರಸನ್ನ, ರಾಧ, ಪೂರ್ಣೇಶ್, ಮದನ್, ರಂಜಿತ್, ಅಜಿತ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>