<p><strong>ಹಾಸನ</strong>: ಜಿಲ್ಲೆಯ ಜೀವನಾಡಿ ಹೇಮಾವತಿ ನದಿಗೆ ತಾಲ್ಲೂಕಿನ ಗೊರೂರು ಬಳಿ ಜಲಾಶಯ ನಿರ್ಮಿಸಲಾಗಿದ್ದು, ಈ ಜಲಾಶಯದ ಆವರಣದಲ್ಲಿ ಕೆಆರ್ಎಸ್ ಮಾದರಿಯ ಉದ್ಯಾನ ನಿರ್ಮಾಣ ಮಾಡಬೇಕು ಎನ್ನುವ ದಶಕಗಳ ಬೇಡಿಕೆ ಇನ್ನೂ ಈಡೇರುತ್ತಿಲ್ಲ.</p>.<p>ಖಾಸಗಿ ಸಹಭಾಗಿತ್ವದಲ್ಲಿ ಹೇಮಾವತಿ ಜಲಾಶಯದ ಬಳಿ ಉದ್ಯಾನ ಅಭಿವೃದ್ಧಿ ಪಡಿಸುವ ಯೋಜನೆಯನ್ನು ಜಲಾಶಯದ ಅಧಿಕಾರಿಗಳು ಸಿದ್ಧಪಡಿಸಿ, ಕಾವೇರಿ ನೀರಾವರಿ ನಿಗಮಕ್ಕೆ ಸಲ್ಲಿಸಿದ್ದಾರೆ.</p>.<p>ಹೇಮಾವತಿ ಜಲಾಶಯವನ್ನು 1979ರಲ್ಲಿ ನಿರ್ಮಿಸಲಾಗಿದೆ. ಜಲಾಶಯದ ಮುಂಭಾಗ 446 ಎಕರೆ ಜಾಗವಿದ್ದು, ಇದರಲ್ಲಿ ಕೆಆರ್ಎಸ್ ಮಾದರಿ ಉದ್ಯಾನ ನಿರ್ಮಿಸಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಬೇಕು ಎಂಬುದು ದಶಕದ ಕನಸು.</p>.<p>ರಾಜ್ಯ ಸರ್ಕಾರದ ಪ್ರತಿ ಬಜೆಟ್ ವೇಳೆ ಗೊರೂರಿನಲ್ಲಿ ಕೆಆರ್ಎಸ್ ಮಾದರಿ ಉದ್ಯಾನ ನಿರ್ಮಾಣದ ಪ್ರಸ್ತಾವ ಸರ್ಕಾರಕ್ಕೆ ಸಲ್ಲಿಕೆಯಾಗುತ್ತದೆ. ಇನ್ನೇನು ಮಂಜೂರಾಯಿತು ಸಿಕ್ಕಿತು ಎನ್ನುವಷ್ಟರಲ್ಲಿಯೇ ಅದು ನೇಪಥ್ಯಕ್ಕೆ ಸರಿದು ಬಿಡುತ್ತದೆ.</p>.<p>ಹೇಮಾವತಿ ಡ್ಯಾಂ ಮುಂಭಾಗದ 446 ಎಕರೆ ಪ್ರದೇಶ ಸುತ್ತ ತಂತಿಬೇಲಿ ಹಾಕಿ, ಒಂದಷ್ಟು ಸಸಿ ಬೆಳೆಸಲಾಗಿದೆ. 84 ಎಕರೆ ಪ್ರದೇಶವನ್ನು ತೋಟಗಾರಿಕೆ ಇಲಾಖೆಗೆ ನೀಡಲಾಗಿದೆ. ಇಷ್ಟು ವಿಶಾಲವಾದ ಪ್ರದೇಶವನ್ನು ಕೆಆರ್ಎಸ್ ಮಾದರಿಯಲ್ಲಿ ಅಭಿವೃದ್ಧಿಪಡಿಸಿದರೆ ವರ್ಷವಿಡೀ ಪ್ರವಾಸಿಗರನ್ನು ಆಕರ್ಷಿಸಲು ಸಾಧ್ಯವಾಗುತ್ತದೆ.</p>.<p>ಮಳೆಗಾಲದಲ್ಲಿ ಜಲಾಶಯ ಭರ್ತಿಯಾಗಿ ಕ್ರಸ್ಟ್ಗೇಟ್ ತೆರೆದಾಗ ಮಾತ್ರ ಜಿಲ್ಲೆಯ ಜನತೆ ಹಾಗೂ ಪ್ರವಾಸಿಗರು ಇಲ್ಲಿಗೆ ಬರುತ್ತಾರೆ. ಹಾಸನ-ಮಡಿಕೇರಿ ಮಾರ್ಗದ ಗೊರೂರಿನಲ್ಲಿ ಕೆಆರ್ಎಸ್ ಮಾದರಿ ಬೋಟಿಂಗ್, ನೀರಿನ ಕಾರಂಜಿ, ಸಂಗೀತ ನೃತ್ಯ ಕಾರಂಜಿ, ಹೂದೋಟ, ನೀರಿನ ಝರಿ ಮತ್ತಿತರ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಿದ್ದೇ ಆದಲ್ಲಿ ವಾರ್ಷಿಕವಾಗಿ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡಬಹುದು. ಆ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದಂತಾಗಲಿದ್ದು, ಆರ್ಥಿಕ ಚಟುವಟಿಕೆ ವೃದ್ಧಿಸುತ್ತದೆ.</p>.<p>ಇದರ ಜೊತೆಗೆ ಬೇಲೂರಿನ ಯಗಚಿ ಜಲಾಶಯದ ಮುಂಭಾಗವೂ ಸುಂದರ ಉದ್ಯಾನ ಹಾಗೂ ಯಗಚಿ ಜಲಾಶಯದಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಿದರೆ ಪ್ರವಾಸೋದ್ಯಮಕ್ಕೆ ಒತ್ತು ನೀಡಿದಂತಾಗುತ್ತದೆ ಎನ್ನುವುದು ಜಿಲ್ಲೆಯ ಜನರ ಬೇಡಿಕೆ.</p>.<p>‘ಗೊರೂರು ಹೇಮಾವತಿ ಜಲಾಶಯ ಆವರಣದ ಉದ್ಯಾನವನ್ನು ಖಾಸಗಿ ಸಹಭಾಗಿತ್ವದಲ್ಲಿ ಕೆಆರ್ಎಸ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಕಾವೇರಿ ನೀರಾವರಿ ನಿಗಮಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಗೊರೂರು ಹೇಮಾವತಿ ಜಲಾಶಯ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.</p>.<p>ಹೇಮಾವತಿ ಜಲಾಶಯದ ಬಳಿ ಉದ್ಯಾನ ನಿರ್ಮಾಣ ಮಾಡಬೇಕು ಎನ್ನುವ ಬೇಡಿಕೆ ದಶಕಗಳದ್ದಾಗಿದೆ. ಈ ಬಗ್ಗೆ ಸರ್ಕಾರ ಈಗಲಾದರೂ ಕ್ರಮ ಕೈಗೊಳ್ಳಬೇಕು.</p><p><strong>-ರಘು ಹೊಂಗೆರೆ ಜೆಡಿಎಸ್ ಜಿಲ್ಲಾ ವಕ್ತಾರ</strong></p>.<p>ಉದ್ಯಾನ ನಿರ್ಮಾಣದಿಂದ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ. ಹೇಮಾವತಿ ಜಲಾಶಯಕ್ಕೂ ಮೆರುಗು ಸಿಗಲಿದೆ. ಸರ್ಕಾರ ಯೋಜನೆಗೆ ಆದ್ಯತೆ ನೀಡಬೇಕು.</p><p><strong>-ಅಮಿತ್ ಶೆಟ್ಟಿ ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ</strong></p>.<p><strong>ಪ್ರಸ್ತಾಪಿಸದ ಉಸ್ತುವಾರಿ ಸಚಿವ</strong></p><p>ಪ್ರತಿ ಬಾರಿ ಹೇಮಾವತಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ಸಂದರ್ಭದಲ್ಲಿ ಉದ್ಯಾನ ನಿರ್ಮಾಣ ವಿಷಯ ಪ್ರಸ್ತಾಪವಾಗುತ್ತದೆ. ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕೆ.ಗೋಪಾಲಯ್ಯ ಕೆ.ಎನ್. ರಾಜಣ್ಣ ಸಹ ಉದ್ಯಾನ ನಿರ್ಮಾಣದ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದ್ದರು. ಆದರೆ ಈ ಬಾರಿ ಬಾಗಿನ ಅರ್ಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ಉದ್ಯಾನ ನಿರ್ಮಾಣದ ಕುರಿತು ಪ್ರಸ್ತಾಪವನ್ನೂ ಮಾಡದೇ ಇರುವುದು ಜನರಲ್ಲಿ ಬೇಸರ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಜಿಲ್ಲೆಯ ಜೀವನಾಡಿ ಹೇಮಾವತಿ ನದಿಗೆ ತಾಲ್ಲೂಕಿನ ಗೊರೂರು ಬಳಿ ಜಲಾಶಯ ನಿರ್ಮಿಸಲಾಗಿದ್ದು, ಈ ಜಲಾಶಯದ ಆವರಣದಲ್ಲಿ ಕೆಆರ್ಎಸ್ ಮಾದರಿಯ ಉದ್ಯಾನ ನಿರ್ಮಾಣ ಮಾಡಬೇಕು ಎನ್ನುವ ದಶಕಗಳ ಬೇಡಿಕೆ ಇನ್ನೂ ಈಡೇರುತ್ತಿಲ್ಲ.</p>.<p>ಖಾಸಗಿ ಸಹಭಾಗಿತ್ವದಲ್ಲಿ ಹೇಮಾವತಿ ಜಲಾಶಯದ ಬಳಿ ಉದ್ಯಾನ ಅಭಿವೃದ್ಧಿ ಪಡಿಸುವ ಯೋಜನೆಯನ್ನು ಜಲಾಶಯದ ಅಧಿಕಾರಿಗಳು ಸಿದ್ಧಪಡಿಸಿ, ಕಾವೇರಿ ನೀರಾವರಿ ನಿಗಮಕ್ಕೆ ಸಲ್ಲಿಸಿದ್ದಾರೆ.</p>.<p>ಹೇಮಾವತಿ ಜಲಾಶಯವನ್ನು 1979ರಲ್ಲಿ ನಿರ್ಮಿಸಲಾಗಿದೆ. ಜಲಾಶಯದ ಮುಂಭಾಗ 446 ಎಕರೆ ಜಾಗವಿದ್ದು, ಇದರಲ್ಲಿ ಕೆಆರ್ಎಸ್ ಮಾದರಿ ಉದ್ಯಾನ ನಿರ್ಮಿಸಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಬೇಕು ಎಂಬುದು ದಶಕದ ಕನಸು.</p>.<p>ರಾಜ್ಯ ಸರ್ಕಾರದ ಪ್ರತಿ ಬಜೆಟ್ ವೇಳೆ ಗೊರೂರಿನಲ್ಲಿ ಕೆಆರ್ಎಸ್ ಮಾದರಿ ಉದ್ಯಾನ ನಿರ್ಮಾಣದ ಪ್ರಸ್ತಾವ ಸರ್ಕಾರಕ್ಕೆ ಸಲ್ಲಿಕೆಯಾಗುತ್ತದೆ. ಇನ್ನೇನು ಮಂಜೂರಾಯಿತು ಸಿಕ್ಕಿತು ಎನ್ನುವಷ್ಟರಲ್ಲಿಯೇ ಅದು ನೇಪಥ್ಯಕ್ಕೆ ಸರಿದು ಬಿಡುತ್ತದೆ.</p>.<p>ಹೇಮಾವತಿ ಡ್ಯಾಂ ಮುಂಭಾಗದ 446 ಎಕರೆ ಪ್ರದೇಶ ಸುತ್ತ ತಂತಿಬೇಲಿ ಹಾಕಿ, ಒಂದಷ್ಟು ಸಸಿ ಬೆಳೆಸಲಾಗಿದೆ. 84 ಎಕರೆ ಪ್ರದೇಶವನ್ನು ತೋಟಗಾರಿಕೆ ಇಲಾಖೆಗೆ ನೀಡಲಾಗಿದೆ. ಇಷ್ಟು ವಿಶಾಲವಾದ ಪ್ರದೇಶವನ್ನು ಕೆಆರ್ಎಸ್ ಮಾದರಿಯಲ್ಲಿ ಅಭಿವೃದ್ಧಿಪಡಿಸಿದರೆ ವರ್ಷವಿಡೀ ಪ್ರವಾಸಿಗರನ್ನು ಆಕರ್ಷಿಸಲು ಸಾಧ್ಯವಾಗುತ್ತದೆ.</p>.<p>ಮಳೆಗಾಲದಲ್ಲಿ ಜಲಾಶಯ ಭರ್ತಿಯಾಗಿ ಕ್ರಸ್ಟ್ಗೇಟ್ ತೆರೆದಾಗ ಮಾತ್ರ ಜಿಲ್ಲೆಯ ಜನತೆ ಹಾಗೂ ಪ್ರವಾಸಿಗರು ಇಲ್ಲಿಗೆ ಬರುತ್ತಾರೆ. ಹಾಸನ-ಮಡಿಕೇರಿ ಮಾರ್ಗದ ಗೊರೂರಿನಲ್ಲಿ ಕೆಆರ್ಎಸ್ ಮಾದರಿ ಬೋಟಿಂಗ್, ನೀರಿನ ಕಾರಂಜಿ, ಸಂಗೀತ ನೃತ್ಯ ಕಾರಂಜಿ, ಹೂದೋಟ, ನೀರಿನ ಝರಿ ಮತ್ತಿತರ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಿದ್ದೇ ಆದಲ್ಲಿ ವಾರ್ಷಿಕವಾಗಿ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡಬಹುದು. ಆ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದಂತಾಗಲಿದ್ದು, ಆರ್ಥಿಕ ಚಟುವಟಿಕೆ ವೃದ್ಧಿಸುತ್ತದೆ.</p>.<p>ಇದರ ಜೊತೆಗೆ ಬೇಲೂರಿನ ಯಗಚಿ ಜಲಾಶಯದ ಮುಂಭಾಗವೂ ಸುಂದರ ಉದ್ಯಾನ ಹಾಗೂ ಯಗಚಿ ಜಲಾಶಯದಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಿದರೆ ಪ್ರವಾಸೋದ್ಯಮಕ್ಕೆ ಒತ್ತು ನೀಡಿದಂತಾಗುತ್ತದೆ ಎನ್ನುವುದು ಜಿಲ್ಲೆಯ ಜನರ ಬೇಡಿಕೆ.</p>.<p>‘ಗೊರೂರು ಹೇಮಾವತಿ ಜಲಾಶಯ ಆವರಣದ ಉದ್ಯಾನವನ್ನು ಖಾಸಗಿ ಸಹಭಾಗಿತ್ವದಲ್ಲಿ ಕೆಆರ್ಎಸ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಕಾವೇರಿ ನೀರಾವರಿ ನಿಗಮಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಗೊರೂರು ಹೇಮಾವತಿ ಜಲಾಶಯ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.</p>.<p>ಹೇಮಾವತಿ ಜಲಾಶಯದ ಬಳಿ ಉದ್ಯಾನ ನಿರ್ಮಾಣ ಮಾಡಬೇಕು ಎನ್ನುವ ಬೇಡಿಕೆ ದಶಕಗಳದ್ದಾಗಿದೆ. ಈ ಬಗ್ಗೆ ಸರ್ಕಾರ ಈಗಲಾದರೂ ಕ್ರಮ ಕೈಗೊಳ್ಳಬೇಕು.</p><p><strong>-ರಘು ಹೊಂಗೆರೆ ಜೆಡಿಎಸ್ ಜಿಲ್ಲಾ ವಕ್ತಾರ</strong></p>.<p>ಉದ್ಯಾನ ನಿರ್ಮಾಣದಿಂದ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ. ಹೇಮಾವತಿ ಜಲಾಶಯಕ್ಕೂ ಮೆರುಗು ಸಿಗಲಿದೆ. ಸರ್ಕಾರ ಯೋಜನೆಗೆ ಆದ್ಯತೆ ನೀಡಬೇಕು.</p><p><strong>-ಅಮಿತ್ ಶೆಟ್ಟಿ ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ</strong></p>.<p><strong>ಪ್ರಸ್ತಾಪಿಸದ ಉಸ್ತುವಾರಿ ಸಚಿವ</strong></p><p>ಪ್ರತಿ ಬಾರಿ ಹೇಮಾವತಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ಸಂದರ್ಭದಲ್ಲಿ ಉದ್ಯಾನ ನಿರ್ಮಾಣ ವಿಷಯ ಪ್ರಸ್ತಾಪವಾಗುತ್ತದೆ. ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕೆ.ಗೋಪಾಲಯ್ಯ ಕೆ.ಎನ್. ರಾಜಣ್ಣ ಸಹ ಉದ್ಯಾನ ನಿರ್ಮಾಣದ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದ್ದರು. ಆದರೆ ಈ ಬಾರಿ ಬಾಗಿನ ಅರ್ಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ಉದ್ಯಾನ ನಿರ್ಮಾಣದ ಕುರಿತು ಪ್ರಸ್ತಾಪವನ್ನೂ ಮಾಡದೇ ಇರುವುದು ಜನರಲ್ಲಿ ಬೇಸರ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>