<p><strong>ಶ್ರವಣಬೆಳಗೊಳ: </strong>ಹೋಬಳಿಯ ಸುಂಡಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಕರಿಯಪ್ಪ ಹಾಗೂ ಉಪಾಧ್ಯಕ್ಷರಾಗಿ ಶಿಲ್ಪಾ ಮಂಗಳವಾರ ಆಯ್ಕೆಯಾಗಿದ್ದಾರೆ.</p>.<p>ಪಂಚಾಯಿತಿಯಲ್ಲಿ 14 ಸದಸ್ಯ ಬಲವಿದ್ದು ಜೆಡಿಎಸ್ ಬೆಂಬಲಿತ ಸದಸ್ಯ ಕರಿಯಪ್ಪ ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯ ಜನಾರ್ದನ್ ನಾಮಪತ್ರ ಸಲ್ಲಿಸಿದ್ದರು. ಇಬ್ಬರೂ ತಲಾ 7 ಮತಗಳು ಪಡೆದು ಸಮಬಲ ಸಾಧಿಸಿದರು. ನಂತರ ಲಾಟರಿ ಪ್ರಕ್ರಿಯೆಯಲ್ಲಿ ಕರಿಯಪ್ಪಗೆ ಅದೃಷ್ಟ ಒಲಿಯಿತು. ಶಿಲ್ಪಾ 8 ಮತ ಪಡೆದು ಉಪಾಧ್ಯಕ್ಷರಾದರು.</p>.<p>ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್, ಪಿಡಿಒ ಗಿರೀಶ್ ಕುಮಾರ್ ಚುನಾವಣಾಧಿಕಾರಿಯಾಗಿದ್ದರು.</p>.<p>ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ವಿಜೇತರಾದ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದನೆ ಸಲ್ಲಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಮೆರವಣಿಗೆ ಮಾಡಿ ಸಂಭ್ರಮಿಸಿದರು.</p>.<p>ಸದಸ್ಯರಾದ ಪ್ರಕಾಶ್, ಅನಿತಾ, ಪವಿತ್ರಾ, ರೇಣುಕಾಬಾಯಿ, ಹಾಲಮ್ಮ, ಮಂಜುಶೆಟ್ಟಿ, ಮುಖಂಡರಾದ ಪರಮ ದೇವರಾಜೇಗೌಡ, ಎಚ್.ಎನ್.ಲೋಕೇಶ್, ಎಚ್.ಕೆ.ಹರೀಶ್, ಜಯರಾಮ್, ಕೃಷ್ಣಮೂರ್ತಿ, ಹೊಸಮನೆ ಹರೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರವಣಬೆಳಗೊಳ: </strong>ಹೋಬಳಿಯ ಸುಂಡಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಕರಿಯಪ್ಪ ಹಾಗೂ ಉಪಾಧ್ಯಕ್ಷರಾಗಿ ಶಿಲ್ಪಾ ಮಂಗಳವಾರ ಆಯ್ಕೆಯಾಗಿದ್ದಾರೆ.</p>.<p>ಪಂಚಾಯಿತಿಯಲ್ಲಿ 14 ಸದಸ್ಯ ಬಲವಿದ್ದು ಜೆಡಿಎಸ್ ಬೆಂಬಲಿತ ಸದಸ್ಯ ಕರಿಯಪ್ಪ ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯ ಜನಾರ್ದನ್ ನಾಮಪತ್ರ ಸಲ್ಲಿಸಿದ್ದರು. ಇಬ್ಬರೂ ತಲಾ 7 ಮತಗಳು ಪಡೆದು ಸಮಬಲ ಸಾಧಿಸಿದರು. ನಂತರ ಲಾಟರಿ ಪ್ರಕ್ರಿಯೆಯಲ್ಲಿ ಕರಿಯಪ್ಪಗೆ ಅದೃಷ್ಟ ಒಲಿಯಿತು. ಶಿಲ್ಪಾ 8 ಮತ ಪಡೆದು ಉಪಾಧ್ಯಕ್ಷರಾದರು.</p>.<p>ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್, ಪಿಡಿಒ ಗಿರೀಶ್ ಕುಮಾರ್ ಚುನಾವಣಾಧಿಕಾರಿಯಾಗಿದ್ದರು.</p>.<p>ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ವಿಜೇತರಾದ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದನೆ ಸಲ್ಲಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಮೆರವಣಿಗೆ ಮಾಡಿ ಸಂಭ್ರಮಿಸಿದರು.</p>.<p>ಸದಸ್ಯರಾದ ಪ್ರಕಾಶ್, ಅನಿತಾ, ಪವಿತ್ರಾ, ರೇಣುಕಾಬಾಯಿ, ಹಾಲಮ್ಮ, ಮಂಜುಶೆಟ್ಟಿ, ಮುಖಂಡರಾದ ಪರಮ ದೇವರಾಜೇಗೌಡ, ಎಚ್.ಎನ್.ಲೋಕೇಶ್, ಎಚ್.ಕೆ.ಹರೀಶ್, ಜಯರಾಮ್, ಕೃಷ್ಣಮೂರ್ತಿ, ಹೊಸಮನೆ ಹರೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>