<p><strong>ಹಾಸನ:</strong> ಜಿಲ್ಲೆಯಲ್ಲಿ ಹೊಸದಾಗಿ 131 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ<br />ಸಂಖ್ಯೆ 30,315 ಏರಿಕೆಯಾಗಿದೆ.</p>.<p>896 ಸಕ್ರಿಯ ಪ್ರಕರಣಗಳ ಪೈಕಿ 7 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಬಿಡುಗಡೆಯಾದ 55 ಮಂದಿ ಸೇರಿ ಈವರೆಗೆ 28,941 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕಾಯಿಲೆಯಿಂದ ಇಲ್ಲಿಯವರೆಗೆ ಒಟ್ಟು 478 ಮಂದಿ ಮೃತಪಟ್ಟಿದ್ದಾರೆ.</p>.<p>ಹೊಸದಾಗಿ ಹಾಸನ ತಾಲ್ಲೂಕಿನ 65 ಮಂದಿ, ಅರಸೀಕೆರೆ 20, ಚನ್ನರಾಯಪಟ್ಟಣ 11, ಬೇಲೂರು 9, ಹೊಳೆನರಸೀಪುರ 7, ಆಲೂರು 3, ಸಕಲೇಶಪುರ 12 ಹಾಗೂ ಅರಕಲಗೂಡು 4 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.</p>.<p>ನಗರದ ಮಲೆನಾಡು ತಾಂತ್ರಿಕ ಕಾಲೇಜು ವಸತಿ ನಿಲಯದ ಬಾಣಸಿಗ ಸೇರಿದ ಎಂಟು ವಿದ್ಯಾರ್ಥಿಗಳಿಗೆ<br />ಕೊರೊನಾ ಸೋಂಕು ತಗುಲಿದೆ. ಹಾಗಾಗಿ ಕಾಲೇಜಿಗೆ 22 ದಿನ ರಜೆ ಘೋಷಿಸಲಾಗಿದೆ. ಸೋಂಕಿತ<br />ವಿದ್ಯಾರ್ಥಿಗಳು ಆಯುಷ್ ಆಸ್ಪತ್ರೆಯ ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಳು ದಿನಗಳ ಬಳಿಕ<br />ನೆಗೆಟಿವ್ ವರದಿ ಬಂದರೆ ಮಾತ್ರ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿ ಕೊಡಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಜಿಲ್ಲೆಯಲ್ಲಿ ಹೊಸದಾಗಿ 131 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ<br />ಸಂಖ್ಯೆ 30,315 ಏರಿಕೆಯಾಗಿದೆ.</p>.<p>896 ಸಕ್ರಿಯ ಪ್ರಕರಣಗಳ ಪೈಕಿ 7 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಬಿಡುಗಡೆಯಾದ 55 ಮಂದಿ ಸೇರಿ ಈವರೆಗೆ 28,941 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕಾಯಿಲೆಯಿಂದ ಇಲ್ಲಿಯವರೆಗೆ ಒಟ್ಟು 478 ಮಂದಿ ಮೃತಪಟ್ಟಿದ್ದಾರೆ.</p>.<p>ಹೊಸದಾಗಿ ಹಾಸನ ತಾಲ್ಲೂಕಿನ 65 ಮಂದಿ, ಅರಸೀಕೆರೆ 20, ಚನ್ನರಾಯಪಟ್ಟಣ 11, ಬೇಲೂರು 9, ಹೊಳೆನರಸೀಪುರ 7, ಆಲೂರು 3, ಸಕಲೇಶಪುರ 12 ಹಾಗೂ ಅರಕಲಗೂಡು 4 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.</p>.<p>ನಗರದ ಮಲೆನಾಡು ತಾಂತ್ರಿಕ ಕಾಲೇಜು ವಸತಿ ನಿಲಯದ ಬಾಣಸಿಗ ಸೇರಿದ ಎಂಟು ವಿದ್ಯಾರ್ಥಿಗಳಿಗೆ<br />ಕೊರೊನಾ ಸೋಂಕು ತಗುಲಿದೆ. ಹಾಗಾಗಿ ಕಾಲೇಜಿಗೆ 22 ದಿನ ರಜೆ ಘೋಷಿಸಲಾಗಿದೆ. ಸೋಂಕಿತ<br />ವಿದ್ಯಾರ್ಥಿಗಳು ಆಯುಷ್ ಆಸ್ಪತ್ರೆಯ ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಳು ದಿನಗಳ ಬಳಿಕ<br />ನೆಗೆಟಿವ್ ವರದಿ ಬಂದರೆ ಮಾತ್ರ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿ ಕೊಡಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>