<p><strong>ಹಾಸನ:</strong> ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶಾಂತಿಗ್ರಾಮವನ್ನು ಹೊಸ ತಾಲ್ಲೂಕಾಗಿ ಘೋಷಿಸಿದ್ದರು. ಆದರೆ, ಈವರೆಗೆ ತಾಲ್ಲೂಕು ರಚನೆ ಸಂಬಂಧ ಸರ್ಕಾರದಿಂದ ಯಾವುದೇ ಆಡಳಿತಾತ್ಮಕ ಆದೇಶ ಬಂದಿಲ್ಲ.</p>.<p>ಜಿಲ್ಲೆಯ 8 ತಾಲ್ಲೂಕುಗಳ ಜತೆಗೆ ಶಾಂತಿಗ್ರಾಮವೂ ಸೇರಿ 9 ತಾಲ್ಲೂಕುಗಳಾಗುತ್ತವೆ ಎಂಬ ನಿರೀಕ್ಷೆ ಹುಸಿಯಾಗಿದೆ. ಶಾಂತಿಗ್ರಾಮವು ಶಾಸಕ ಎಚ್.ಡಿ.ರೇವಣ್ಣ ಪ್ರತಿನಿಧಿಸುವ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರಕ್ಕೆ ಸೇರುವುದರಿಂದ ಹೊಸ ತಾಲ್ಲೂಕು ಘೋಷಣೆಯಾಗಿತ್ತು. ಶಾಂತಿಗ್ರಾಮ ತಾಲ್ಲೂಕು ಆಗಬೇಕೆಂಬ ಬೇಡಿಕೆಯನ್ನು ಯಾರೂ ಮಂಡಿಸಿರಲಿಲ್ಲ.</p>.<p>ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ–75ರಲ್ಲಿರುವ ಶಾಂತಿಗ್ರಾಮ ಹೋಬಳಿ ಕೇಂದ್ರ. ಹಾಸನ ನಗರದಿಂದ 13 ಕಿ.ಮೀ. ಅಂತರದಲ್ಲಿದೆ. ಗ್ರಾಮದಲ್ಲಿ 898 ಕುಟುಂಬಗಳು, ಒಟ್ಟು 3499 ಜನಸಂಖ್ಯೆಯಿದೆ. ಹೋಬಳಿ ಕೇಂದ್ರವಾದ್ದರಿಂದ ಕಂದಾಯ ಇಲಾಖೆಯ ನಾಡ ಕಚೇರಿ ಇದೆ.</p>.<p>ಗ್ರಾಮದಲ್ಲಿ ಪೊಲೀಸ್ ಠಾಣೆ, ಸಮುದಾಯ ಆರೋಗ್ಯ ಕೇಂದ್ರ, ಸರ್ಕಾರಿ ಪದವಿಪೂರ್ವ ಕಾಲೇಜು, ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಇದೆ. ಜಿಲ್ಲಾ ಕಾರಾಗೃಹ ನಿರ್ಮಾಣಕ್ಕೆ 40 ಎಕರೆ ಭೂಮಿಯೂ ಶಾಂತಿಗ್ರಾಮದ ಬಳಿ ಮಂಜೂರಾಗಿದೆ.</p>.<p>ತಾಲ್ಲೂಕು ಘೋಷಣೆಯಾದ ನಂತರ ವಿಶೇಷ ತಹಶೀಲ್ದಾರ್ ನೇಮಕ ಸೇರಿದಂತೆ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಗೆಜೆಟ್ ನೋಟಿಫಿಕೆಏಶನ್ ಹೊರ ಬೀಳಲಿಲ್ಲ. ಹಾಗಾಗಿ ತಾಲ್ಲೂಕು ರಚನೆಗೆ ಬೇಕಾದ ಕಟ್ಟಡ, ಕಚೇರಿಗಳ ನಿರ್ಮಾಣಕ್ಕೆ ಜಾಗ ಗುರುತಿಸುವ ಕೆಲಸ ಹಾಗೂ ಗ್ರಾಮಗಳ ಸೇರ್ಪಡೆ ಮಾಡುವ ಕಾರ್ಯವೂ ಆರಂಭವಾಗಿಲ್ಲ.</p>.<p>ಶಾಂತಿಗ್ರಾಮಕ್ಕೆ ಹಾಸನ ತಾಲ್ಲೂಕಿನ ದುದ್ದ ಚನ್ನರಾಯಪಟ್ಟಣ ತಾಲ್ಲೂಕಿನ ದಂಡಿಗನಹಳ್ಳಿ ಹೋಬಳಿ ಸೇರಿಸುವುದರೊಂದಿಗೆ ಹಾಸನ ತಾಲ್ಲೂಕಿನ ಪ್ರಮುಖ ಗ್ರಾಮ ಮೊಸಳೆ ಹೊಸಹಳ್ಳಿಗೆ ಹೋಬಳಿ ಸ್ಥಾನಮಾನ ನೀಡಿ ಶಾಂತಿಗ್ರಾಮ ತಾಲ್ಲೂಕಿಗೆ ಸೇರಿಸಿ ನಾಲ್ಕು ಹೋಬಳಿಗಳುಳ್ಳ ತಾಲ್ಲೂಕು ಸೇರ್ಪಡೆ ಮಾಡುವುದು ರೇವಣ್ಣ ಅವರ ಉದ್ದೇಶವಾಗಿತ್ತು.</p>.<p>‘ಶಾಂತಿಗ್ರಾಮ ತಾಲ್ಲೂಕು ರಚನೆಯಾಗುವುದು ಖಚಿತ. ಕೆಲ ಕಾರಣಗಳಿಂದ ಸ್ವಲ್ಪ ವಿಳಂಬವಾಗಬಹುದು. ಹಾಸನ ನಗರ ವೇಗವಾಗಿ ಬೆಳವಣಿಗೆಯಾಗುತ್ತಿರುವ ಕಾರಣ ದೂರದೃಷ್ಟಿ ಇಟ್ಟುಕೊಂಡು ತಾಲ್ಲೂಕು ರಚನೆ ನಿರ್ಧಾರ ಮಾಡಲಾಗಿತ್ತು’ ಎಂದು ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ.ರೇವಣ್ಣ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>***</p>.<p>ಶಾಂತಿಗ್ರಾಮ ಹೊಸ ತಾಲ್ಲೂಕಿನ ಪಟ್ಟಿಯಲ್ಲಿದ್ದರೂ ಈವರೆಗೆ ತಾಲ್ಲೂಕು ರಚನೆಗೆ ಸಂಬಂಧ ಸರ್ಕಾರದಿಂದ ಆಡಳಿತಾತ್ಮಕ ಆದೇಶ ಬಂದಿಲ್ಲ.<br /><strong>ಆರ್.ಗಿರೀಶ್, ಜಿಲ್ಲಾಧಿಕಾರಿ</strong></p>.<p>***</p>.<p>ತಾತ್ಕಾಲಿಕವಾಗಿ ಹಿನ್ನಡೆಯಾಗಿರಬಹುದು ಅಷ್ಟೇ. ಶಾಂತಿಗ್ರಾಮ ತಾಲ್ಲೂಕು ರಚನೆ ಮಾಡಿಯೇ ಸಿದ್ಧ. ಹಿಡಿದ ಕೆಲಸ ಕೈ ಬಿಡುವುದಿಲ್ಲ.<br /><strong>ಎಚ್.ಡಿ.ರೇವಣ್ಣ, ಹೊಳೆನರಸೀಪುರ ಕ್ಷೇತ್ರದ ಶಾಸಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶಾಂತಿಗ್ರಾಮವನ್ನು ಹೊಸ ತಾಲ್ಲೂಕಾಗಿ ಘೋಷಿಸಿದ್ದರು. ಆದರೆ, ಈವರೆಗೆ ತಾಲ್ಲೂಕು ರಚನೆ ಸಂಬಂಧ ಸರ್ಕಾರದಿಂದ ಯಾವುದೇ ಆಡಳಿತಾತ್ಮಕ ಆದೇಶ ಬಂದಿಲ್ಲ.</p>.<p>ಜಿಲ್ಲೆಯ 8 ತಾಲ್ಲೂಕುಗಳ ಜತೆಗೆ ಶಾಂತಿಗ್ರಾಮವೂ ಸೇರಿ 9 ತಾಲ್ಲೂಕುಗಳಾಗುತ್ತವೆ ಎಂಬ ನಿರೀಕ್ಷೆ ಹುಸಿಯಾಗಿದೆ. ಶಾಂತಿಗ್ರಾಮವು ಶಾಸಕ ಎಚ್.ಡಿ.ರೇವಣ್ಣ ಪ್ರತಿನಿಧಿಸುವ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರಕ್ಕೆ ಸೇರುವುದರಿಂದ ಹೊಸ ತಾಲ್ಲೂಕು ಘೋಷಣೆಯಾಗಿತ್ತು. ಶಾಂತಿಗ್ರಾಮ ತಾಲ್ಲೂಕು ಆಗಬೇಕೆಂಬ ಬೇಡಿಕೆಯನ್ನು ಯಾರೂ ಮಂಡಿಸಿರಲಿಲ್ಲ.</p>.<p>ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ–75ರಲ್ಲಿರುವ ಶಾಂತಿಗ್ರಾಮ ಹೋಬಳಿ ಕೇಂದ್ರ. ಹಾಸನ ನಗರದಿಂದ 13 ಕಿ.ಮೀ. ಅಂತರದಲ್ಲಿದೆ. ಗ್ರಾಮದಲ್ಲಿ 898 ಕುಟುಂಬಗಳು, ಒಟ್ಟು 3499 ಜನಸಂಖ್ಯೆಯಿದೆ. ಹೋಬಳಿ ಕೇಂದ್ರವಾದ್ದರಿಂದ ಕಂದಾಯ ಇಲಾಖೆಯ ನಾಡ ಕಚೇರಿ ಇದೆ.</p>.<p>ಗ್ರಾಮದಲ್ಲಿ ಪೊಲೀಸ್ ಠಾಣೆ, ಸಮುದಾಯ ಆರೋಗ್ಯ ಕೇಂದ್ರ, ಸರ್ಕಾರಿ ಪದವಿಪೂರ್ವ ಕಾಲೇಜು, ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಇದೆ. ಜಿಲ್ಲಾ ಕಾರಾಗೃಹ ನಿರ್ಮಾಣಕ್ಕೆ 40 ಎಕರೆ ಭೂಮಿಯೂ ಶಾಂತಿಗ್ರಾಮದ ಬಳಿ ಮಂಜೂರಾಗಿದೆ.</p>.<p>ತಾಲ್ಲೂಕು ಘೋಷಣೆಯಾದ ನಂತರ ವಿಶೇಷ ತಹಶೀಲ್ದಾರ್ ನೇಮಕ ಸೇರಿದಂತೆ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಗೆಜೆಟ್ ನೋಟಿಫಿಕೆಏಶನ್ ಹೊರ ಬೀಳಲಿಲ್ಲ. ಹಾಗಾಗಿ ತಾಲ್ಲೂಕು ರಚನೆಗೆ ಬೇಕಾದ ಕಟ್ಟಡ, ಕಚೇರಿಗಳ ನಿರ್ಮಾಣಕ್ಕೆ ಜಾಗ ಗುರುತಿಸುವ ಕೆಲಸ ಹಾಗೂ ಗ್ರಾಮಗಳ ಸೇರ್ಪಡೆ ಮಾಡುವ ಕಾರ್ಯವೂ ಆರಂಭವಾಗಿಲ್ಲ.</p>.<p>ಶಾಂತಿಗ್ರಾಮಕ್ಕೆ ಹಾಸನ ತಾಲ್ಲೂಕಿನ ದುದ್ದ ಚನ್ನರಾಯಪಟ್ಟಣ ತಾಲ್ಲೂಕಿನ ದಂಡಿಗನಹಳ್ಳಿ ಹೋಬಳಿ ಸೇರಿಸುವುದರೊಂದಿಗೆ ಹಾಸನ ತಾಲ್ಲೂಕಿನ ಪ್ರಮುಖ ಗ್ರಾಮ ಮೊಸಳೆ ಹೊಸಹಳ್ಳಿಗೆ ಹೋಬಳಿ ಸ್ಥಾನಮಾನ ನೀಡಿ ಶಾಂತಿಗ್ರಾಮ ತಾಲ್ಲೂಕಿಗೆ ಸೇರಿಸಿ ನಾಲ್ಕು ಹೋಬಳಿಗಳುಳ್ಳ ತಾಲ್ಲೂಕು ಸೇರ್ಪಡೆ ಮಾಡುವುದು ರೇವಣ್ಣ ಅವರ ಉದ್ದೇಶವಾಗಿತ್ತು.</p>.<p>‘ಶಾಂತಿಗ್ರಾಮ ತಾಲ್ಲೂಕು ರಚನೆಯಾಗುವುದು ಖಚಿತ. ಕೆಲ ಕಾರಣಗಳಿಂದ ಸ್ವಲ್ಪ ವಿಳಂಬವಾಗಬಹುದು. ಹಾಸನ ನಗರ ವೇಗವಾಗಿ ಬೆಳವಣಿಗೆಯಾಗುತ್ತಿರುವ ಕಾರಣ ದೂರದೃಷ್ಟಿ ಇಟ್ಟುಕೊಂಡು ತಾಲ್ಲೂಕು ರಚನೆ ನಿರ್ಧಾರ ಮಾಡಲಾಗಿತ್ತು’ ಎಂದು ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ.ರೇವಣ್ಣ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>***</p>.<p>ಶಾಂತಿಗ್ರಾಮ ಹೊಸ ತಾಲ್ಲೂಕಿನ ಪಟ್ಟಿಯಲ್ಲಿದ್ದರೂ ಈವರೆಗೆ ತಾಲ್ಲೂಕು ರಚನೆಗೆ ಸಂಬಂಧ ಸರ್ಕಾರದಿಂದ ಆಡಳಿತಾತ್ಮಕ ಆದೇಶ ಬಂದಿಲ್ಲ.<br /><strong>ಆರ್.ಗಿರೀಶ್, ಜಿಲ್ಲಾಧಿಕಾರಿ</strong></p>.<p>***</p>.<p>ತಾತ್ಕಾಲಿಕವಾಗಿ ಹಿನ್ನಡೆಯಾಗಿರಬಹುದು ಅಷ್ಟೇ. ಶಾಂತಿಗ್ರಾಮ ತಾಲ್ಲೂಕು ರಚನೆ ಮಾಡಿಯೇ ಸಿದ್ಧ. ಹಿಡಿದ ಕೆಲಸ ಕೈ ಬಿಡುವುದಿಲ್ಲ.<br /><strong>ಎಚ್.ಡಿ.ರೇವಣ್ಣ, ಹೊಳೆನರಸೀಪುರ ಕ್ಷೇತ್ರದ ಶಾಸಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>