ಬಡ್ತಿ ನೀಡಿ ಸಕಲೇಶಪುರ ತಹಶೀಲ್ದಾರ್ ಹುದ್ದೆಯಿಂದ ವಿಶೇಷ ಭೂ ಸ್ವಾಧೀನಾಧಿಕಾರಿ ಹುದ್ದೆಗೆ ವರ್ಗ ಮಾಡಿರುವುದರ ಹಿಂದೆ ದೊಡ್ಡ ಹುನ್ನಾರವೇ ಇದೆ. ಈಗಾಗಲೇ ಅಕ್ರಮ ಭೂ ಮಂಜೂರಾತಿ ಕುರಿತು ತನಿಖೆ ನಡೆಯುತ್ತಿದೆ. ಈ ವಿಷಯವನ್ನು ಜಿಲ್ಲಾಧಿಕಾರಿ ಅವರ ಗಮನಕ್ಕೂ ತರಲಾಗಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೂ ಪತ್ರ ಬರೆಯಲಾಗುವುದು. ಅಗತ್ಯವಿದ್ದರೆ ಲೋಕಾಯುಕ್ತಕ್ಕೂ ದೂರು ನೀಡುತ್ತೇನೆ ಎಂದರು.