<p><strong>ಚನ್ನರಾಯಪಟ್ಟಣ: </strong>ತಾಲ್ಲೂಕಿನ 8 ಗ್ರಾಮಗಳಿಗೆ ಉನ್ನತ ಮಟ್ಟದ ಸಮಿತಿಯ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ ಸ್ಥಳ ತನಿಖೆ ಮಾಡಿದರು.</p>.<p>ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಎಸ್. ಪ್ರಕಾಶ್, ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್, ಸಹಾಯಕ ಪ್ರಾದೇಶಿಕ ಆಯುಕ್ತ ಯೋಗೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ. ಭಾರತಿ ಸೇರಿ ಅಧಿಕಾರಿಗಳು ಆನೆಕೆರೆ ಗ್ರಾಮಕ್ಕೆ ಭೇಟಿ ನೀಡಿದರು.</p>.<p>‘ಮಳೆಗಾಲ ಮತ್ತು ಹೇಮಾವತಿ ನಾಲೆಯಲ್ಲಿ ನೀರು ಹರಿಸಿದಾಗ ಮನೆಗಳ ಗೋಡೆಯಲ್ಲಿ ನೀರು ಜಿನುಗುತ್ತದೆ. ಮನೆಯಲ್ಲಿ ಶೀತದ ವಾತಾವರಣ ಹೆಚ್ಚಾಗಿ ಜನತೆ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಊರಿನ ಬಾವಿಯಲ್ಲಿ ಮೇಲ್ಭಾಗದಲ್ಲಿ ನೀರು ಇರುತ್ತದೆ’ ಎಂದು ಜನತೆ ಅಧಿಕಾರಿಗಳ ಗಮನಕ್ಕೆ ತಂದರು.</p>.<p>ಬಿಜೆಪಿ ಮುಖಂಡ ದೇವರಾಜೇಗೌಡ ಮಾತನಾಡಿ, ‘ಗ್ರಾಮವನ್ನು ಶೀತಪೀಡಿತ ಪ್ರದೇಶ ಎಂದು ಘೋಷಿಸಿ ಬೇರೆಡೆಗೆ ಸ್ಥಳಾಂತರಿಸುವುದು ಸೂಕ್ತ’ ಎಂದರು.</p>.<p>ಗ್ರಾಮದಲ್ಲಿ 737 ಮನೆಗಳ ಪೈಕಿ 480 ಕಚ್ಚಾ ಮನೆಗಳಿವೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೃಷ್ಣನಾಯಕ್ ಮೇಲಧಿಕಾರಿಗಳಿಗೆ ಗಮನಕ್ಕೆ ತಂದರು.</p>.<p>ಕಲ್ಲೇನಹಳ್ಳಿ ಗ್ರಾಮ ಈಗಾಗಲೇ ಶೀತ ಪೀಡಿತ ಪ್ರದೇಶಕ್ಕೆ ಸೇರಿದ್ದು, ಉಳಿದ 12 ಮನೆಗಳಿಗೆ ಪರಿಹಾರ ನೀಡಬೇಕಿದೆ. ಅದೇ ರೀತಿ ನಾಡನಹಳ್ಳಿ ಗ್ರಾಮದಲ್ಲಿಯೂ 15 ಮನೆಗಳಿಗೆ ಪರಿಹಾರ ನೀಡಬೇಕಿದೆ ಎಂದು ಗ್ರಾಮಸ್ಥರು ಅಧಿಕಾರಿಗಳಿಗೆ ಮನವಿ ಮಾಡಿದರು.</p>.<p>ನಂತರ ಅಧಿಕಾರಿಗಳ ತಂಡ ನೊರನಕ್ಕಿ, ಹಂಪನಹಳ್ಳಿ, ಸಾಸಲುಪುರಕೊಪ್ಪಲು, ಸಾಸಲು ಹಾಗೂ ಗದ್ದೆಬಿಂಡೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿತು.</p>.<p>ಉಪವಿಭಾಗಾಧಿಕಾರಿ ಬಿ.ಎ. ಜಗದೀಶ್, ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ್, ಗೊರೂರು ಹೇಮಾವತಿ ಜಲಾಶಯ ಯೋಜನೆಯ ಮುಖ್ಯ ಎಂಜಿನಿಯರ್ ಸಿ. ಮಂಜಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ. ಸತೀಶ್ ಕುಮಾರ್, ತಹಶೀಲ್ದಾರ್ ಜೆ.ಬಿ. ಮಾರುತಿ ಇದ್ದರು.</p>.<p>ಇಲ್ಲಿನ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಲಾಯಿತು. ಸಭೆ ಬಳಿಕ ಪ್ರಾದೇಶಿಕ ಆಯುಕ್ತ ಡಾ.ಜಿ.ಎಸ್. ಪ್ರಕಾಶ್ ಮಾತನಾಡಿ, ‘ತಾಲ್ಲೂಕಿನ 8 ಗ್ರಾಮಗಳಿಗೆ ಭೇಟಿ ನೀಡಲಾಗಿದೆ. ಶೀತ ಪೀಡಿತ ಪ್ರದೇಶಕ್ಕೆ ಒಳಗಾದ ಗ್ರಾಮದ ಕೆಲವರು ಪರಿಹಾರ ಸಿಕ್ಕಿಲ್ಲವಾದ್ದರಿಂದ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಹಾಗಾಗಿ ಭೇಟಿ ನೀಡಿ ಸ್ಥಳ ಪರಿಶೀಲಿಸಲಾಗಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಪರಿಹಾರ ಸಿಗದಿದ್ದರೆ ಪರಿಶೀಲನೆ ಮಾಡಿ ಪರಿಹಾರ ನೀಡಲಾಗುವುದು’ ಎಂದರು.</p>.<p>‘ಆನೆಕೆರೆ ಗ್ರಾಮದಲ್ಲಿ ಮನೆಗಳು ಶೀತ ಪೀಡಿತಕ್ಕೆ ಒಳಗಾಗುತ್ತಿರುವುದನ್ನು ಜನತೆ ಗಮನಕ್ಕೆ ತಂದಿದ್ದಾರೆ. ಅಂಥವರಿಗೆ ವಸತಿ ಯೋಜನೆಯಡಿ ಮನೆಗಳನ್ನು ನೀಡಲಾಗುವುದು. ಶೀತ ಪೀಡಿತ ಪ್ರದೇಶದಲ್ಲಿ ಜನತೆ ಮತ್ತು ರಾಸುಗಳಿಗೆ ಕಾಯಿಲೆ ಕಂಡು ಬಂದಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ: </strong>ತಾಲ್ಲೂಕಿನ 8 ಗ್ರಾಮಗಳಿಗೆ ಉನ್ನತ ಮಟ್ಟದ ಸಮಿತಿಯ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ ಸ್ಥಳ ತನಿಖೆ ಮಾಡಿದರು.</p>.<p>ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಎಸ್. ಪ್ರಕಾಶ್, ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್, ಸಹಾಯಕ ಪ್ರಾದೇಶಿಕ ಆಯುಕ್ತ ಯೋಗೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ. ಭಾರತಿ ಸೇರಿ ಅಧಿಕಾರಿಗಳು ಆನೆಕೆರೆ ಗ್ರಾಮಕ್ಕೆ ಭೇಟಿ ನೀಡಿದರು.</p>.<p>‘ಮಳೆಗಾಲ ಮತ್ತು ಹೇಮಾವತಿ ನಾಲೆಯಲ್ಲಿ ನೀರು ಹರಿಸಿದಾಗ ಮನೆಗಳ ಗೋಡೆಯಲ್ಲಿ ನೀರು ಜಿನುಗುತ್ತದೆ. ಮನೆಯಲ್ಲಿ ಶೀತದ ವಾತಾವರಣ ಹೆಚ್ಚಾಗಿ ಜನತೆ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಊರಿನ ಬಾವಿಯಲ್ಲಿ ಮೇಲ್ಭಾಗದಲ್ಲಿ ನೀರು ಇರುತ್ತದೆ’ ಎಂದು ಜನತೆ ಅಧಿಕಾರಿಗಳ ಗಮನಕ್ಕೆ ತಂದರು.</p>.<p>ಬಿಜೆಪಿ ಮುಖಂಡ ದೇವರಾಜೇಗೌಡ ಮಾತನಾಡಿ, ‘ಗ್ರಾಮವನ್ನು ಶೀತಪೀಡಿತ ಪ್ರದೇಶ ಎಂದು ಘೋಷಿಸಿ ಬೇರೆಡೆಗೆ ಸ್ಥಳಾಂತರಿಸುವುದು ಸೂಕ್ತ’ ಎಂದರು.</p>.<p>ಗ್ರಾಮದಲ್ಲಿ 737 ಮನೆಗಳ ಪೈಕಿ 480 ಕಚ್ಚಾ ಮನೆಗಳಿವೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೃಷ್ಣನಾಯಕ್ ಮೇಲಧಿಕಾರಿಗಳಿಗೆ ಗಮನಕ್ಕೆ ತಂದರು.</p>.<p>ಕಲ್ಲೇನಹಳ್ಳಿ ಗ್ರಾಮ ಈಗಾಗಲೇ ಶೀತ ಪೀಡಿತ ಪ್ರದೇಶಕ್ಕೆ ಸೇರಿದ್ದು, ಉಳಿದ 12 ಮನೆಗಳಿಗೆ ಪರಿಹಾರ ನೀಡಬೇಕಿದೆ. ಅದೇ ರೀತಿ ನಾಡನಹಳ್ಳಿ ಗ್ರಾಮದಲ್ಲಿಯೂ 15 ಮನೆಗಳಿಗೆ ಪರಿಹಾರ ನೀಡಬೇಕಿದೆ ಎಂದು ಗ್ರಾಮಸ್ಥರು ಅಧಿಕಾರಿಗಳಿಗೆ ಮನವಿ ಮಾಡಿದರು.</p>.<p>ನಂತರ ಅಧಿಕಾರಿಗಳ ತಂಡ ನೊರನಕ್ಕಿ, ಹಂಪನಹಳ್ಳಿ, ಸಾಸಲುಪುರಕೊಪ್ಪಲು, ಸಾಸಲು ಹಾಗೂ ಗದ್ದೆಬಿಂಡೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿತು.</p>.<p>ಉಪವಿಭಾಗಾಧಿಕಾರಿ ಬಿ.ಎ. ಜಗದೀಶ್, ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ್, ಗೊರೂರು ಹೇಮಾವತಿ ಜಲಾಶಯ ಯೋಜನೆಯ ಮುಖ್ಯ ಎಂಜಿನಿಯರ್ ಸಿ. ಮಂಜಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ. ಸತೀಶ್ ಕುಮಾರ್, ತಹಶೀಲ್ದಾರ್ ಜೆ.ಬಿ. ಮಾರುತಿ ಇದ್ದರು.</p>.<p>ಇಲ್ಲಿನ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಲಾಯಿತು. ಸಭೆ ಬಳಿಕ ಪ್ರಾದೇಶಿಕ ಆಯುಕ್ತ ಡಾ.ಜಿ.ಎಸ್. ಪ್ರಕಾಶ್ ಮಾತನಾಡಿ, ‘ತಾಲ್ಲೂಕಿನ 8 ಗ್ರಾಮಗಳಿಗೆ ಭೇಟಿ ನೀಡಲಾಗಿದೆ. ಶೀತ ಪೀಡಿತ ಪ್ರದೇಶಕ್ಕೆ ಒಳಗಾದ ಗ್ರಾಮದ ಕೆಲವರು ಪರಿಹಾರ ಸಿಕ್ಕಿಲ್ಲವಾದ್ದರಿಂದ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಹಾಗಾಗಿ ಭೇಟಿ ನೀಡಿ ಸ್ಥಳ ಪರಿಶೀಲಿಸಲಾಗಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಪರಿಹಾರ ಸಿಗದಿದ್ದರೆ ಪರಿಶೀಲನೆ ಮಾಡಿ ಪರಿಹಾರ ನೀಡಲಾಗುವುದು’ ಎಂದರು.</p>.<p>‘ಆನೆಕೆರೆ ಗ್ರಾಮದಲ್ಲಿ ಮನೆಗಳು ಶೀತ ಪೀಡಿತಕ್ಕೆ ಒಳಗಾಗುತ್ತಿರುವುದನ್ನು ಜನತೆ ಗಮನಕ್ಕೆ ತಂದಿದ್ದಾರೆ. ಅಂಥವರಿಗೆ ವಸತಿ ಯೋಜನೆಯಡಿ ಮನೆಗಳನ್ನು ನೀಡಲಾಗುವುದು. ಶೀತ ಪೀಡಿತ ಪ್ರದೇಶದಲ್ಲಿ ಜನತೆ ಮತ್ತು ರಾಸುಗಳಿಗೆ ಕಾಯಿಲೆ ಕಂಡು ಬಂದಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>