<p><strong>ಹೆತ್ತೂರು: </strong>ಶಿಕ್ಷಕಿಯರಿಬ್ಬರ ನಡುವಿನ ಜಗಳದಿಂದ ಬೇಸತ್ತ ಪೋಷಕರು, ತಮ್ಮ ಮಕ್ಕಳ ವರ್ಗಾವಣೆ ಪ್ರಮಾಣ ಪತ್ರಕ್ಕಾಗಿ ಯಸಳೂರು ಹೋಬಳಿಯ ಕೆರೊಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಪ್ರತಿಭಟಿಸಿದರು.</p>.<p>ಹಲವು ವರ್ಷಗಳಿಂದ ಶಾಲೆಯಲ್ಲಿರುವ ಶಿಕ್ಷಕಿಯರಾದ ಗೀತಾಂಜಲಿ ಮತ್ತು ಸಂಧ್ಯಾ ಈಚೆಗೆ ಅಡುಗೆ ಪಾತ್ರೆ ಹಾಗೂ ಸೌಟು ಹಿಡಿದು ಹೊಡೆದಾಡಿಕೊಂಡಿದ್ದನ್ನು ಮಕ್ಕಳು ಪೋಷಕರಿಗೆ ತಿಳಿಸಿದ್ದರು. ಆ ಬಗ್ಗೆ ವಿಚಾರಿಸಲು ಬಂದ ಪೋಷಕರೊಂದಿಗೂ ಶಿಕ್ಷಕಿಯರು ಜಗಳವಾಡಿದ್ದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದರೂ ಪ್ರಯೋಜನವಾಗದೆ ಸೋಮವಾರ ಗ್ರಾಮ ಪಂಚಾಯಿತಿ ಮುಖಂಡರ ಸಮ್ಮುಖದಲ್ಲಿ ಪೋಷಕರು–ಶಿಕ್ಷಕಿಯರ ನಡುವೆ ಮತ್ತೆ ವಾಗ್ವಾದ ನಡೆಯಿತು. ‘ಶಿಕ್ಷಕಿಯರನ್ನು ವರ್ಗಾಯಿಸಬೇಕು. ಇಲ್ಲವಾದರೆ ಮಕ್ಕಳ ಟಿ.ಸಿ.ಕೊಡಬೇಕು’ ಎಂದು ಪೋಷಕರು ಆಗ್ರಹಿಸಿದರು.</p>.<p>‘ಶಿಕ್ಷಕಿಯರು ವೈಯುಕ್ತಿಕ ವಿಷಯಗಳಿಗಾಗಿ ಶಾಲೆಯಲ್ಲಿ ಮಕ್ಕಳ ಮುಂದೆ ಜಗಳವಾಡುವುದರಿಂದ ಶೈಕ್ಷಣಿಕ ಬೆಳವಣಿಗೆಗೆ ಅಡ್ಡಿಯಾಗಿದೆ. ಹೀಗಾಗಿ ಇಬ್ಬರನ್ನೂ ಕೂಡಲೇ ಅಮಾನತು ಮಾಡಬೇಕು’ ಎಂದು ಎಸ್ಡಿಎಂಸಿ ಅಧ್ಯಕ್ಷೆ ಭವ್ಯಕುಮಾರ ಆಗ್ರಹಿಸಿದ್ದಾರೆ.</p>.<p>‘ಶಿಕ್ಷಕಿಯರ ಕುರಿತು ಗ್ರಾಮಸ್ಥರು ಪಂಚಾಯಿತಿಗೆ ದೂರು ನೀಡಿದ್ದರು. ಶಾಲೆಗೆ ಭೇಟಿ ಸಭೆ ನಡೆಸಿದ ಸಂದರ್ಭದಲ್ಲೂ ಶಿಕ್ಷಕಿಯರು, ವರ್ಗಾವಣೆ ಪತ್ರ ಕೇಳಲು ಬಂದ ಪೋಷಕರೊಂದಿಗೆ ಜಗಳವಾಡಿದ್ದಾರೆ. ಆ ಬಗ್ಗೆ ಶಾಸಕರಿಗೆ ಹಾಗೂ ಶಿಕ್ಷಣಾಧಿಕಾರಿಗೆ ದೂರು ನೀಡಲಾಗಿದೆ’ ಎಂದು ಪಂಚಾಯ್ತಿ ಅಧ್ಯಕ್ಷ ಹರ್ಷ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆತ್ತೂರು: </strong>ಶಿಕ್ಷಕಿಯರಿಬ್ಬರ ನಡುವಿನ ಜಗಳದಿಂದ ಬೇಸತ್ತ ಪೋಷಕರು, ತಮ್ಮ ಮಕ್ಕಳ ವರ್ಗಾವಣೆ ಪ್ರಮಾಣ ಪತ್ರಕ್ಕಾಗಿ ಯಸಳೂರು ಹೋಬಳಿಯ ಕೆರೊಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಪ್ರತಿಭಟಿಸಿದರು.</p>.<p>ಹಲವು ವರ್ಷಗಳಿಂದ ಶಾಲೆಯಲ್ಲಿರುವ ಶಿಕ್ಷಕಿಯರಾದ ಗೀತಾಂಜಲಿ ಮತ್ತು ಸಂಧ್ಯಾ ಈಚೆಗೆ ಅಡುಗೆ ಪಾತ್ರೆ ಹಾಗೂ ಸೌಟು ಹಿಡಿದು ಹೊಡೆದಾಡಿಕೊಂಡಿದ್ದನ್ನು ಮಕ್ಕಳು ಪೋಷಕರಿಗೆ ತಿಳಿಸಿದ್ದರು. ಆ ಬಗ್ಗೆ ವಿಚಾರಿಸಲು ಬಂದ ಪೋಷಕರೊಂದಿಗೂ ಶಿಕ್ಷಕಿಯರು ಜಗಳವಾಡಿದ್ದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದರೂ ಪ್ರಯೋಜನವಾಗದೆ ಸೋಮವಾರ ಗ್ರಾಮ ಪಂಚಾಯಿತಿ ಮುಖಂಡರ ಸಮ್ಮುಖದಲ್ಲಿ ಪೋಷಕರು–ಶಿಕ್ಷಕಿಯರ ನಡುವೆ ಮತ್ತೆ ವಾಗ್ವಾದ ನಡೆಯಿತು. ‘ಶಿಕ್ಷಕಿಯರನ್ನು ವರ್ಗಾಯಿಸಬೇಕು. ಇಲ್ಲವಾದರೆ ಮಕ್ಕಳ ಟಿ.ಸಿ.ಕೊಡಬೇಕು’ ಎಂದು ಪೋಷಕರು ಆಗ್ರಹಿಸಿದರು.</p>.<p>‘ಶಿಕ್ಷಕಿಯರು ವೈಯುಕ್ತಿಕ ವಿಷಯಗಳಿಗಾಗಿ ಶಾಲೆಯಲ್ಲಿ ಮಕ್ಕಳ ಮುಂದೆ ಜಗಳವಾಡುವುದರಿಂದ ಶೈಕ್ಷಣಿಕ ಬೆಳವಣಿಗೆಗೆ ಅಡ್ಡಿಯಾಗಿದೆ. ಹೀಗಾಗಿ ಇಬ್ಬರನ್ನೂ ಕೂಡಲೇ ಅಮಾನತು ಮಾಡಬೇಕು’ ಎಂದು ಎಸ್ಡಿಎಂಸಿ ಅಧ್ಯಕ್ಷೆ ಭವ್ಯಕುಮಾರ ಆಗ್ರಹಿಸಿದ್ದಾರೆ.</p>.<p>‘ಶಿಕ್ಷಕಿಯರ ಕುರಿತು ಗ್ರಾಮಸ್ಥರು ಪಂಚಾಯಿತಿಗೆ ದೂರು ನೀಡಿದ್ದರು. ಶಾಲೆಗೆ ಭೇಟಿ ಸಭೆ ನಡೆಸಿದ ಸಂದರ್ಭದಲ್ಲೂ ಶಿಕ್ಷಕಿಯರು, ವರ್ಗಾವಣೆ ಪತ್ರ ಕೇಳಲು ಬಂದ ಪೋಷಕರೊಂದಿಗೆ ಜಗಳವಾಡಿದ್ದಾರೆ. ಆ ಬಗ್ಗೆ ಶಾಸಕರಿಗೆ ಹಾಗೂ ಶಿಕ್ಷಣಾಧಿಕಾರಿಗೆ ದೂರು ನೀಡಲಾಗಿದೆ’ ಎಂದು ಪಂಚಾಯ್ತಿ ಅಧ್ಯಕ್ಷ ಹರ್ಷ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>