ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣಕ್ಕೆ ಹಿಂದೂಗಳಾಗಿ ಸಂಪೂರ್ಣ ಬೆಂಬಲ ನೀಡಲಾಗುವುದು. ಆದರೆ ದೇಶದಾದ್ಯಂತ ದೇಣಿಗೆಸಂಗ್ರಹಿಸಿ, ಯಾರಿಗೋ ಅನುಕೂಲ ಮಾಡಿಕೊಡಲು ಅರ್ಧ ಗಂಟೆ ಯಲ್ಲಿ ಎರಡು ಬಾರಿ ಒಪ್ಪಂದರದ್ದು ಮಾಡಿ, ಮತ್ತೆ ₹18 ಕೋಟಿಗೆ ಜಮೀನು ಖರೀದಿ ಮಾಡಿರುವುದರಿಂದ ಭ್ರಷ್ಟಾಚಾರದ ವಾಸನೆ ಕಂಡುಬರುತ್ತಿದೆ.ಶ್ರೀರಾಮ ಯಾವತ್ತು ಒಳ್ಳೆಯದು ಮಾಡುವುದಿಲ್ಲ. ರಾಮನ ಹೆಸರಲ್ಲಿ ಅಧಿಕಾರಕ್ಕೆಬಂದಿರಬಹುದು. ಅದೇ ರಾಮ ಇವರನ್ನು ಬಲಿ ತೆಗೆದುಕೊಳ್ಳುತ್ತಾನೆ ಎಂದುಆಕ್ರೋಶ ವ್ಯಕ್ತಪಡಿಸಿದರು.