<p><strong>ಹಾಸನ: </strong>ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಭ್ರಷ್ಟಾಚಾರದ ವಾಸನೆ ಬಡಿಯುತ್ತಿದೆ ಎಂದು ಸಂಸದ ಡಿ.ಕೆ ಸುರೇಶ್ ಗಂಭೀರ ಆರೋಪ ಮಾಡಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣಕ್ಕೆ ಹಿಂದೂಗಳಾಗಿ ಸಂಪೂರ್ಣ ಬೆಂಬಲ ನೀಡಲಾಗುವುದು. ಆದರೆ ದೇಶದಾದ್ಯಂತ ದೇಣಿಗೆಸಂಗ್ರಹಿಸಿ, ಯಾರಿಗೋ ಅನುಕೂಲ ಮಾಡಿಕೊಡಲು ಅರ್ಧ ಗಂಟೆ ಯಲ್ಲಿ ಎರಡು ಬಾರಿ ಒಪ್ಪಂದರದ್ದು ಮಾಡಿ, ಮತ್ತೆ ₹18 ಕೋಟಿಗೆ ಜಮೀನು ಖರೀದಿ ಮಾಡಿರುವುದರಿಂದ ಭ್ರಷ್ಟಾಚಾರದ ವಾಸನೆ ಕಂಡುಬರುತ್ತಿದೆ.ಶ್ರೀರಾಮ ಯಾವತ್ತು ಒಳ್ಳೆಯದು ಮಾಡುವುದಿಲ್ಲ. ರಾಮನ ಹೆಸರಲ್ಲಿ ಅಧಿಕಾರಕ್ಕೆಬಂದಿರಬಹುದು. ಅದೇ ರಾಮ ಇವರನ್ನು ಬಲಿ ತೆಗೆದುಕೊಳ್ಳುತ್ತಾನೆ ಎಂದುಆಕ್ರೋಶ ವ್ಯಕ್ತಪಡಿಸಿದರು.</p>.<p>ಕೊರೊನಾ ಕಾಲದಲ್ಲೂ ಬಿಜೆಪಿಗೆ ಅಧಿಕಾರದ ಚಿಂತೆಯಾಗಿದೆ. ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಪಕ್ಷದಲ್ಲಿ ನಾಯಕತ್ವ ಗೊಂದಲ ಹಾಗೂ ಸಿ.ಎಂ ಸ್ಥಾನದ ಕಿತ್ತಾಟದಸಮಸ್ಯೆ ಬಗೆಹರಿಸಲು ಬಂದಿದ್ದಾರೆ. ಬಿಜೆಪಿ ನಾಯಕರ ಕಿತ್ತಾಟದ ವಿಚಾರ ಬೇಕಿಲ್ಲ. ಜನರ ಜೀವಉಳಿಸಲು ಹೋರಾಟ ಮಾಡುತ್ತಿದ್ದೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಭ್ರಷ್ಟಾಚಾರದ ವಾಸನೆ ಬಡಿಯುತ್ತಿದೆ ಎಂದು ಸಂಸದ ಡಿ.ಕೆ ಸುರೇಶ್ ಗಂಭೀರ ಆರೋಪ ಮಾಡಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣಕ್ಕೆ ಹಿಂದೂಗಳಾಗಿ ಸಂಪೂರ್ಣ ಬೆಂಬಲ ನೀಡಲಾಗುವುದು. ಆದರೆ ದೇಶದಾದ್ಯಂತ ದೇಣಿಗೆಸಂಗ್ರಹಿಸಿ, ಯಾರಿಗೋ ಅನುಕೂಲ ಮಾಡಿಕೊಡಲು ಅರ್ಧ ಗಂಟೆ ಯಲ್ಲಿ ಎರಡು ಬಾರಿ ಒಪ್ಪಂದರದ್ದು ಮಾಡಿ, ಮತ್ತೆ ₹18 ಕೋಟಿಗೆ ಜಮೀನು ಖರೀದಿ ಮಾಡಿರುವುದರಿಂದ ಭ್ರಷ್ಟಾಚಾರದ ವಾಸನೆ ಕಂಡುಬರುತ್ತಿದೆ.ಶ್ರೀರಾಮ ಯಾವತ್ತು ಒಳ್ಳೆಯದು ಮಾಡುವುದಿಲ್ಲ. ರಾಮನ ಹೆಸರಲ್ಲಿ ಅಧಿಕಾರಕ್ಕೆಬಂದಿರಬಹುದು. ಅದೇ ರಾಮ ಇವರನ್ನು ಬಲಿ ತೆಗೆದುಕೊಳ್ಳುತ್ತಾನೆ ಎಂದುಆಕ್ರೋಶ ವ್ಯಕ್ತಪಡಿಸಿದರು.</p>.<p>ಕೊರೊನಾ ಕಾಲದಲ್ಲೂ ಬಿಜೆಪಿಗೆ ಅಧಿಕಾರದ ಚಿಂತೆಯಾಗಿದೆ. ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಪಕ್ಷದಲ್ಲಿ ನಾಯಕತ್ವ ಗೊಂದಲ ಹಾಗೂ ಸಿ.ಎಂ ಸ್ಥಾನದ ಕಿತ್ತಾಟದಸಮಸ್ಯೆ ಬಗೆಹರಿಸಲು ಬಂದಿದ್ದಾರೆ. ಬಿಜೆಪಿ ನಾಯಕರ ಕಿತ್ತಾಟದ ವಿಚಾರ ಬೇಕಿಲ್ಲ. ಜನರ ಜೀವಉಳಿಸಲು ಹೋರಾಟ ಮಾಡುತ್ತಿದ್ದೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>