ಕೊಪ್ಪಳ: ‘ಪೊಲೀಸ್ ಬಲ ಬಳಸಿ ರಾಜಕೀಯ ವಿರೋಧಿಗಳನ್ನು ಹತ್ತಿಕ್ಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದ್ದು, ಬಿಜೆಪಿ ಪದಾಧಿಕಾರಿಗಳ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸುತ್ತಿದೆ’ ಎಂದು ಸಂಸದ ಪ್ರಹ್ಲಾದ ಜೋಷಿ ಆಪಾದಿಸಿದರು. ‘ಈ ಬಗ್ಗೆ ನಾವು ಪೊಲೀಸ್ ದೂರು ಪ್ರಾಧಿಕಾರಕ್ಕೂ ದೂರು ನೀಡುತ್ತೇವೆ’ ಎಂದು ಇಲ್ಲಿ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.