ಅರಕಲಗೂಡು ತಾಲ್ಲೂಕಿನ ಕಸಬಾ ಹೋಬಳಿಯ ಹರದೂರು ಗ್ರಾಮದ ಪ್ರತಾಪ್ (22) ಬಂಧಿತ ಆರೋಪಿ. ಈತ ಕಳೆದ ತಿಂಗಳು ಕೊಣನೂರಿನ ಚಾಮುಂಡೇಶ್ವರಿ ಜ್ಯುವೆಲ್ಲರಿ ಶಾಪ್ನಲ್ಲಿ ಗ್ರಾಹಕನ ಸೋಗಿನಲ್ಲಿ ಒಡವೆ ಕದ್ದು ಪರಾರಿಯಾಗಿದ್ದ. ಅಂಗಡಿ ಮಾಲೀಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ದೃಶ್ಯವನ್ನಾಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಆತ ಕದ್ದಿದ್ದ ಒಡವೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪಿಎಸ್ಐ ಸಾಗರ್ ತಿಳಿಸಿದ್ದಾರೆ.