‘ಸಿ.ಎಂ ಆದ ಕೂಡಲೇ ದೇವೇಗೌಡ ಭೇಟಿ ಮಾಡುವ ಅಗತ್ಯವೇನಿತ್ತು. ಹೊಂದಾಣಿಕೆ ರಾಜಕೀಯ ಮಾಡಿದರೆ ಸಹಿಸಲ್ಲ’ ಎಂಬ ಶಾಸಕ ಪ್ರೀತಂ ಗೌಡ ಹೇಳಿಕೆಗೆ ಭಾನುವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, 'ರಾಜ್ಯದ ಹಿತದೃಷ್ಟಿಯಿಂದ ಸಿ.ಎಂ ಬಸವರಾಜ ಬೊಮ್ಮಾಯಿ ಅವರು ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ, ಸಲಹೆ ಪಡೆದಿದ್ದಾರೆ. ಹಿರಿಯರ ಸಲಹೆ ಪಡೆಯುವುದರಲ್ಲಿ ತಪ್ಪಿಲ್ಲ. ನರೇಂದ್ರ ಮೋದಿ ಮತ್ತು ದೇವೇಗೌಡರು ದೂರವಾಣಿ ಮೂಲಕ ಹಲವು ಅಭಿವೃದ್ಧಿ ವಿಷಯ ಕುರಿತು ಚರ್ಚೆ ನಡೆಸುತ್ತಾರೆ’ ಎಂದು ಹೇಳಿದರು.