‘ಕೋವಿಡ್ ಕಾಯಿಲೆಗೆ ಅಂತ ವಿಶೇಷ ಚಿಕಿತ್ಸೆ ಏನು ನೀಡಲಿಲ್ಲ. ಆಸ್ಪತ್ರೆ ವೈದ್ಯರು, ನರ್ಸ್ಗಳು ಔಷಧ ನೀಡುತ್ತಿದ್ದರು.
ಕುಡಿಯಲು, ಸ್ನಾನಕ್ಕೆ ಬಿಸಿ ನೀರಿನ ವ್ಯವಸ್ಥೆ ಇತ್ತು. ಸಮಯಕ್ಕೆ ಸರಿಯಾಗಿ ಉಪಹಾರ, ಊಟ ಜೊತೆಗೆ ಮೊಟ್ಟೆ, ಹಾಲು, ಪೌಷ್ಟಿಕ ಆಹಾರ ಕೊಡುತ್ತಿದ್ದರು. ಸಂಪೂರ್ಣ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದ ನಂತರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿಲ್ಲ. ಕುಟುಂಬದ ಸದಸ್ಯರು ಸಹ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ ’ಎಂದು ತಿಳಿಸಿದರು.
‘ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಆಗಾಗ ಕೈಗಳನ್ನು ಸೋಪಿನಿಂದ ತೊಳೆಯಬೇಕು. ಅಂತರ ಪಾಲನೆ ಮಾಡಬೇಕು. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಗುಂಪು ಇರುವ ಕಡೆ ಸೇರಬಾರದು. ರೋಗ ಲಕ್ಷಣಗಳಿದ್ದರೆ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆದು ಆರೋಗ್ಯವಂತ ಜೀವನ ನಡೆಸಬಹುದು’ ಎಂದರು.