ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಗೋಮಟೇಶ್ ಎಂ.ರಾವಣ್ಣವರ್ ಮಾತನಾಡಿ, ‘ಕರ್ನಾಟಕದಲ್ಲಿರುವ ಎಂಜಿನಿಯರಿಂಗ್ ಕಾಲೇಜುಗಳ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ 15 ಸಾವಿರ ಪ್ರಾಜೆಕ್ಟ್ಗಳು ಅನಾವರಣಗೊಳ್ಳುತ್ತಿವೆ. ಅದರಿಂದ ಈ ದೇಶದ ಬಡವರಿಗೆ, ಕೃಷಿಕರಿಗೆ, ಸೈನಿಕರಿಗೆ ಪ್ರಯೋಜನವಾಗುವುದರ ಬಗ್ಗೆ ಯೋಚಿಸಬೇಕಾಗಿದೆ. ಪ್ರಸಕ್ತ ಸಾಲಿನ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್, ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ ಕಮ್ಯುನಿಕೇಷನ್, ಇನ್ಫಾರ್ಮೇಷನ್ ಅಂಡ್ ಟೆಕ್ನಾಲಜಿ ವಿಭಾಗದ ವಿದ್ಯಾರ್ಥಿಗಳಿಂದ 47 ಪ್ರಾಜೆಕ್ಟ್ಗಳು ಅನಾವರಣಗೊಂಡಿವೆ. ಅವುಗಳಲ್ಲಿ 4 ಪ್ರಾಜೆಕ್ಟ್ಗಳಿಗೆ ಕರ್ನಾಟಕ ಸ್ಟೇಟ್ ಕೌನ್ಸಿಲ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿಯಿಂದ ಆರ್ಥಿಕ ನೆರವು ದೊರಕಿದ್ದು, ಹಾಸನದ ಮಲ್ನಾಡ್ ಎಂಜನಿಯರಿಂಗ್ ಕಾಲೇಜಿನಲ್ಲಿ ನಡೆಯುವ ಪ್ರದರ್ಶನಕ್ಕೆ ಆಯ್ಕೆ ಆಗಿವೆ ಎಂದು ತಿಳಿಸಿದರು.