ಬಿ.ಎಂ ರಸ್ತೆ, ಎಂ.ಜಿ. ರಸ್ತೆ, ಕಸ್ತೂರಾ ಬಾ ರಸ್ತೆ, ಎನ್.ಆರ್.ವೃತ್ತ, ಹೇಮಾವತಿ ಪ್ರತಿಮೆ ಹಾಗೂ ಹಲವು ಕಡೆ ವಾಹನ ಸಂಚಾರ ವಿರಳವಾಗಿತ್ತು. ಆದರೆ ಬಡಾವಣೆಗಳಲ್ಲಿ ಜನರು ಎಂದಿನಂತೆ ಓಡಾಡುತ್ತಿದ್ದರು. ಅವಧಿ ಮುಗಿದ ಬಳಿಕ ಸಕಾರಣವಿಲ್ಲದೆ ಬಂದಿದ್ದವರ ದ್ವಿಚಕ್ರ ವಾಹನ ಮತ್ತು ಕಾರುಗಳನ್ನು ಪೊಲೀಸರು ಜಪ್ತಿ ಮಾಡಿ, ದಂಡ ವಿಧಿಸಿದರು. ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಯಿತು.