<p><strong>ಹಾಸನ:</strong> ಕೊಲೆ ಮಾಡಿ ಶವವನ್ನು ಶಾಂತಿಗ್ರಾಮ ಬಳಿಯ ರೈಲ್ವೆ ಹಳಿ ಮೇಲೆ ಎಸೆಯಲು ಬಂದಿದ್ದ ವೇಳೆ ಬೊಲೆರೊ ವಾಹನದೊಂದಿಗೇ ಉರುಳಿ ಬಿದ್ದಿದ್ದ, ಮೂವರು ಆರೋಪಿಗಳನ್ನು ಪೊಲೀಸರು ಮಂಗಳವಾರ ಮಧ್ಯಾಹ್ನ ವಶಕ್ಕೆ ಪಡೆದರು.</p>.<p>‘ವಾಹನದಲ್ಲಿದ್ದ ಶವ ಆನಂದ್ ಎಂಬುವವರದ್ದು ಎಂದು ಗುರುತಿಸಲಾಗಿದೆ. ಆನಂದ್ ಶಾಂತಿಗ್ರಾಮದ ಗಾಡೇನಹಳ್ಳಿ ಡಾಬಾದಲ್ಲಿ ಕೆಲಸ ಮಾಡುತ್ತಿದ್ದು, ಆರೋಪಿಗಳು ಡಾಬಾ ಪಕ್ಕದ ಪ್ರದೇಶದ ನಿವಾಸಿಗಳೆಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ’ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.</p>.<p>‘ಆಂಧ್ರಪ್ರದೇಶದ ಮೆಹಬೂಬನಗರದ ರಘು, ಗದಗ ಜಿಲ್ಲೆಯ ಶಶಿ, ಹೊಸಕೋಟೆಯ ರವಿಕುಮಾರ್, ಬಾಗಲಕೋಟೆಯ ರಾಜಾ ಪಾಷಾ ಬಂಧಿತರು. ಕಾರಿನಲ್ಲಿದ್ದ ಮೊದಲ ಮೂವರನ್ನು ವಶಕ್ಕೆ ಪಡೆಯಲಾಗಿದ್ದು, ಅವರ ನೀಡಿದ ಮಾಹಿತಿಯಂತೆ ರಾಜಾ ಪಾಷಾನನ್ನು ಬಂಧಿಸಲಾಗಿದೆ’ ಎಂದು ಎಸ್ಪಿ ತಿಳಿಸಿದ್ದಾರೆ.</p>.<p>ಆರೋಪಿಗಳು ಮೃತದೇಹವನ್ನು ಕಾರಿನಲ್ಲಿ ತಂದು, ರೈಲ್ವೆ ಹಳಿಯ ಮೇಲೆ ಎಸೆಯಲು ಪ್ರಯತ್ನಿಸುತ್ತಿದ್ದರು. ಆ ವೇಳೆ ಮೇಲಿನಿಂದ ಉರುಳಿದ ಕಾರು, ಶವದ ಸಮೇತ ಹಳಿಯ ಮೇಲೆ ಬಿದ್ದಿತ್ತು. ಸ್ಥಳೀಯರು ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಬಂದ ಪೊಲೀಸರು, ಕಾರಿನಲ್ಲಿ ಸಿಲುಕಿದ್ದ ಆರೋಪಿಗಳನ್ನು ವಶಕ್ಕೆ ಪಡೆದರು. ಶಾಂತಿಗ್ರಾಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಕೊಲೆ ಮಾಡಿ ಶವವನ್ನು ಶಾಂತಿಗ್ರಾಮ ಬಳಿಯ ರೈಲ್ವೆ ಹಳಿ ಮೇಲೆ ಎಸೆಯಲು ಬಂದಿದ್ದ ವೇಳೆ ಬೊಲೆರೊ ವಾಹನದೊಂದಿಗೇ ಉರುಳಿ ಬಿದ್ದಿದ್ದ, ಮೂವರು ಆರೋಪಿಗಳನ್ನು ಪೊಲೀಸರು ಮಂಗಳವಾರ ಮಧ್ಯಾಹ್ನ ವಶಕ್ಕೆ ಪಡೆದರು.</p>.<p>‘ವಾಹನದಲ್ಲಿದ್ದ ಶವ ಆನಂದ್ ಎಂಬುವವರದ್ದು ಎಂದು ಗುರುತಿಸಲಾಗಿದೆ. ಆನಂದ್ ಶಾಂತಿಗ್ರಾಮದ ಗಾಡೇನಹಳ್ಳಿ ಡಾಬಾದಲ್ಲಿ ಕೆಲಸ ಮಾಡುತ್ತಿದ್ದು, ಆರೋಪಿಗಳು ಡಾಬಾ ಪಕ್ಕದ ಪ್ರದೇಶದ ನಿವಾಸಿಗಳೆಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ’ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.</p>.<p>‘ಆಂಧ್ರಪ್ರದೇಶದ ಮೆಹಬೂಬನಗರದ ರಘು, ಗದಗ ಜಿಲ್ಲೆಯ ಶಶಿ, ಹೊಸಕೋಟೆಯ ರವಿಕುಮಾರ್, ಬಾಗಲಕೋಟೆಯ ರಾಜಾ ಪಾಷಾ ಬಂಧಿತರು. ಕಾರಿನಲ್ಲಿದ್ದ ಮೊದಲ ಮೂವರನ್ನು ವಶಕ್ಕೆ ಪಡೆಯಲಾಗಿದ್ದು, ಅವರ ನೀಡಿದ ಮಾಹಿತಿಯಂತೆ ರಾಜಾ ಪಾಷಾನನ್ನು ಬಂಧಿಸಲಾಗಿದೆ’ ಎಂದು ಎಸ್ಪಿ ತಿಳಿಸಿದ್ದಾರೆ.</p>.<p>ಆರೋಪಿಗಳು ಮೃತದೇಹವನ್ನು ಕಾರಿನಲ್ಲಿ ತಂದು, ರೈಲ್ವೆ ಹಳಿಯ ಮೇಲೆ ಎಸೆಯಲು ಪ್ರಯತ್ನಿಸುತ್ತಿದ್ದರು. ಆ ವೇಳೆ ಮೇಲಿನಿಂದ ಉರುಳಿದ ಕಾರು, ಶವದ ಸಮೇತ ಹಳಿಯ ಮೇಲೆ ಬಿದ್ದಿತ್ತು. ಸ್ಥಳೀಯರು ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಬಂದ ಪೊಲೀಸರು, ಕಾರಿನಲ್ಲಿ ಸಿಲುಕಿದ್ದ ಆರೋಪಿಗಳನ್ನು ವಶಕ್ಕೆ ಪಡೆದರು. ಶಾಂತಿಗ್ರಾಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>