‘ವಿಕ್ರಂ ಸಿಂಹ ಪ್ರಕರಣದಲ್ಲಿ ಮುಖ್ಯಮಂತ್ರಿಯೇ ಷಡ್ಯಂತ್ರ ರೂಪಿಸಿದ್ದಾರೆ’ ಎಂಬ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಬಹಳ ಬಾಲಿಶವಾದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಯಾರ ಪರ ಅಥವಾ ಯಾರ ವಿರುದ್ಧ ಮಾತನಾಡುತ್ತಾರೆ ಎಂಬುದು ಅವರಿಗೆ ಸೇರಿದ್ದು. ಏಕೆಂದರೆ ಇದೇ ದೇವೇಗೌಡರು, ಕುಮಾರಸ್ವಾಮಿ, ರೇವಣ್ಣ ಯಾವ್ಯಾವ ಸಂದರ್ಭದಲ್ಲಿ ಯಾರ್ಯಾರ ವಿರುದ್ಧ ಹೇಗೆ ಟೀಕೆ ಮಾಡಿದ್ದಾರೆ ಎಂಬುದು ಯೂಟ್ಯೂಬ್ನಲ್ಲಿ ಸಿಗುತ್ತದೆ ನೋಡಿಕೊಳ್ಳಿ’ ಎಂದು ಹೇಳಿದರು.